Homeಮುಖಪುಟಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬಂದಾ ನ್ಯಾಯಾಲಯವು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಗೆ ನಿರ್ದೇಶನ ನೀಡಿದೆ. ಈ ಮಧ್ಯೆ ಅನ್ಸಾರಿ ಕುಟುಂಬವು ಇದು ಹೃದಯಾಘಾತದ ನಿಧನವಲ್ಲ ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. 63 ವರ್ಷದ ಅನ್ಸಾರಿ ಅವರನ್ನು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಗುರುವಾರ ಸಂಜೆ ತರಲಾಗಿತ್ತು. ಅನಂತರ ಅವರು ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ವರ್ಷ ಮಾರ್ಚ್ 13ರಂದು ವಾರಣಾಸಿಯ ವಿಶೇಷ ನ್ಯಾಯಾಲಯವು ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣದಲ್ಲಿ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅಪಹರಣ ಪ್ರಕರಣ, ಉತ್ತರ ಪ್ರದೇಶ ದರೋಡೆಕೋರರ ಕಾಯಿದೆಯಡಿಯಲ್ಲಿನ 1999ರ ಪ್ರಕರಣ, 1991ರ ಅವಧೇಶ್ ರೈ ಹತ್ಯೆ ಪ್ರಕರಣ ಮತ್ತು 2003ರಲ್ಲಿ ಜೈಲರ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಸೇರಿದಂತೆ ಹಲವಾರು ಇತರ ಪ್ರಕರಣಗಳಲ್ಲಿ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್‌ ಹೇಳಿತ್ತು.

ಮಾರ್ಚ್ 21ರಂದು, ಅನ್ಸಾರಿ ಅವರು ಬಂದಾದಲ್ಲಿ ಜೈಲು ಅಧಿಕಾರಿಗಳು ನನಗೆ ವಿಷ ನೀಡುತ್ತಾರೆ ಎಂದು ಆರೋಪಿಸಿ ಮೌದಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು.

ಮುಖ್ತಾರ್ ಅನ್ಸಾರಿ ಪತ್ರ:

ಮುಖ್ತಾರ್ ಅನ್ಸಾರಿಗೆ ಸ್ಲೋ ಪಾಯ್ಸನ್ ನೀಡಲಾಗಿದೆ: ಸಹೋದರನಿಂದ ಆರೋಪ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಮೃತ ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲೇ  ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.

ಅನ್ಸಾರಿಯವರ ಸಹೋದರ ಮತ್ತು ಗಾಝಿಪುರದ ಸಂಸದ ಅಫ್ಜಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮುಖ್ತಾರ್‌ ಅನ್ಸಾರಿಗೆ ಜೈಲಿನಲ್ಲಿ ವಿಷ ಬೆರೆಸಿ ಆಹಾರವನ್ನು ನೀಡಲಾಗಿದೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆ ಅವರಿಗೆ ವಿಷವನ್ನು ನೀಡಲಾಗಿತ್ತು. ಇತ್ತೀಚೆಗೆ ಮಾರ್ಚ್ 19ರಂದು ಮತ್ತು ಮಾರ್ಚ್ 22ರಂದು ಅವರಿಗೆ ಮತ್ತೆ ವಿಷ ಆಹಾರವನ್ನು ನೀಡಲಾಗಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆದರೆ ಅವರ ಕುಟುಂಬದ ಇತರ ಸದಸ್ಯರು ಕೂಡ “ಸ್ಲೋ ಪಾಯ್ಸನ್‌’ ಹಾಕಿರುವ ಕುರಿತು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮಾತನಾಡಿದ್ದು, ನನಗೆ ತಂದೆಯ ಸಾವಿನ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ, ಮಾಧ್ಯಮಗಳ ಮೂಲಕ ನಾನು ಈ ಬಗ್ಗೆ ತಿಳಿದಿದ್ದೇನೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ, ಆದರೆ ಅವಕಾಶ ಕೊಟ್ಟಿಲ್ಲ. ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ 19ರಂದು ರಾತ್ರಿ ಊಟದಲ್ಲಿ ವಿಷ ನೀಡಲಾಗಿದೆ. ನಾವು ನ್ಯಾಯಾಲಯಕ್ಕೆ ತೆರಳುತ್ತೇವೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಹೃದಯಸ್ತಂಭನದಿಂದ ಸಾವು?

ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐವರು ವೈದ್ಯರ ತಂಡ ಶವಪರೀಕ್ಷೆಯಲ್ಲಿ ಪಾಲ್ಗೊಂಡಿತ್ತು. ಮುಖ್ತಾರ್ ಅನ್ಸಾರಿ ಕಿರಿಯ ಮಗ ಉಮರ್‌ ಅನ್ಸಾರಿ ಸಹ ಈ ವೇಳೆ ಹಾಜರಿದ್ದರು ಎಂದು ವೈದ್ಯರೋರ್ವರು ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಯಾರು?

ಮುಖ್ತಾರ್‌ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದಿಂದ ಚುನಾಯಿತರಾಗಿದ್ದರು. ಅವರ ಹುಟ್ಟೂರಾದ ಗಾಜಿಪುರದಲ್ಲಿ ಅವರು ಬಲವಾದ ಪ್ರಭಾವವನ್ನು ಹೊಂದಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದಾರೆ. ಅನ್ಸಾರಿ ಅವರ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಉತ್ತರ ಪ್ರದೇಶದ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್ 2022ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು ಮತ್ತು ಅನ್ಸಾರಿಯನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. 2023ರಲ್ಲಿ, ಎಂಪಿ ಎಂಎಲ್ಎ ನ್ಯಾಯಾಲಯವು ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಅನ್ಸಾರಿ ತಪ್ಪಿತಸ್ಥರೆಂದು ಘೋಷಿಸಿತ್ತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಮಾರ್ಚ್ 13, 2024ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನು ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...