Homeಮುಖಪುಟನ್ಯಾಯಾಂಗದ ಸಮಗ್ರತೆಗೆ ಧಕ್ಕೆ: 600ಕ್ಕೂ ಹೆಚ್ಚು ವಕೀಲರಿಂದ ಸಿಜೆಐಗೆ ಪತ್ರ

ನ್ಯಾಯಾಂಗದ ಸಮಗ್ರತೆಗೆ ಧಕ್ಕೆ: 600ಕ್ಕೂ ಹೆಚ್ಚು ವಕೀಲರಿಂದ ಸಿಜೆಐಗೆ ಪತ್ರ

- Advertisement -
- Advertisement -

ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿ  600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪಟ್ಟಭದ್ರ ಹಿತಾಸಕ್ತಿಗಳನ್ನು ಹೊಂದಿರುವ ಗುಂಪು ನ್ಯಾಯಾಂಗದ ಮೇಲೆ ಒತ್ತಡ ಹೇರಲು, ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಮತ್ತು ಕ್ಷುಲ್ಲಕ ತರ್ಕದ ಆಧಾರದ ಮೇಲೆ ನ್ಯಾಯಾಲಯಗಳನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ ದೇಶದ ವಿವಿಧ ಭಾಗಗಳ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು ನ್ಯಾಯಾಂಗದ ಸಮಗ್ರತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದಲ್ಲದ ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವಂತಹ ಗುಂಪು ನ್ಯಾಯಾಂಗ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರುವುದು, ನ್ಯಾಯಾಲಯದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಮತ್ತು ಆಧಾರರಹಿತ ಆರೋಪಗಳ ಮೂಲಕ ನ್ಯಾಯಾಂಗದ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಕೀಲರು ಖಂಡಿಸಿದ್ದಾರೆ.

ಪತ್ರದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ತಂತ್ರಗಳು ವಿಶೇಷವಾಗಿ ಸ್ಪಷ್ಟವಾಗಿ ಕಂಡುಬರುತ್ತವೆ, ಈ ಪ್ರಕರಣಗಳಲ್ಲಿ ನ್ಯಾಯಾಂಗವನ್ನು ಅಪಖ್ಯಾತಿ ಮಾಡುವ ಪ್ರಯತ್ನಗಳು ಹೆಚ್ಚು ಸ್ಪಷ್ಟವಾಗಿ ಕಂಡುಬರುತ್ತವೆ. ನ್ಯಾಯಾಲಯಗಳ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ನಿರೂಪಣೆಗಳನ್ನು ಮಾಡಲಾಗುತ್ತದೆ. ಇಂತಹ ನಿರೂಪಣೆಗಳು ನ್ಯಾಯಾಂಗದ ಫಲಿತಾಂಶಗಳ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಉದ್ದೇಶವನ್ನು ಹೊಂದಿವೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

ಅವರು ನಮ್ಮ ನ್ಯಾಯಾಲಯಗಳನ್ನು ಕಾನೂನಿನ ನಿಯಮವಿಲ್ಲದ ದೇಶಗಳಿಗೆ ಹೋಲಿಸುವ ಮಟ್ಟಕ್ಕೆ ಇಳಿದಿದ್ದಾರೆ. ಇವು ಕೇವಲ ಟೀಕೆಗಳಲ್ಲ, ಅವು ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಹಾಳುಮಾಡಲು ಮತ್ತು ನಮ್ಮ ಕಾನೂನುಗಳ ನ್ಯಾಯೋಚಿತ ಅನ್ವಯಕ್ಕೆ ಬೆದರಿಕೆಯನ್ನುಂಟುಮಾಡುವ ನೇರ ದಾಳಿಗಳಾಗಿವೆ ಎಂದು ಹೇಳಿದ್ದಾರೆ.

ರಾಜಕಾರಣಿಗಳು ತಮ್ಮ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾನೂನು ವಿಷಯಗಳ ಮೇಲೆ ನಿಲುವುಗಳನ್ನು ಬದಲಾಯಿಸುವ, ಆ ಮೂಲಕ ಕಾನೂನು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಹಾಳು ಮಾಡುವ ರಾಜಕೀಯ ವಿದ್ಯಮಾನದ ಬಗ್ಗೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜಕಾರಣಿಗಳು ಯಾರನ್ನಾದರೂ ಭ್ರಷ್ಟಾಚಾರದ ಆರೋಪ ಮಾಡಿ ನಂತರ ನ್ಯಾಯಾಲಯದಲ್ಲಿ ಅವರನ್ನು ಸಮರ್ಥಿಸಿಕೊಳ್ಳುವುದನ್ನು ನೋಡುವುದು ವಿಚಿತ್ರವಾಗಿದೆ. ನ್ಯಾಯಾಲಯದ ತೀರ್ಪು ಅವರು ನಿರೀಕ್ಷಿಸಿದಂತೆ ಹೊರ ಬರದಿದ್ದರೆ ಅವರು ನ್ಯಾಯಾಲಯದ ಒಳಗೆ ಮತ್ತು ಮಾಧ್ಯಮಗಳ ಮೂಲಕ ತ್ವರಿತವಾಗಿ ನ್ಯಾಯಾಲಯಗಳನ್ನು ಟೀಕಿಸುತ್ತಾರೆ. ಈ ದ್ವಿಮುಖ ನಡವಳಿಕೆಯು ನಮ್ಮ ಕಾನೂನು ವ್ಯವಸ್ಥೆಯ ಬಗ್ಗೆ ಸಾಮಾನ್ಯ ವ್ಯಕ್ತಿಗೆ ಇರಬೇಕಾದ ಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಕೆಲವರು ತಮ್ಮ ಪ್ರಕರಣಗಳಲ್ಲಿ ನ್ಯಾಯಾಧೀಶರು ಯಾರೆಂಬುದರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಮತ್ತು ನಿರ್ದಿಷ್ಟ ರೀತಿಯಲ್ಲಿ ತೀರ್ಪು ನೀಡಲು ನ್ಯಾಯಾಧೀಶರ ಮೇಲೆ ಒತ್ತಡ ಹೇರಲು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ರಾಷ್ಟ್ರವು ಚುನಾವಣೆಗೆ ಹೋಗಲು ಸಿದ್ಧವಾಗಿದೆ.  ಬಾಹ್ಯ ಒತ್ತಡಗಳಿಂದ ನ್ಯಾಯಾಂಗವನ್ನು ರಕ್ಷಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಕೀಲರು ಸಿಜೆಐಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...