Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...