Homeಫ್ಯಾಕ್ಟ್‌ಚೆಕ್Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

- Advertisement -
- Advertisement -

ಟೈಮ್ಸ್ ನೆಟ್‌ವರ್ಕ್‌ ನಡೆಸಿದ ‘ಟೈಮ್ಸ್‌ ನೌ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಕಿ, “ನೀವು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ?” ಎಂದು ಕೇಳಿದ್ದಕ್ಕೆ. “ಇಲ್ಲ, ಚುನಾವಣೆಗೆ ಎದುರಿಸುವಷ್ಟು ಹಣ ನನ್ನಲ್ಲಿ ಇಲ್ಲ” ಎಂದು ನಿರ್ಮಲಾ ಸೀತಾರಾಮ್ ಉತ್ತರಿಸಿದ್ದಾರೆ.

“ಏನಿದು! ದೇಶದ ಹಣಕಾಸು ಸಚಿವೆಯ ಬಳಿ ಹಣ ಇಲ್ಲವೇ?” ಎಂದು ನಿರೂಪಕಿ ಕೇಳಿದ್ದಕ್ಕೆ. “ಹೌದು, ದೇಶದ ಏಕೀಕೃ ನಿಧಿ (Consolidated Fund) ನನ್ನದಲ್ಲ ದೇಶದ್ದು. ನನ್ನ ಏನಿದ್ದರೂ ವೇತನ ಇತ್ಯಾದಿ ಮಾತ್ರ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಾಗಾದರೆ, ನಿಜವಾಗಿಯೂ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸಲು ಹಣ ಇಲ್ವಾ? ದೇಶದ ಹಣಕಾಸು ಸಚಿವೆ, ಪ್ರಭಾವಿ ರಾಜಕಾರಣಿ ಅಷ್ಟೊಂದು ಅರ್ಥಿಕ ಸಂಕಷ್ಟದಲ್ಲಿ ಇದ್ದಾರಾ? ನಿರ್ಮಲಾ ಸೀತಾರಾಮನ್ ಬಳಿ ಇತರ ಯಾವುದೇ ಆಸ್ತಿಗಳು ಇಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ನಿರ್ಮಲಾ ಸೀತಾರಾಮನ್ ಹೇಳಿಕೆ ಸಂಬಂಧಪಟ್ಟಂತೆ ಅವರ ಆಸ್ತಿ ವಿವರ ತಿಳಿಯಲು 2023ರಲ್ಲಿ ಸೀತಾರಾಮನ್ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ಪರಿಶೀಲಿಸಿದ್ದೇವೆ. ಈ ವೇಳೆ ನಮಗೆ ಗೊತ್ತಾದ ಮಾಹಿತಿಯೆಂದರೆ, ನಿರ್ಮಲಾ ಸೀತಾರಾಮನ್ ಅವರೇ ಘೋಷಿಸಿಕೊಂಡಂತೆ ಅವರ ಬಳಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿ-ಪಾಸ್ತಿ ಇದೆ.

ನಿರ್ಮಲಾ ಸೀತಾರಾಮನ್ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ, ಅವರು ಸುಮಾರು 1.87 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು 69.12 ಲಕ್ಷ ಮೌಲ್ಯದ ಚರಾಸ್ತಿ ಸೇರಿ ಒಟ್ಟು 2.56 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸುದ್ದಿ ಲಿಂಕ್ 

ನಿರ್ಮಲಾ ಸೀತಾರಾಮನ್ ಮತ್ತು ಅವರ ಪತಿ ಪರಕಾಲ ಪ್ರಭಾಕರ್ ಮಾಲೀಕತ್ವದ 1.7 ಕೋಟಿ ರೂ. ಮೌಲ್ಯದ
ವಸತಿ ಕಟ್ಟಡವೊಂದರಲ್ಲಿ ನಿರ್ಮಲಾ ಅವರು ಶೇ. 50ರಷ್ಟು ಪಾಲನ್ನು ಹೊಂದಿದ್ದಾರೆ. 17 ಲಕ್ಷ ಮೌಲ್ಯದ ಕೃಷಿಯೇತರ ಜಮೀನೂ ಅವರ ಬಳಿಯಿದೆ.

ಇನ್ನೂ, ಚರಾಸ್ತಿ ನೋಡುವುದಾದರೆ, ನಿರ್ಮಲಾ ಅವರು 35.52 ಲಕ್ಷ ರೂಪಾಯಿ ಹಣ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದಾರೆ ಮತ್ತು 18.39 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ.

ಈ ಅಂಕಿ ಅಂಶಗಳು ನಿರ್ಮಲಾ ಸೀತಾರಾಮನ್ ಚುನಾವಣೆ ಎದುರಿಸುವಷ್ಟು ಹಣ ಇಲ್ಲದವರಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ.

ಚುನಾವಣಾ ಖರ್ಚು ಮಿತಿ ಮೀರುತ್ತಿದೆಯಾ ಬಿಜೆಪಿ?

ಟೈಮ್ಸ್‌ ನೌ ಸಮ್ಮಿಟ್‌ನಲ್ಲಿ ಮಾತನಾಡುವಾಗ ನಿರ್ಮಲಾ ಸೀತಾರಾಮನ್ “ನನ್ನ ಬಳಿ ಚುನಾವಣೆ ಎದುರಿಸಲು ಹಣವಿಲ್ಲ” ಎಂದಿರುವುದು ಕೆಲವೊಂದು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಪೈಕಿ ಒಂದು ಬಿಜೆಪಿ ಚುನಾವಣಾ ಖರ್ಚಿನ ಮಿತಿ ಮೀರುತ್ತಿದೆಯಾ? ಎಂಬುವುದು.

ಸುದ್ದಿ ಲಿಂಕ್ 

ಚುನಾವಣಾ ಆಯೋಗದ ನಿಯಮ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಯ ಖರ್ಚಿನ ಮಿತಿ 95 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಬಳಿ ಪ್ರಸ್ತುತ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಇದೆ. ಅಂದರೆ, 95 ಲಕ್ಷ ರೂಪಾಯಿಗಿಂತ ಹೆಚ್ಚು ಮೌಲ್ಯದ ಆಸ್ತಿ ಇದೆ. ಆದರೂ, ಹಣ ಇಲ್ಲ ಎಂಬುವುದರ ಅರ್ಥ, ಬಿಜೆಪಿ ನಿಯಮ ಮೀರಿ ಖರ್ಚು ಮಾಡುತ್ತಿದೆ ಎಂದಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...