Homeಮುಖಪುಟಏರ್ ಇಂಡಿಯಾ ತನಿಖೆ ಮುಗಿಸಿದ ಸಿಬಿಐ: 'ಬಿಜೆಪಿಯು ಮನಮೋಹನ್ ಸಿಂಗ್ ಕ್ಷಮೆ ಕೇಳಬೇಕು..' ಎಂದ ಸಂಜಯ್...

ಏರ್ ಇಂಡಿಯಾ ತನಿಖೆ ಮುಗಿಸಿದ ಸಿಬಿಐ: ‘ಬಿಜೆಪಿಯು ಮನಮೋಹನ್ ಸಿಂಗ್ ಕ್ಷಮೆ ಕೇಳಬೇಕು..’ ಎಂದ ಸಂಜಯ್ ರಾವತ್

- Advertisement -
- Advertisement -

ಏರ್ ಇಂಡಿಯಾ-ಇಂಡಿಯನ್ ಏರ್‌ಲೈನ್ಸ್ ವಿಲೀನ ಪ್ರಕರಣದಲ್ಲಿ ಸಿಬಿಐ ಮುಕ್ತಾಯದ ವರದಿಯನ್ನು ಸಲ್ಲಿಸಿದ ನಂತರ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿಯನ್ನು ಒತ್ತಾಯಿಸಿದ್ದಾರೆ.

ಯುಪಿಎ ಅವಧಿಯಲ್ಲಿ ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದಿಂದ ರೂಪುಗೊಂಡ ಕಂಪನಿಯಾದ ಎನ್‌ಎಸಿಎಲ್ ವಿಮಾನಗಳ ಗುತ್ತಿಗೆಯಲ್ಲಿನ ಅಕ್ರಮಗಳ ಕುರಿತು ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದರು.

ಈಗ ಅಜಿತ್ ಪವಾರ್ ನೇತೃತ್ವದ ಪಕ್ಷಕ್ಕೆ ಸೇರಿದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಗುತ್ತಿಗೆ ನೀಡಿದಾಗ ಹಿಂದಿನ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಡೆದ ಭ್ರಷ್ಟಾಚಾರದ ಆರೋಪದ ಕುರಿತು ಮೇಲೆ ಬಿಜೆಪಿ ಧ್ವನಿ ಎತ್ತಿತ್ತು. ಈಗ ಸಿಬಿಐ ಕೇಸ್ ಕ್ಲೋಸ್ ಮಾಡಿದ್ದು, ಬಿಜೆಪಿಯು ಡಾ. ಮನಮೋಹನ್ ಸಿಂಗ್ ಅವರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.

ಏರ್ ಇಂಡಿಯಾ ಮತ್ತು ಇಂಡಿಯನ್ ಏರ್‌ಲೈನ್ಸ್ ವಿಲೀನದ ನಂತರ ನ್ಯಾಷನಲ್ ಏವಿಯೇಷನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NACIL) ಅನ್ನು ರಚಿಸಲಾಯಿತು. ಈ ನಿರ್ಧಾರವನ್ನು “ಅಪ್ರಾಮಾಣಿಕವಾಗಿ” ತೆಗೆದುಕೊಳ್ಳಲಾಗಿದೆ, ಸ್ವಾಧೀನ ಕಾರ್ಯಕ್ರಮ ನಡೆಯುತ್ತಿರುವಾಗಲೂ ವಿಮಾನವನ್ನು ಗುತ್ತಿಗೆಗೆ ನೀಡಲಾಗಿದೆ ಎಂದು ಸಿಬಿಐ ಆರೋಪಿಸಿತ್ತು.

ಗುತ್ತಿಗೆ ನಿರ್ಧಾರವನ್ನು “ಬಾಹ್ಯ ಪರಿಗಣನೆಗಳ ಮೇಲೆ ಇತರ ಅಪರಿಚಿತ ವ್ಯಕ್ತಿಗಳೊಂದಿಗೆ ಪಿತೂರಿ” ಮಾಡಲಾಗಿದೆ. ಇದರ ಪರಿಣಾಮವಾಗಿ ಖಾಸಗಿ ಕಂಪನಿಗಳಿಗೆ “ಹಣಕಾಸಿನ ಲಾಭ” ಮತ್ತು ಪರಿಣಾಮವಾಗಿ “ಸರ್ಕಾರಿ ಬೊಕ್ಕಸಕ್ಕೆ ನಷ್ಟ” ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಆರೋಪಿಸಿದೆ.

ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ:

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ವರದಿಯಾದ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿದ ರಾವತ್, “ಸೀಟು ಹಂಚಿಕೆಯಲ್ಲಿ ಮಿತ್ರಪಕ್ಷಗಳ ನಡುವೆ ಯಾವುದೇ ವಿವಾದವಿಲ್ಲ” ಎಂದು ಹೇಳಿದರು.

‘ಏಪ್ರಿಲ್ 3 ರಂದು ಶಿವಾಲಯದಲ್ಲಿ ಎಂವಿಎ ನಾಯಕರ ಪತ್ರಿಕಾಗೋಷ್ಠಿ ನಡೆಯಲಿದೆ. ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತು ಕಾಂಗ್ರೆಸ್ ಮುಖಂಡರಾದ ನಾನಾ ಪಟೋಲೆ, ಪೃಥ್ವಿರಾಜ್ ಚವ್ಹಾಣ್ ಮತ್ತು ಬಾಳಾಸಾಹೇಬ್ ಥೋರಟ್ ಉಪಸ್ಥಿತರಿರುವರು’ ಎಂದು ಅವರು ಹೇಳಿದರು.

ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ “ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು” ಆಯೋಜಿಸಲಾದ ಪ್ರತಿಪಕ್ಷ ಇಂಡಿಯಾ ಬ್ಲಾಕ್ ರ್ಯಾಲಿಯಲ್ಲಿ ಠಾಕ್ರೆ ಭಾಗವಹಿಸಲಿದ್ದಾರೆ ಎಂದು ಸಂಜಯ್ ರಾವತ್ ಹೇಳಿದರು.

ಇದನ್ನೂ ಓದಿ; ‘ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..’; ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...