Homeಕರ್ನಾಟಕಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

ಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

- Advertisement -
- Advertisement -

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಸುರೇಶ್ ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ’ ಎಂದರು.

‘ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ’ ಎಂದರು.

‘ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ’ ಎಂದರು.

‘ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ’ ಎಂದು ವಿವರಿಸಿದರು.

‘ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ, ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ’ ಎಂದು ಹೇಳಿದರು.

‘ಹೀಗಾಗಿ, ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೋ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ’ ಎಂದರು.

‘ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ’ ಎಂದು ಸವಾಲು ಹಾಕಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ , ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ; ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...