Homeಮುಖಪುಟ'ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..' ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

- Advertisement -
- Advertisement -

ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಪ್ರತಿಭಟನಾನಿತರ ವಿದ್ಯಾರ್ಥಿಗಳ ಗುಂಪೊಂದುಮ ಜಾತಿ ಗಣತಿಗೆ ಆಗ್ರಹಿಸಿದ್ದು, “ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕುಗಿರುವ ವಿಡಿಯೋಗಳು ಜಾಳತಾಣದಲ್ಲಿ ವೈರಲ್ ಆಗಿವೆ.

ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜಾತಿವಿರೋಧಿ ಘೋಷಣೆಗಳನ್ನು ಕೂಗಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ವಿಶ್ವವಿದ್ಯಾನಿಲಯವು ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಆದರೆ, ತಾರತಮ್ಯ ವಿರೋಧಿ ಸೆಲ್‌ ಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ಗುಂಪು ಒಂದು ವಾರದದಿಂದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರತಿಭಟಿಸಿರುವ ವಿದ್ಯಾರ್ಥಿಗಳು, “ನಮಗೆ ಜಾತಿ ಗಣತಿ, ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಹಿನ್ನೆಲೆಯ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಪ್ರತಿಪಾದಿಸುವ ಸ್ವತಂತ್ರ ವಿದ್ಯಾರ್ಥಿ ಸಂಘಟನೆಯಾದ ‘ಸಾಮಾಜಿಕ ನ್ಯಾಯ ವೇದಿಕೆ’ಯ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತ ಮಂಡಳಿಯು ಬುಧವಾರ ಪ್ರಕಟಣೆ ಹೊರಡಿಸಿದ್ದು, “ಅಶೋಕ ವಿಶ್ವವಿದ್ಯಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹುರುಪಿನ ಚರ್ಚೆಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಆದರೆ, ಇದು ಪರಸ್ಪರ ಗೌರವಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ವಿಶ್ವವಿದ್ಯಾನಿಲಯವು ಯಾವುದೇ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ದ್ವೇಷದ ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಅಶೋಕ ವಿಶ್ವವಿದ್ಯಾನಿಲಯದ ಮಾರ್ಗಸೂಚಿಗಳು ಅಂತಹ ಅಭಿವ್ಯಕ್ತಿ ಸ್ವಾತಂತ್ರ್ಯವು ಅಪರಿಮಿತವಲ್ಲ. ಇತರರ ಹಕ್ಕುಗಳು ಮತ್ತು ಸಂವೇದನೆಗಳಿಗೆ ಗೌರವವನ್ನು ನೀಡುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಅಶೋಕದಲ್ಲಿ ಸಮುದಾಯದ ಮನೋಭಾವವನ್ನು ಕಾಪಾಡಲು ಇದು ಅತ್ಯಗತ್ಯ” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವಾತಾವರಣವನ್ನು ಪ್ರತಿಕೂಲಗೊಳಿಸುವ ಕ್ರಮಗಳು ಶಿಸ್ತು ಕ್ರಮಕ್ಕೆ ಒಳಪಡುತ್ತವೆ ಎಂದು ವಿಶ್ವವಿದ್ಯಾನಿಲಯವು ಎಚ್ಚರಿಸಿದೆ. “ಕ್ಯಾಂಪಸ್‌ನ ವಾತಾವರಣವನ್ನು ಬೆದರಿಸುವ,ವ್ಯಕ್ತಿಗಳು ಅಥವಾ ಗುಂಪುಗಳಿಗೆ ಪ್ರತಿಕೂಲವಾಗಿಸುವ ಕ್ರಮಗಳನ್ನು ಗಂಭೀರ ಅಪರಾಧಗಳೆಂದು ಪರಿಗಣಿಸಲಾಗುತ್ತದೆ. ವಿಶ್ವವಿದ್ಯಾಲಯದ ಶಿಸ್ತಿನ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ. ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಹೇಳಿದೆ.

ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ವಿಭಾಗವು ಇತ್ತೀಚೆಗೆ ಕ್ಯಾಂಪಸ್‌ನಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನಂತರ, ವಿಶ್ವವಿದ್ಯಾನಿಲಯವು ಮಂಗಳವಾರ ಸೇರ್ಪಡೆ ಮತ್ತು ವೈವಿಧ್ಯತೆಯ ನೀತಿಗಳನ್ನು ಸುಧಾರಿಸಲು ‘ಸಮಾನ ಅವಕಾಶ’ ಕೋಶವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಶ್ವವಿದ್ಯಾನಿಲಯವು ಮಂಗಳವಾರ ಪ್ರಕಟಣೆಯಲ್ಲಿ, “ಸಮಾನ ಅವಕಾಶ ಕೋಶವನ್ನು ರಚಿಸುವಲ್ಲಿ ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ, ಅವರ ಪಾತ್ರವು ಸೇರ್ಪಡೆ, ವೈವಿಧ್ಯತೆ ಮತ್ತು ಸೂಕ್ಷ್ಮತೆಯ ಕುರಿತು ಚಾಲ್ತಿಯಲ್ಲಿರುವ ಅಭ್ಯಾಸಗಳು ಮತ್ತು ನೀತಿಗಳನ್ನು ಸುಧಾರಿಸಲು ವಿಶ್ವವಿದ್ಯಾಲಯಕ್ಕೆ ಶಿಫಾರಸುಗಳನ್ನು ಮಾಡುವುದನ್ನು ಒಳಗೊಂಡಿರುತ್ತದೆ. ಇದು ಅಧ್ಯಾಪಕರು, ಸಿಬ್ಬಂದಿ ಮತ್ತು ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುತ್ತದೆ ಮತ್ತು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ” ಎಂದು ವಿವರಿಸಿದೆ.

“ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಲು ಮೂರು ತಿಂಗಳ ಹಿಂದೆ ಉಪಕುಲಪತಿಯೊಂದಿಗೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಪ್ರಕಟಣೆಗೆ ತಿಳಿಸಿದರು.

“ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ನೌಕರರನ್ನು ಒಳಗೊಂಡ ಸಮಗ್ರ ಮತ್ತು ಅನಾಮಧೇಯ ವಾರ್ಷಿಕ ಜಾತಿ ಗಣತಿ ಸೇರಿದಂತೆ ಮೂರು ಬೇಡಿಕೆಗಳನ್ನು ಎತ್ತಿ ವಿದ್ಯಾರ್ಥಿಗಳು ಪ್ರತಿಭಟಿಸಿದರು ಎಂದು ವರದಿಯಾಗಿದೆ. ಅಂಬೇಡ್ಕರ್ ಸ್ಮಾರಕ ಉಪನ್ಯಾಸ ಎಂಬ ವಾರ್ಷಿಕ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯವು ಸಾಮಾಜಿಕ ನ್ಯಾಯದ ಕುರಿತು ಮಾತನಾಡಲು ಅಂಚಿನಲ್ಲಿರುವ ಸಮುದಾಯಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಪ್ಯಾನಲಿಸ್ಟ್‌ಗಳನ್ನು ಆಹ್ವಾನಿಸುತ್ತದೆ; ಶುಲ್ಕ ಪಾವತಿ ನೀತಿಯಲ್ಲಿನ ಬದಲಾವಣೆಯು ಗುರುತಿನ ಚೀಟಿಗಳನ್ನು ನಿರ್ಬಂಧಿಸುತ್ತದೆ. ವಿದ್ಯಾರ್ಥಿಗಳು ಶುಲ್ಕವನ್ನು ತಡವಾಗಿ ಪಾವತಿಸಿದರೆ ಗೂಗಲ್ ಕ್ಲಾಸ್‌ರೂಮ್ ಮತ್ತು ಮೆಸ್ ಊಟದಂತಹ ಸೌಲಭ್ಯಗಳಿಂದ ಅವರಿಗೆ ನಿರ್ಬಂಧ ಹೇರಲಾಗುತ್ತದೆ. ಇದು ಅಂಚಿನಲ್ಲಿರುವ ಸಮುದಾಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿ ಗುಂಪಿನ ಪ್ರಕಟಣೆ ತಿಳಿಸಿದೆ.

2014 ರಲ್ಲಿ ಸ್ಥಾಪನೆಯಾದ ಅಶೋಕ ವಿಶ್ವವಿದ್ಯಾನಿಲಯವು ಅದರ ಅಧ್ಯಾಪಕರ ರಾಜಕೀಯ ದೃಷ್ಟಿಕೋನಗಳ ಬಗ್ಗೆ ಈ ಹಿಂದೆ ಸುದ್ದಿಯಾಗಿತ್ತು. ಮಾರ್ಚ್ 2021 ರಲ್ಲಿ ಪ್ರೊಫೆಸರ್‌ಗಳಾದ ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅವರ ನಿರ್ಗಮನ ಭಾರೀ ಸದ್ದು ಮಾಡಿತ್ತು.

ಇದನ್ನೂ ಓದಿ; ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....