Homeಮುಖಪುಟಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬಂದಾ ನ್ಯಾಯಾಲಯವು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಗೆ ನಿರ್ದೇಶನ ನೀಡಿದೆ. ಈ ಮಧ್ಯೆ ಅನ್ಸಾರಿ ಕುಟುಂಬವು ಇದು ಹೃದಯಾಘಾತದ ನಿಧನವಲ್ಲ ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. 63 ವರ್ಷದ ಅನ್ಸಾರಿ ಅವರನ್ನು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಗುರುವಾರ ಸಂಜೆ ತರಲಾಗಿತ್ತು. ಅನಂತರ ಅವರು ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ವರ್ಷ ಮಾರ್ಚ್ 13ರಂದು ವಾರಣಾಸಿಯ ವಿಶೇಷ ನ್ಯಾಯಾಲಯವು ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣದಲ್ಲಿ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅಪಹರಣ ಪ್ರಕರಣ, ಉತ್ತರ ಪ್ರದೇಶ ದರೋಡೆಕೋರರ ಕಾಯಿದೆಯಡಿಯಲ್ಲಿನ 1999ರ ಪ್ರಕರಣ, 1991ರ ಅವಧೇಶ್ ರೈ ಹತ್ಯೆ ಪ್ರಕರಣ ಮತ್ತು 2003ರಲ್ಲಿ ಜೈಲರ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಸೇರಿದಂತೆ ಹಲವಾರು ಇತರ ಪ್ರಕರಣಗಳಲ್ಲಿ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್‌ ಹೇಳಿತ್ತು.

ಮಾರ್ಚ್ 21ರಂದು, ಅನ್ಸಾರಿ ಅವರು ಬಂದಾದಲ್ಲಿ ಜೈಲು ಅಧಿಕಾರಿಗಳು ನನಗೆ ವಿಷ ನೀಡುತ್ತಾರೆ ಎಂದು ಆರೋಪಿಸಿ ಮೌದಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು.

ಮುಖ್ತಾರ್ ಅನ್ಸಾರಿ ಪತ್ರ:

ಮುಖ್ತಾರ್ ಅನ್ಸಾರಿಗೆ ಸ್ಲೋ ಪಾಯ್ಸನ್ ನೀಡಲಾಗಿದೆ: ಸಹೋದರನಿಂದ ಆರೋಪ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಮೃತ ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲೇ  ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.

ಅನ್ಸಾರಿಯವರ ಸಹೋದರ ಮತ್ತು ಗಾಝಿಪುರದ ಸಂಸದ ಅಫ್ಜಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮುಖ್ತಾರ್‌ ಅನ್ಸಾರಿಗೆ ಜೈಲಿನಲ್ಲಿ ವಿಷ ಬೆರೆಸಿ ಆಹಾರವನ್ನು ನೀಡಲಾಗಿದೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆ ಅವರಿಗೆ ವಿಷವನ್ನು ನೀಡಲಾಗಿತ್ತು. ಇತ್ತೀಚೆಗೆ ಮಾರ್ಚ್ 19ರಂದು ಮತ್ತು ಮಾರ್ಚ್ 22ರಂದು ಅವರಿಗೆ ಮತ್ತೆ ವಿಷ ಆಹಾರವನ್ನು ನೀಡಲಾಗಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆದರೆ ಅವರ ಕುಟುಂಬದ ಇತರ ಸದಸ್ಯರು ಕೂಡ “ಸ್ಲೋ ಪಾಯ್ಸನ್‌’ ಹಾಕಿರುವ ಕುರಿತು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮಾತನಾಡಿದ್ದು, ನನಗೆ ತಂದೆಯ ಸಾವಿನ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ, ಮಾಧ್ಯಮಗಳ ಮೂಲಕ ನಾನು ಈ ಬಗ್ಗೆ ತಿಳಿದಿದ್ದೇನೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ, ಆದರೆ ಅವಕಾಶ ಕೊಟ್ಟಿಲ್ಲ. ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ 19ರಂದು ರಾತ್ರಿ ಊಟದಲ್ಲಿ ವಿಷ ನೀಡಲಾಗಿದೆ. ನಾವು ನ್ಯಾಯಾಲಯಕ್ಕೆ ತೆರಳುತ್ತೇವೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಹೃದಯಸ್ತಂಭನದಿಂದ ಸಾವು?

ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐವರು ವೈದ್ಯರ ತಂಡ ಶವಪರೀಕ್ಷೆಯಲ್ಲಿ ಪಾಲ್ಗೊಂಡಿತ್ತು. ಮುಖ್ತಾರ್ ಅನ್ಸಾರಿ ಕಿರಿಯ ಮಗ ಉಮರ್‌ ಅನ್ಸಾರಿ ಸಹ ಈ ವೇಳೆ ಹಾಜರಿದ್ದರು ಎಂದು ವೈದ್ಯರೋರ್ವರು ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಯಾರು?

ಮುಖ್ತಾರ್‌ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದಿಂದ ಚುನಾಯಿತರಾಗಿದ್ದರು. ಅವರ ಹುಟ್ಟೂರಾದ ಗಾಜಿಪುರದಲ್ಲಿ ಅವರು ಬಲವಾದ ಪ್ರಭಾವವನ್ನು ಹೊಂದಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದಾರೆ. ಅನ್ಸಾರಿ ಅವರ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಉತ್ತರ ಪ್ರದೇಶದ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್ 2022ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು ಮತ್ತು ಅನ್ಸಾರಿಯನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. 2023ರಲ್ಲಿ, ಎಂಪಿ ಎಂಎಲ್ಎ ನ್ಯಾಯಾಲಯವು ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಅನ್ಸಾರಿ ತಪ್ಪಿತಸ್ಥರೆಂದು ಘೋಷಿಸಿತ್ತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಮಾರ್ಚ್ 13, 2024ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನು ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...