HomeUncategorizedಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

ಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

- Advertisement -
- Advertisement -

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ವಿವಿದೆಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅವರದ್ದೇ ಪಕ್ಷದ ಕಾರ್ಯಕರ್ತರು ತಿರುಗಿ ಬೀಳುತ್ತಿದ್ದಾರೆ. ಇದರಿಂದ ಬಹಿರಂಗ ಸಭೆಗಳಲ್ಲಿ ಅಭ್ಯರ್ಥಿಗಳು ಮುಜುಗರಕ್ಕೊಳಗಾಗುವ ಪರಿಸ್ಥಿತಿ ಎದುರಾಗಿದೆ.

ಗುರುವಾರ(ಮಾ.28) ಶಾಂತಿನಗರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ ಮೋಹನ್ ವಿರುದ್ದ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮನ್ನು ಮೂರಿ ಬಾರಿ ಸಂಸದರನ್ನಾಗಿ ಮಾಡಿ ಲೋಕಸಭೆಗೆ ಕಳಿಸಿದ್ದೇವೆ, ನಮ್ಮ ಪ್ರದೇಶಕ್ಕೆ ಏನು ಮಾಡಿದ್ದೀರಾ? ನಿಮ್ಮ ಸಾಧನೆ ಏನು? ನಾವು ಮೋದಿಯವರನ್ನು ನೋಡಿ ನಿಮಗೆ ಓಟು ಕೊಟ್ಟೆವು. ಆದರೆ, ನೀವು ನಮಗೆ ಏನು ಮಾಡಿದ್ದೀರಾ?” ಎಂದು ಬಿಜೆಪಿ ಕಾರ್ಯಕರ್ತರು ಕೇಳಿದರು.

ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ಉಲ್ಲೇಖಿಸುತ್ತಾ ಇದಕ್ಕೆ ಸಮಜಾಯಿಷಿ ನೀಡಲು ಸಂಸದ ಪಿ.ಸಿ ಮೋಹನ್ ಯತ್ನಿಸಿದರು. ಆದರೆ, ಕಾರ್ಯಕರ್ತರು ಸುಮ್ಮನಾಗದೆ ಧಿಕ್ಕಾರ ಕೂಗಿದರು. ಈ ನಡುವೆ ಪಿ.ಸಿ ಮೋಹನ್ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕೆ ಇಳಿದರು. ಇದರಿಂದ ಜಗಳ ತಾರಕಕ್ಕೇರಿತು. ಪಿ.ಸಿ ಮೋಹನ್ ಬಿಜೆಪಿ ಕಾರ್ಯಕರ್ತರನ್ನು ಎಷ್ಟೇ ಸಮಾಧಾನಿಸಲು ಯತ್ನಿಸಿದರಾದರೂ, ಅವರು ಸಮಾಧಾನಗೊಳ್ಳಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ಥಳದಿಂದ ತೆರಳಿದರು.

4ನೇ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಪಿ.ಸಿ ಮೋಹನ್

ಅಲ್ಪಸಂಖ್ಯಾತರೇ ಹೆಚ್ಚಿರುವ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 4ನೇ ಬಾರಿ ಪಿ.ಸಿ ಮೋಹನ್ ಕಣಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಹೃದಯ ಭಾಗದ 8 ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾದಾಗಿನಿಂದ ಈ ಕ್ಷೇತ್ರದಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳನ್ನು ಬಿಜೆಪಿ ಗೆದ್ದುಕೊಂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5 ಮತ್ತು ಬಿಜೆಪಿ 3ರಲ್ಲಿ ಗೆಲುವು ಸಾಧಿಸಿದೆ. ಸಚಿವರಾದ ಕೆ.ಜೆ.ಜಾರ್ಜ್ (ಸರ್ವಜ್ಞ ನಗರ), ದಿನೇಶ್ ಗುಂಡೂರಾವ್ (ಗಾಂಧಿನಗರ), ಝಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ರಿಝ್ವಾನ್ ಅರ್ಷದ್ (ಶಿವಾಜಿನಗರ), ಎನ್.ಎ.ಹ್ಯಾರಿಸ್ (ಶಾಂತಿನಗರ) ಕಾಂಗ್ರೆಸ್ ಶಾಸಕರು. ಸುರೇಶ್ ಕುಮಾರ್ (ರಾಜಾಜಿನಗರ), ಎಸ್ ರಘು (ಸಿವಿ ರಾಮನ್ ನಗರ) ಮತ್ತು ಮಂಜುಳಾ ಲಿಂಬಾವಳಿ (ಮಹದೇವಪುರ) ಬಿಜೆಪಿ ಶಾಸಕರಾಗಿದ್ದಾರೆ.

ಕಾಂಗ್ರೆಸ್‌ನಿಂದ ಈ ಬಾರಿ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್‌ ಸ್ಪರ್ಧಿಸುತ್ತಿದ್ದಾರೆ. ಪಿ.ಸಿ ಮೋಹನ್‌ ಸ್ಪರ್ಧೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ, ಮನ್ಸೂರ್ ಅಲಿ ಖಾನ್ ಅವರಿಗೆ ಗೆಲ್ಲುವ ಅವಕಾಶವಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ : ‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...