Homeಮುಖಪುಟಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು: ವರದಿ

- Advertisement -
- Advertisement -

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವ ಜನರು ಯಾವುದೇ ಶಾಲಾ ಶಿಕ್ಷಣವಿಲ್ಲದವರಿಗಿಂತ ನಿರುದ್ಯೋಗಿಗಳಾಗುವ ಸಾಧ್ಯತೆ ಹೆಚ್ಚು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ತಿಳಿಸಿದೆ.

ಪದವೀಧರರ ನಿರುದ್ಯೋಗ ದರವು ಶೇ. 29.1 ಇದ್ದು, ಓದಲು ಅಥವಾ ಬರೆಯಲು ಬಾರದವರ ದರ ಶೇ. 3.4 ಇದೆ. ಅಂದರೆ, ಉನ್ನತ ಶಿಕ್ಷಣ ಪಡೆದವರ ನಿರುದ್ಯೋಗ ಮಟ್ಟ ಯಾವುದೇ ಶಾಲಾ ಶಿಕ್ಷಣ ಪಡೆಯವರಿಗಿಂತ ಸುಮಾರು ಒಂಬತ್ತು ಪಟ್ಟು ಹೆಚ್ಚಿದೆ. ಇನ್ನು ಮಾಧ್ಯಮಿಕ ಅಥವಾ ಉನ್ನತ ಶಿಕ್ಷಣ ಹೊಂದಿರುವ ಯುವಜನರ ನಿರುದ್ಯೋಗ ದರ ಶೇ. 18.4 ಇದ್ದು, ಆರು ಪಟ್ಟು ಹೆಚ್ಚಿದೆ ಎಂದು ಭಾರತದ ಕಾರ್ಮಿಕ ಮಾರುಕಟ್ಟೆಯ ಕುರಿತು ವರದಿಯಲ್ಲಿ ಐಎಲ್‌ಒ ಹೇಳಿದೆ.

“ಭಾರತದಲ್ಲಿ ನಿರುದ್ಯೋಗವು ಯುವ ಜನರ ಪ್ರಧಾನ ಸಮಸ್ಯೆಯಾಗಿದೆ. ವಿಶೇಷವಾಗಿ ಮಾಧ್ಯಮಿಕ ಮಟ್ಟದ ಅಥವಾ ಹೆಚ್ಚಿನ ಶಿಕ್ಷಣ ಹೊಂದಿರುವ ಯುವ ಜನರಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ ಮತ್ತು ಇದು ಕಾಲಾನಂತರದಲ್ಲಿ ತೀವ್ರಗೊಂಡಿದೆ” ಎಂದು ಐಎಲ್‌ಒ ಹೇಳಿದೆ.

ಅಂಕಿ ಅಂಶಗಳು, ಕಾರ್ಮಿಕ ಬಲದ ಕೌಶಲ್ಯ ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳ ನಡುವಿನ ತೀಕ್ಷ್ಣವಾದ ಅಸಾಮರಸ್ಯವನ್ನುಈ ಸಮಸ್ಯೆಗೆ ಕಾರಣ ಎಂದಿದೆ. ಭಾರತದ ಕಳಪೆ ಶಾಲಾ ಶಿಕ್ಷಣವು ಕಾಲಾನಂತರದಲ್ಲಿ ಅದರ ಆರ್ಥಿಕ ಭವಿಷ್ಯವನ್ನು ತಡೆಯುತ್ತದೆ ಎಂಬ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಂತಹ ಪ್ರಸಿದ್ಧ ಅರ್ಥಶಾಸ್ತ್ರಜ್ಞರ ಎಚ್ಚರಿಕೆಗಳನ್ನು ವರದಿ ಒತ್ತಿ ಹೇಳಿದೆ.

“ಭಾರತದಲ್ಲಿ ಯುವ ಜನರ ನಿರುದ್ಯೋಗ ಮಟ್ಟ ಈಗ ಜಾಗತಿಕ ಮಟ್ಟಕ್ಕಿಂತ ಹೆಚ್ಚಾಗಿದೆ. ಕೃಷಿಯೇತರ ವಲಯಗಳಲ್ಲಿ ವಿದ್ಯಾವಂತ ಯುವ ಜನರಿಗೆ ಲಾಭದಾಯಕ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಭಾರತದ ಆರ್ಥಿಕತೆ ವಿಫಲವಾಗಿದೆ. ಇದು ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಐಎಲ್‌ಒ ಹೇಳಿದೆ.

ಚೀನಾದಲ್ಲಿ, 16-24 ವರ್ಷ ವಯಸ್ಸಿನ ಯುವ ಜನರ ನಿರುದ್ಯೋಗ ದರವು ವರ್ಷದ ಮೊದಲ ಎರಡು ತಿಂಗಳಲ್ಲಿ ಶೇ. 15.3ಕ್ಕೆ ಏರಿದೆ. ಇದು ನಗರ ಜನಸಂಖ್ಯೆಯ ಶೇ. 5.3ರ ದರಕ್ಕಿಂತ ಮೂರು ಪಟ್ಟು ಹೆಚ್ಚಿದೆ.

ಯುವ ನಿರುದ್ಯೋಗಿಗಳ ವಿಷಯದಲ್ಲಿ ಭಾರತೀಯರ ಪಾಲು: 15-29 ವರ್ಷದೊಳಗಿನ ನಿರುದ್ಯೋಗಿಗಳ ದರ 2000 ಇಸವಿಯಲ್ಲಿ ಶೇ. 88.6 ಇತ್ತು. ಅದು 2022 ರಲ್ಲಿ ಶೇ. 82.9ಕ್ಕೆ ಇಳಿದಿದೆ. ಆದರೆ, ಈ ಪೈಕಿ ವಿದ್ಯಾವಂತ ಯುವ ಜನರ ಪಾಲು ಈ ಅವಧಿಯಲ್ಲಿ ಶೇ. 54.2 ರಿಂದ ಶೇ. 65.7ಕ್ಕೆ ಏರಿಕೆಯಾಗಿದೆ ಎಂದು ಐಎಲ್‌ಒ ಅಂಕಿ ಅಂಶಗಳು ತೋರಿಸಿವೆ.

ವಿದ್ಯಾವಂತ ನಿರುದ್ಯೋಗಿಗಳ ಪೈಕಿ ಮಹಿಳೆಯರ ಪ್ರಮಾಣ ಹೆಚ್ಚಿದೆ. ಪುರುಷರ ನಿರುದ್ಯೋಗ ಪ್ರಮಾಣ ಶೇ.62.2 ಇದ್ದರೆ, ಮಹಿಳೆಯರ ಪ್ರಮಾಣ ಶೇ.76.7 ಇದೆ. ಅಂಕಿ ಅಂಶಗಳು ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ನಿರುದ್ಯೋಗ ಮಟ್ಟ ಹೆಚ್ಚಿದೆ ಎಂದು ತೋರಿಸಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ, ಅಂದರೆ ಶೇ. 25 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯ ದರವನ್ನು ಹೊಂದಿದೆ. ಫುಡ್ ಡೆಲಿವರಿಯಂತಹ ಕಡಿಮೆ ಸಂಬಳದ ಮತ್ತು ಖಾತ್ರಿಯಲ್ಲದ ಉದ್ಯೋಗ ದರ ಹೆಚ್ಚುತ್ತಿರುವ ಬಗ್ಗೆ ಐಎಲ್‌ಒ ಎಚ್ಚರಿಸಿದೆ.

ಇದನ್ನೂ ಓದಿ : ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...