Homeಫ್ಯಾಕ್ಟ್‌ಚೆಕ್Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌...

Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

- Advertisement -
- Advertisement -

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಹೆಸರಿನ ಬ್ಯಾನರ್ ಮುಂದೆ ಕುಳಿತು ನಾಲ್ಕೈದು ಮಂದಿ ಸುದ್ದಿಗೋಷ್ಠಿ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘East Bangalore Congress Sevadal’ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು, ಮೋದಿಯನ್ನು ತೊಲಗಿಸಬೇಕು: ಆರ್.ಎಸ್.ಎಸ್” ಎಂದು ಬರೆದುಕೊಳ್ಳಲಾಗಿದೆ.

ಇತರ ಕೆಲ ಎಕ್ಸ್ ಬಳಕೆದಾರರು ಕೂಡ ಸುದ್ದಿಗೋಷ್ಠಿಯ ವಿಡಿಯೋ ಹಂಚಿಕೊಂಡು, ಆರ್‌ ಎಸ್‌ ಎಸ್‌ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿದುಕೊಳ್ಳುವ ಸಲುವಾಗಿ ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಅನೇಕ ಸುದ್ದಿ ವೆಬ್‌ಸೈಟ್‌ಗಳು ಈ ಕುರಿತು ವರದಿ ಮಾಡಿರುವುದು ಕಂಡು ಬಂದಿದೆ.

‘The Quint’ ವೆಬ್‌ಸೈಟ್‌ ವರದಿಯ ಪ್ರಕಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಆರ್‌ಎಸ್‌) ಎಂಬ ಹೆಸರಿನ ಸಂಘಟನೆ ಸುದ್ದಿಗೋಷ್ಠಿ ನಡೆಸಿದೆ. ಆದರೆ, ಇದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ.

ಸಾಮಾಜಿಕ ಕಾರ್ಯಕರ್ತ ಮತ್ತು ಮಾಜಿ ಕಾರ್ಪೊರೇಟರ್ ಜನಾರ್ದನ್ ಮೂನ್ ಅವರು ನಾಗಪುರದಲ್ಲಿ ಆರ್‌ಎಸ್‌ಎಸ್ ಎಂಬ ಹೆಸರಿನ ಮತ್ತೊಂದು ಸಂಘಟನೆಯನ್ನು ಪ್ರಾರಂಭಿಸಿದ್ದಾರೆ. ಅವರು ತಮ್ಮ ಸಂಘಟನೆಯನ್ನು ಆರ್‌ಎಸ್‌ಎಸ್ ಹೆಸರಿನಲ್ಲಿ ನೋಂದಾಯಿಸಲು ಪ್ರಯತ್ನಿಸಿದ್ದಾರೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆ ಅಲ್ಲ. ಹಾಗಾಗಿ, ಆ ಹೆಸರನ್ನು ಯಾರು ಬೇಕಾದರು ಬಳಸಬಹುದು ಎಂಬುವುದು ಜನಾರ್ದನ್ ಮೂನ್ ಅವರ ವಾದವಾಗಿದೆ.

ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ನಾವು ಸುದ್ದಿಗೋಷ್ಠಿಯ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬ್‌ ಚಾನೆಲ್‌ ಆವಾಝ್ ಇಂಡಿಯಾವನ್ನು ಹುಡುಕಿದ್ದೇವೆ. ಈ ವೇಳೆ ಆ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಚ್ 24,2024ರಂದು ಸುದ್ದಿಗೋಷ್ಠಿಯ ಸಂಪೂರ್ಣ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ “ನಾಗ್ಪುರ: ಆರ್‌ಎಸ್‌ಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಜನಾರ್ದನ್ ಮೂನ್, ಅಬ್ದುಲ್ ಪಾಷಾ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದಾರೆ” ಎಂದು ಶೀರ್ಷಿಕೆ ಕೊಡಲಾಗಿದೆ.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ ” ಆರ್‌ಎಸ್‌ಎಸ್‌ ಇಂಡಿಯಾ ಮೈತ್ರಿಕೂಟವನ್ನು ಹೇಗೆ ಬೆಂಬಲಿಸಿತು ಎಂದು ಆಶ್ಚರ್ಯಪಡುವವರಿಗೆ, ದೇಶದಲ್ಲಿ ಎರಡು ಆರ್‌ಎಸ್‌ಎಸ್‌ಗಳಿವೆ. ಒಂದು ಕಾಂಗ್ರೆಸ್ ಅನ್ನು ಬೆಂಬಲಿಸಿದ ಆನ್‌ಲೈನ್ ನೋಂದಣಿಯದ್ದು. ಇನ್ನೊಂದು ನೋಂದಣಿಯಾಗದ್ದು, ಅದರ ಸರ ಸಂಘಚಾಲಕ ಮೋಹನ್ ಭಾಗವತ್. ದಯವಿಟ್ಟು ಎಚ್ಚರಿಕೆ ವಹಿಸಿ ಗೊಂದಲಕ್ಕೊಳಗಾಗಬೇಡಿ” ಎಂದು ಬರೆಯಲಾಗಿದೆ.

ನಾವು ಜನಾರ್ದನ್ ಮೂನ್ ಅವರ ಹೆಸರನ್ನು ಗೂಗಲ್ ಸರ್ಚ್ ಮಾಡಿದಾಗ ಅವರು ಪ್ರತ್ಯೇಕ ಆರ್‌ಎಸ್‌ಎಸ್‌ ಎಂಬ ಸಂಘಟನೆ ಹೊಂದಿರುವುದು ಗೊತ್ತಾಗಿದೆ. ಜನಾರ್ದನ್ ಅವರು ತಮ್ಮ ಅರ್‌ಎಸ್‌ಎಸ್‌ ಸಂಘಟನೆಯನ್ನು ನೋಂದಣಿ ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸುವ ಬಗ್ಗೆ ಜನವರಿ 22, 2019ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿಯೊಂದು ಪ್ರಕಟಗೊಂಡಿರುವುದು ಲಭ್ಯವಾಗಿದೆ.

ಸುದ್ದಿ : ಆರ್‌ಎಸ್‌ಎಸ್‌ ಸಂಘಟನೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಥವಾ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಸತ್ಯ : ದೇಶದಲ್ಲಿ ಎರಡು ಆರ್‌ಎಸ್‌ಎಸ್‌ ಸಂಘಟನೆಯಿದೆ. ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಕಾಂಗ್ರೆಸ್‌ ಬೆಂಬಲಿಸಿಲ್ಲ. ಜನಾರ್ದನ್ ಮೂನ್ ಎಂಬವರ ನೇತೃತ್ವದಲ್ಲಿರುವ ಮತ್ತೊಂದು ಆರ್‌ಎಸ್‌ಎಸ್‌ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ.

ಇದನ್ನೂ ಓದಿ : Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...