Homeಮುಖಪುಟರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

- Advertisement -
- Advertisement -

ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ವೇಳೆ ದಾಖಲಿಸಿದ್ದ ಎಫ್‌ಐಆರ್‌ಗೆ  ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಿದ್ದಾರೆ.

ಫೆಬ್ರವರಿ 21ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಪಂಜಾಬ್‌ನ ಬಟಿಂಡಾದ ರೈತ ಶುಭಕರನ್ ಸಿಂಗ್ (21) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮುಕ್ತಿ ಮೋರ್ಚಾ (ಕೆಎಂಎಂ) ನಾಳೆ ಸಭೆಯನ್ನು ಆಯೋಜಿಸಿತ್ತು. ಆದರೆ ಇದಕ್ಕೂ ಮುನ್ನಾ ಈ ಮಹತ್ವದ ಬೆಳವಣಿಗೆ ನಡೆದಿದೆ. ಅಂಬಾಲಾ ಪೊಲೀಸರು ಗುರುವಾರ ಮೊಹಾಲಿಯಿಂದ ನವದೀಪ್ ಸಿಂಗ್ ಜಲಬೇರಾ ಅವರನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಹರ್ಯಾಣ ಪೊಲೀಸ್‌ನ ಅಪರಾಧ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪ್ರಕಾರ, ಫೆಬ್ರವರಿ 13 ರಂದು 307 (ಕೊಲೆ ಯತ್ನ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಪ್ರಕರಣ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಲ್ಬೇರಾ ಅವರನ್ನು ಬಂಧಿಸಲಾಗಿದೆ.

ಅಂಬಾಲಾ ಮೂಲದ ಜಲ್ಬೆರಾ ಅವರು ನವೆಂಬರ್ 2020ರಲ್ಲಿ ಕೇಂದ್ರದ ಮೂರು  ಕೃಷಿ ಕಾನೂನುಗಳ ವಿರುದ್ಧ ರೈತರ ಚಳವಳಿಯ ಸಮಯದಲ್ಲಿ ಪೊಲೀಸ್ ವಾಟರ್ ಟಾಂಕ್‌ ಮೇಲೆ ಏರಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದರು. 2020ರಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ದೆಹಲಿಯತ್ತ ಮೆರವಣಿಗೆ ನಡೆಸಿದ್ದರು ಮತ್ತು ಭಾರೀ ಪೊಲೀಸ್ ಬ್ಯಾರಿಕೇಡ್‌ಗಳ ಮಧ್ಯೆ ರಾಜಧಾನಿಯ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ರೈತರು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಜಲಬೇರಾ ಪರ ವಕೀಲ ರೋಹಿತ್ ಜೈನ್ ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ಹಲವಾರು ಉನ್ನತ ರೈತ ಮುಖಂಡರು ಸೇರಿದಂತೆ 20 ಜನರನ್ನು ಹೆಸರಿಸಲಾಗಿದೆ. ಪೊಲೀಸರು ತಮ್ಮ ವಿರುದ್ಧ ಹೊರಿಸಿರುವ ಆರೋಪಗಳನ್ನು ರೈತರು ನಿರಾಕರಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಆಂದೋಲನಕ್ಕೆ ಬಳಸಿದ ಕಾರು ಮತ್ತು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಲು ಜಲಬೇರಾ ಅವರ ಬಂಧನದ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಪಂಜಾಬ್ ಮತ್ತು ಹರಿಯಾಣ ನಡುವಿನ ಎರಡು ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿರುವ ರೈತರು ಇತ್ತೀಚೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದರು.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧಿಸಿದ ಕಾನೂನು ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಬಿಜೆಪಿ ನೇತೃತ್ವದ ಕೇಂದ್ರವನ್ನು ಒತ್ತಾಯಿಸಲು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ರೈತರನ್ನು ತಡೆದಿದ್ದರು. ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಸಿಂಗ್ ಕೊಲ್ಲಲ್ಪಟ್ಟಿದ್ದರು. ಘರ್ಷಣೆಯಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದರು.

ಇದನ್ನು ಓದಿ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...