Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...