Homeಮುಖಪುಟಲೋಕಸಭಾ ಚುನಾವಣೆ 2024: "ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು.."; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ...

ಲೋಕಸಭಾ ಚುನಾವಣೆ 2024: “ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು..”; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್‌ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫಕ್ಕೀರೇಶ್ವರ ಮಠದ ಪೀಠಾಧ್ಯಕ್ಷ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, “ಧಾರವಾಡ ಕ್ಷೇತ್ರದ ಸಂಸದ (ಬಿಜೆಪಿಯ ಪ್ರಲ್ಹಾದ ಜೋಶಿ) ಬಗ್ಗೆ ಕರ್ನಾಟಕದ ಮಠಾಧೀಶರು ಚರ್ಚೆ ನಡೆಸಿದ್ದಾರೆ, ಸಂಸದರನ್ನು ಬದಲಾಯಿಸಲು ಎಲ್ಲ ಮಠಾಧೀಶರು ನಿರ್ಧರಿಸಿದ್ದಾರೆ. ಇದಕ್ಕಾಗಿ ನಾಲ್ಕು ದಿನಗಳ ಕಾಲಾವಕಾಶ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಕಾಯುತ್ತೇವೆ, ಈ 4 ದಿನಗಳಲ್ಲಿ ಹೈಕಮಾಂಡ್ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ” ಎಂದು ಹೇಳಿದ್ದಾರೆ.

“ಆ ನಂತರ, ಏಪ್ರಿಲ್ 2 ರಂದು ನಾವು ಒಟ್ಟಾಗಿ ಬಂದು ನಮ್ಮ ನಿರ್ಧಾರದ ಬಗ್ಗೆ ಹೇಳುತ್ತೇವೆ; ನಾವು ವ್ಯಕ್ತಿಯ ಜಾತಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ಆ ವ್ಯಕ್ತಿಯ ವ್ಯಕ್ತಿತ್ವ ನಿಜವಾಗಿಯೂ ಕೆಟ್ಟದು. ಲಿಂಗಾಯತ, ದಲಿತ, ಹಿಂದುಳಿದ ಪ್ರತಿಯೊಂದು ಸಮುದಾಯವೂ ಅವರ ಬಗ್ಗೆ ಅತೃಪ್ತಿ ಹೊಂದಿದೆ. ಹೀಗಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾವು ಏಪ್ರಿಲ್ 2 ರವರೆಗೆ ಕಾಯಬೇಕಾಗಿದೆ. ನಾವು ಪಕ್ಷದ ಬಗ್ಗೆ ಮಾತನಾಡುತ್ತಿಲ್ಲ, ನಾವು ಪ್ರಲ್ಹಾದ್ ಜೋಶಿ ಮತ್ತು ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಉತ್ತರದಂತೆ, ದಕ್ಷಿಣದ ಸ್ವಾಮೀಜಿಗಳು ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು” ಎಂದು ಹೇಳಿದ ಅವರು, ಮಠಾಧಿಶರೊಬ್ಬರಿಗೆ ಟಿಕೆಟ್ ನೀಡಬೇಕು ಎಂಬ ಪರೋಕ್ಷ ಬೇಡಿಕೆ ಇಟ್ಟಿದ್ದಾರೆ. ಧಾರವಾಡ ಭಾಗದಲ್ಲಿ ಲಿಂಗಾಯತರು ಹೆಚ್ಚಿನ ಮತದಾರರಿದ್ದರೆ, ಜೋಶಿ ಬ್ರಾಹ್ಮಣರಾಗಿದ್ದಾರೆ.

ಶ್ರೀಗಳ ಬೇಡಿಕೆಗೆ ಪ್ರತಿಕ್ರಿಯಿಸಿರುವ ಜೋಶಿ, “ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ನನಗೆ ಅಪಾರ ಗೌರವವಿದೆ, ಶ್ರೀಗಳು ಮತ್ತು ಮಠದೊಂದಿಗೆ 30 ವರ್ಷಗಳ ಒಡನಾಟವಿದೆ. ಅವರ ಟೀಕೆಗಳನ್ನು ನಾನು ಆಶೀರ್ವಾದ ಎಂದು ಪರಿಗಣಿಸುತ್ತೇನೆ. ತಪ್ಪು ತಿಳುವಳಿಕೆ ಇದ್ದರೆ ಮುಂದಿನ ದಿನಗಳಲ್ಲಿ ಅದನ್ನು ಸ್ಪಷ್ಟಪಡಿಸಲು ಪ್ರಯತ್ನಿಸುತ್ತೇನೆ” ಎಂದು ಸಚಿವರು ಹೇಳಿದರು.

ಜೋಶಿ ಅವರನ್ನು ಅಭ್ಯರ್ಥಿಯನ್ನಾಗಿ ಬದಲಾಯಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ. “ಅವರು ಹಿರಿಯ ನಾಯಕರಾಗಿದ್ದಾರೆ ಮತ್ತು ಭಾರಿ ಅಂತರದಿಂದ ಗೆಲ್ಲುತ್ತಾರೆ” ಎಂದು ಲಿಂಗಾಯತ ಬಿಜೆಪಿ ನಾಯಕ ಹೇಳಿದ್ದಾರೆ. ಅವರು ವೈಯಕ್ತಿಕವಾಗಿ ಮಠಾಧೀಶರೊಂದಿಗೆ ಮಾತನಾಡುತ್ತಾರೆ; ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುತ್ತಾರೆ” ಎಂದರು.

ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕ್ರಮವಾಗಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...