Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...