Homeಮುಖಪುಟಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

‘ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೇ.50ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು, ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಅವರು ಭಾರತದ ಭವಿಷ್ಯವನ್ನು ಬದಲಿಸುತ್ತಾರೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಭಾರತದಲ್ಲಿ ಮಹಿಳೆಯರ ಜನಸಂಖ್ಯೆ ಶೇಕಡಾ 50 ಅಲ್ಲವೇ? ಹೈಯರ್ ಸೆಕೆಂಡರಿ ಮತ್ತು ಹೈಯರ್ ಎಜುಕೇಷನ್ ನಲ್ಲಿ ಮಹಿಳೆಯರ ಉಪಸ್ಥಿತಿ ಶೇಕಡ 50 ಅಲ್ಲವೇ? ಹಾಗಿದ್ದಲ್ಲಿ, ವ್ಯವಸ್ಥೆಯಲ್ಲಿ ಅವರ ಪಾಲು ಏಕೆ ಕಡಿಮೆಯಾಗಿದೆ. ‘ಆಧಿ ಅಬಾದಿ ಪೂರಾ ಹಕ್’, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ; ಕಾಂಗ್ರೆಸ್ ಅದನ್ನೇ ಬಯಸುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.

‘ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅರ್ಧದಷ್ಟು ನೇಮಕಾತಿಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದೆ. ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯ ತಕ್ಷಣದ ಅನುಷ್ಠಾನದ ಪರವಾಗಿ ನಾವು ಕೂಡ ಇದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸುರಕ್ಷಿತ ಆದಾಯ, ಭವಿಷ್ಯ, ಸ್ಥಿರತೆ ಮತ್ತು ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯಾಗುತ್ತಾರೆ. ಶೇ.50 ರಷ್ಟು ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರು ಇರುವುದು ದೇಶದ ಪ್ರತಿಯೊಬ್ಬ ಮಹಿಳೆಗೆ ಬಲವನ್ನು ನೀಡುತ್ತದೆ ಮತ್ತು ಶಕ್ತಿಯುತ ಮಹಿಳೆಯರು ಭಾರತದ ಭವಿಷ್ಯವನ್ನು ಬದಲಾಯಿಸುತ್ತಾರೆ” ಎಂದು ಅವರು ಹೇಳಿದರು.

ಈ ಹಿಂದೆ, ಸಾರ್ವತ್ರಿಕ ಚುನಾವಣೆಗೆ ಮುನ್ನ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ಘೋಷಿಸಿತ್ತು. ಪಕ್ಷದ “ಮಹಾಲಕ್ಷ್ಮಿ” ಖಾತ್ರಿಯಡಿ, ಪ್ರತಿ ಬಡ ಕುಟುಂಬದಿಂದ ಒಬ್ಬ ಮಹಿಳೆಗೆ ನೇರ ನಗದು ವರ್ಗಾವಣೆಯ ಮೂಲಕ ವಾರ್ಷಿಕ ₹1 ಲಕ್ಷ ಸಹಾಯವನ್ನು ನೀಡಲಾಗುತ್ತದೆ.

ಇದಲ್ಲದೆ, ಕಾಂಗ್ರೆಸ್ “ಆಧಿ ಆಬಾದಿ, ಪೂರಾ ಹಕ್” ಅನ್ನು ಖಚಿತಪಡಿಸುತ್ತದೆ. ಅದರ ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ ಶೇ.50 ಪ್ರತಿಶತವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

“ಶಕ್ತಿ ಕಾ ಸಮ್ಮಾನ್” ಖಾತರಿ ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

“ಅಧಿಕಾರ ಮೈತ್ರಿ” ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರ ಜಾರಿಯಲ್ಲಿ ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.

“ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳು” ಖಾತರಿಯಡಿಯಲ್ಲಿ, ಕಾಂಗ್ರೆಸ್ ನೇತೃತ್ವದ ಕೇಂದ್ರವು ದೇಶದಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ.

ಇದನ್ನೂ ಓದಿ; ನ್ಯಾಯಾಂಗ ಪರಾಮರ್ಶೆಯ ಅಧಿಕಾರವು ನೀತಿ ಬದಲಾವಣೆಗಳನ್ನು ಸಹ ನಡೆಸಬೇಕು: ನ್ಯಾಯಮೂರ್ತಿ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...