Homeಮುಖಪುಟನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

- Advertisement -
- Advertisement -

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ, ಆ ಬಗ್ಗೆ ಕಾನೂನಿಗೆ ಅನುಸಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ, ಇದನ್ನು ತುರಾತುರಿಯಲ್ಲಿ ಮಾಡಲಾಗಿದೆ. ಆಗಿನ ಹಣಕಾಸು ಸಚಿವರಿಗೂ ಈ ಬಗ್ಗೆ ಗೊತ್ತಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೈದರಾಬಾದ್‌ನಲ್ಲಿ ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಆಯೋಜಿಸಿದ್ದ ನ್ಯಾಯಾಲಯಗಳು ಮತ್ತು ಸಂವಿಧಾನ ಸಮ್ಮೇಳನ 2024ನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಅವರ ನೋಟು ಬ್ಯಾನ್‌  ಬಗ್ಗೆ ಒಂದು ಸಂಜೆ  ಮಾತುಕತೆ ನಡೆಸಿದರು ಮತ್ತು ಮರುದಿನ ನೋಟು ಅಮಾನ್ಯೀಕರಣವು ಸಂಭವಿಸಿತು. ಭಾರತವು ಪೇಪರ್ ಕರೆನ್ಸಿಯಿಂದ ಪ್ಲಾಸ್ಟಿಕ್ ಕರೆನ್ಸಿಗೆ ಹೋಗಲು ಬಯಸಿದರೆ, ಖಂಡಿತವಾಗಿ, ನೋಟು ಬ್ಯಾನ್‌ ಅದಕ್ಕೆ ಕಾರಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

2023ರ ವರ್ಷದಲ್ಲಿ ನಾನು ಬರೆದಿರುವ ಕೆಲವು ಸೇರಿದಂತೆ ಕೆಲವು ಪ್ರಮುಖ ತೀರ್ಪುಗಳ ಬಗ್ಗೆ ಮಾತನಾಡುತ್ತೇನೆ, ನಮ್ಮ ಪ್ರಜಾಸತ್ತಾತ್ಮಕ ಸಮಾಜದ ಅಡಿಪಾಯವನ್ನು ಸುಪ್ರೀಂಕೋರ್ಟ್‌ ಹೇಗೆ ಬಲಪಡಿಸಿದೆ ಎಂಬುದರ ಕುರಿತು ನಾನು ಮಾತನಾಡುತ್ತೇನೆ. ಕೋವಿಡ್-19 2020ರ ಹಿನ್ನೆಲೆಯೊಂದಿಗೆ ನಾನು ಪ್ರಾರಂಭಿಸುತ್ತೇನೆ, ಲಾಕ್‌ಡೌನ್‌ನಿಂದಾಗಿ ಸುಪ್ರೀಂಕೋರ್ಟ್‌ ಮತ್ತು ಇತರ ನ್ಯಾಯಾಲಯಗಳಲ್ಲಿನ ವಿಚಾರಣೆಗಳು ಕಡಿಮೆಯಾದವು ಮತ್ತು ವಿಚಾರಣೆಗಳನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನಡೆಸಲಾಗುತ್ತಿತ್ತು. ಸಾಂಕ್ರಾಮಿಕ ರೋಗದ ನಂತರ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಯುಯು ಲಲಿತ್  ಅವರು ಎಸ್‌ಸಿಯ ಕೆಲಸವನ್ನು ಶ್ರದ್ಧೆಯಿಂದ ಮುನ್ನಡೆಸಿದರು. ಅವರು ದೀರ್ಘಕಾಲ ಬಾಕಿ ಇರುವ ಪ್ರಕರಣಗಳನ್ನು ಸುಧಾರಿಸಲು ಮತ್ತು ವಿಲೇವಾರಿ ಮಾಡಲು ನಿರ್ಧರಿಸಿದರು ಮತ್ತು ಆದ್ದರಿಂದ, ಅವರು 5-ಸಂವಿಧಾನ ಪೀಠಗಳನ್ನು ಸ್ಥಾಪಿಸಿದರು. ತೀರಾ ಇತ್ತೀಚೆಗೆ ಹೈಕೋರ್ಟ್‌ಗೆ ಸೇರಿದ್ದ ನನ್ನನ್ನೂ ಒಳಗೊಂಡಂತೆ ಸುಪ್ರೀಂಕೋರ್ಟ್‌ನ ಎಲ್ಲಾ 30 ನ್ಯಾಯಾಧೀಶರಿಗೆ ಸಂವಿಧಾನ ಪೀಠದಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರ

