Homeಮುಖಪುಟಡ್ರಗ್ಸ್ ಪ್ರಕರಣ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ...

ಡ್ರಗ್ಸ್ ಪ್ರಕರಣ: ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ಕೋರ್ಟ್

- Advertisement -
- Advertisement -

1996ರಲ್ಲಿ ವಕೀಲರೊಬ್ಬರನ್ನು ಬಂಧಿಸಲು ಡ್ರಗ್ಸ್ ಇಟ್ಟಿದ ಪ್ರಕರಣದಲ್ಲಿ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈಗಾಗಲೇ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೈಲು ಸೇರಿರುವ ಭಟ್, 1996ರಲ್ಲಿ ರಾಜಸ್ಥಾನ ಮೂಲದ ವಕೀಲರು ತಂಗಿದ್ದ ಪಾಲನ್ಪುರದ ಹೋಟೆಲ್ ಕೊಠಡಿಯಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದ ಸುಳ್ಳು ಪ್ರಕರಣದಲ್ಲಿ ವಕೀಲರನ್ನು ಸಿಲುಕಿಸಿದ್ದರು ಎನ್ನಲಾಗಿದೆ.

2015ರಲ್ಲಿ ಐಪಿಎಸ್ ಸೇವೆಯಿಂದ ವಜಾಗೊಂಡ ಭಟ್ ಅವರು, ಆ ಸಮಯದಲ್ಲಿ ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ ಎನ್ ಠಕ್ಕರ್ ಅವರು ಬುಧವಾರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳಡಿ ಭಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು. ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

ಈಗಾಗಲೇ ಜೈಲಿನಲ್ಲಿರುವ ಸಂಜೀವ್ ಭಟ್ :

1990ರಲ್ಲಿ ಜಾಮ್‌ನಗರದಲ್ಲಿ ಸಂಭವಿಸಿದ್ದ ಗಲಭೆಯ ವೇಳೆ 150 ಜನರನ್ನು ಸಂಜೀವ್ ಭಟ್ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದರು. ಆ ವೇಳೆ ಸಂಜೀವ್ ಭಟ್ ಜಾಮ್‌ನಗರದ ಹೆಚ್ಚುವರಿ ಪೊಲೀಸ್‌ ಸೂಪರಿಂಟೆಂಡೆಂಟ್‌ ಆಗಿದ್ದರು. ಸಂಜೀವ್‌ ಭಟ್‌ನಿಂದ ಬಂಧನಕ್ಕೆ ಒಳಗಾಗಿದ್ದ ಪ್ರಭುದಾಸ್ ವೈಷ್ಣಾನಿ ಎಂಬ ವ್ಯಕ್ತಿ ಕೆಲ ದಿನಗಳ ನಂತರ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು. ಕಸ್ಟಡಿಯಲ್ಲಿ ಸಂಜೀವ್ ಭಟ್ ಚಿತ್ರ ಹಿಂಸೆ ನೀಡಿರುವುದೇ ವೈಷ್ಣಾನಿ ಅವರ ಸಾವಿಗೆ ಕಾರಣ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ವೈಷ್ಣಾನಿ ಸಾವಿನ ಪ್ರಕರಣದಲ್ಲಿ ಭಟ್ ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಸಂಜೀವ್ ಭಟ್, 2002ರ ಗುಜರಾತ್ ಗಲಭೆಯಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಗಮನ ಸೆಳೆದಿದ್ದರು.

ಇದನ್ನೂ ಓದಿ : ಅಣ್ಣಾಮಲೈ ನಾಮಪತ್ರ ತಿರಸ್ಕರಿಸುವಂತೆ ಡಿಎಂಕೆ, ಎಐಡಿಎಂಕೆಯಿಂದ ಚು. ಆಯೋಗಕ್ಕೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...