Homeಮುಖಪುಟಲೋಕಸಭಾ ಚುನಾವಣೆ 2024: "ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು.."; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ...

ಲೋಕಸಭಾ ಚುನಾವಣೆ 2024: “ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು..”; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್‌ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫಕ್ಕೀರೇಶ್ವರ ಮಠದ ಪೀಠಾಧ್ಯಕ್ಷ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, “ಧಾರವಾಡ ಕ್ಷೇತ್ರದ ಸಂಸದ (ಬಿಜೆಪಿಯ ಪ್ರಲ್ಹಾದ ಜೋಶಿ) ಬಗ್ಗೆ ಕರ್ನಾಟಕದ ಮಠಾಧೀಶರು ಚರ್ಚೆ ನಡೆಸಿದ್ದಾರೆ, ಸಂಸದರನ್ನು ಬದಲಾಯಿಸಲು ಎಲ್ಲ ಮಠಾಧೀಶರು ನಿರ್ಧರಿಸಿದ್ದಾರೆ. ಇದಕ್ಕಾಗಿ ನಾಲ್ಕು ದಿನಗಳ ಕಾಲಾವಕಾಶ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಕಾಯುತ್ತೇವೆ, ಈ 4 ದಿನಗಳಲ್ಲಿ ಹೈಕಮಾಂಡ್ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ” ಎಂದು ಹೇಳಿದ್ದಾರೆ.

“ಆ ನಂತರ, ಏಪ್ರಿಲ್ 2 ರಂದು ನಾವು ಒಟ್ಟಾಗಿ ಬಂದು ನಮ್ಮ ನಿರ್ಧಾರದ ಬಗ್ಗೆ ಹೇಳುತ್ತೇವೆ; ನಾವು ವ್ಯಕ್ತಿಯ ಜಾತಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ಆ ವ್ಯಕ್ತಿಯ ವ್ಯಕ್ತಿತ್ವ ನಿಜವಾಗಿಯೂ ಕೆಟ್ಟದು. ಲಿಂಗಾಯತ, ದಲಿತ, ಹಿಂದುಳಿದ ಪ್ರತಿಯೊಂದು ಸಮುದಾಯವೂ ಅವರ ಬಗ್ಗೆ ಅತೃಪ್ತಿ ಹೊಂದಿದೆ. ಹೀಗಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾವು ಏಪ್ರಿಲ್ 2 ರವರೆಗೆ ಕಾಯಬೇಕಾಗಿದೆ. ನಾವು ಪಕ್ಷದ ಬಗ್ಗೆ ಮಾತನಾಡುತ್ತಿಲ್ಲ, ನಾವು ಪ್ರಲ್ಹಾದ್ ಜೋಶಿ ಮತ್ತು ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಉತ್ತರದಂತೆ, ದಕ್ಷಿಣದ ಸ್ವಾಮೀಜಿಗಳು ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು” ಎಂದು ಹೇಳಿದ ಅವರು, ಮಠಾಧಿಶರೊಬ್ಬರಿಗೆ ಟಿಕೆಟ್ ನೀಡಬೇಕು ಎಂಬ ಪರೋಕ್ಷ ಬೇಡಿಕೆ ಇಟ್ಟಿದ್ದಾರೆ. ಧಾರವಾಡ ಭಾಗದಲ್ಲಿ ಲಿಂಗಾಯತರು ಹೆಚ್ಚಿನ ಮತದಾರರಿದ್ದರೆ, ಜೋಶಿ ಬ್ರಾಹ್ಮಣರಾಗಿದ್ದಾರೆ.

ಶ್ರೀಗಳ ಬೇಡಿಕೆಗೆ ಪ್ರತಿಕ್ರಿಯಿಸಿರುವ ಜೋಶಿ, “ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ನನಗೆ ಅಪಾರ ಗೌರವವಿದೆ, ಶ್ರೀಗಳು ಮತ್ತು ಮಠದೊಂದಿಗೆ 30 ವರ್ಷಗಳ ಒಡನಾಟವಿದೆ. ಅವರ ಟೀಕೆಗಳನ್ನು ನಾನು ಆಶೀರ್ವಾದ ಎಂದು ಪರಿಗಣಿಸುತ್ತೇನೆ. ತಪ್ಪು ತಿಳುವಳಿಕೆ ಇದ್ದರೆ ಮುಂದಿನ ದಿನಗಳಲ್ಲಿ ಅದನ್ನು ಸ್ಪಷ್ಟಪಡಿಸಲು ಪ್ರಯತ್ನಿಸುತ್ತೇನೆ” ಎಂದು ಸಚಿವರು ಹೇಳಿದರು.

ಜೋಶಿ ಅವರನ್ನು ಅಭ್ಯರ್ಥಿಯನ್ನಾಗಿ ಬದಲಾಯಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ. “ಅವರು ಹಿರಿಯ ನಾಯಕರಾಗಿದ್ದಾರೆ ಮತ್ತು ಭಾರಿ ಅಂತರದಿಂದ ಗೆಲ್ಲುತ್ತಾರೆ” ಎಂದು ಲಿಂಗಾಯತ ಬಿಜೆಪಿ ನಾಯಕ ಹೇಳಿದ್ದಾರೆ. ಅವರು ವೈಯಕ್ತಿಕವಾಗಿ ಮಠಾಧೀಶರೊಂದಿಗೆ ಮಾತನಾಡುತ್ತಾರೆ; ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುತ್ತಾರೆ” ಎಂದರು.

ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕ್ರಮವಾಗಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...