ಸಾಂವಿಧಾನಿಕ ಪೀಠಗಳು ಕಾನೂನು ವ್ಯಾಪ್ತಿಗೆ ಒಳಪಡುವ 25 ದೀರ್ಘ ಬಾಕಿ ಪ್ರಕರಣಗಳನ್ನು ಕೈಗೆತ್ತಿಕೊಂಡವು. ವಿವೇಕ್ ನಾರಾಯಣ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ 2023ರ ಪ್ರಕರಣವನ್ನು ಎಲ್ಲರೂ ಓದಲೇಬೇಕು. ಇದು ನೋಟು ಅಮಾನ್ಯೀಕರಣ ಕೇಸ್ ಎಂದು ಜನಪ್ರಿಯವಾಗಿದೆ, ಆ ಪೀಠದ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 8, 2016ರಂದು 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧ  ಮಾಡಿದಾಗ ಏನಾಯಿತು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕುತೂಹಲಕಾರಿ ಅಂಶವೆಂದರೆ ಆ ಕಾಲದ ಭಾರತೀಯ ಆರ್ಥಿಕತೆಯಲ್ಲಿ 86% ಕರೆನ್ಸಿಯು 500 ಮತ್ತು 1,000 ರೂಪಾಯಿ ನೋಟುಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

86% ರಷ್ಟು ಕರೆನ್ಸಿಯು 500 ಮತ್ತು 1,000 ನೋಟುಗಳಾಗಿದ್ದು, ಆ ದಿನಗಳಲ್ಲಿ ಕೆಲಸಕ್ಕೆ ಹೋದ ಒಬ್ಬ ಕಾರ್ಮಿಕನು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿಗೆ ಹೋಗುವ ಮೊದಲು ತನ್ನ ನೋಟುಗಳನ್ನು ಬದಲಾಯಿಸಿಕೊಳ್ಳಬೇಕಾಗಿತ್ತು ಎಂದು ಊಹಿಸಿಕೊಳ್ಳಿ. 98% ಕರೆನ್ಸಿ ಆರ್‌ಬಿಐಗೆ ಮರಳಿದೆ, ಹಾಗಾದರೆ ನೋಟು ರದ್ದತಿಯ ಗುರಿ ಏನು ಎಂದು ಪ್ರಶ್ನಿಸಿದ್ದಾರೆ.

ಕಪ್ಪುಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸಲು ಇದು ಉತ್ತಮ ಮಾರ್ಗ ಎಂದು ನಾನು ಭಾವಿಸಿದ್ದೆ. ಅದರ ನಂತರ ಆದಾಯ ತೆರಿಗೆ ಪ್ರಕ್ರಿಯೆಗಳ ಬಗ್ಗೆ ಏನಾಯಿತು ಎಂದು ನಮಗೆ ಗೊತ್ತಿಲ್ಲ. ಆದ್ದರಿಂದ, ಸಾಮಾನ್ಯ ಮನುಷ್ಯನ ಸಂಕಟವು ನಿಜವಾಗಿಯೂ ನನ್ನನ್ನು ಚಿಂತಗೀಡು ಮಾಡಿತ್ತು, ಅದೇ ಕಾರಣಕ್ಕೆ ‘ವಿವೇಕ್ ನಾರಾಯಣ ಶರ್ಮಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ’ ನಾನು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...