Homeಮುಖಪುಟಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು...

ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

- Advertisement -
- Advertisement -

ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದ 12 ದಿನಗಳ ನಂತರ ಹಣಕಾಸು ಸಚಿವಾಲಯವು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ಗೆ ಬಾಂಡ್‌ಗಳ ಮುದ್ರಣವನ್ನು ಔಪಚಾರಿಕವಾಗಿ ತಡೆಹಿಡಿಯಲು ಸೂಚನೆ ನೀಡಿದೆ, ಎನ್ನುವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿದೆ.

ಹಣಕಾಸು ಸಚಿವಾಲಯ ಮತ್ತು ಎಸ್‌ಬಿಐ ನಡುವಿನ ಪತ್ರ ವ್ಯವಹಾರ ಮತ್ತು ಇಮೇಲ್‌ಗಳ ಟಿಪ್ಪಣಿಗಳ ಪ್ರಕಾರ, ಈ ಕುರಿತು ಫೆಬ್ರವರಿ 28ರಂದು ಸೂಚನೆಗಳು ಬಂದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ 2ರಂದು ಸತತ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಆರಂಭದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಮೂರು ತಿಂಗಳ ನಂತರ ಅಂದರೆ ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ಘೋಷಿಸಿದೆ ಮತ್ತು ದೇಣಿಗೆಗಳ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಫೆಬ್ರವರಿ 27ರ ಟಿಪ್ಪಣಿಯು 400 ಬುಕ್‌ಲೆಟ್‌ಗಳು ಮತ್ತು 10,000 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಆದೇಶಿಸಿರುವುದನ್ನು ತೋರಿಸಿದೆ. ಅಂದರೆ ಎಲೆಕ್ಟೋರಲ್ ಬಾಂಡ್‌ಗಳ ಕುರಿತ ಅಂತಿಮ ತೀರ್ಪಿಗೆ ಮೂರು ದಿನಗಳ ಮೊದಲು ಫೆ. 12ರಂದು ಈ ಆದೇಶವನ್ನು ನೀಡಲಾಗಿದೆ. ಎಲೆಕ್ಟೋರಲ್‌ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದು ಘೋಷಿಸಿದ ಮೂರು ದಿನಗಳ ಹಿಂದೆ ತಲಾ ರೂ 1 ಕೋಟಿ ಮೌಲ್ಯದ 10,000 ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಕೇಂದ್ರ ವಿತ್ತ ಸಚಿವಾಲಯವು ಸೆಕ್ಯುರಿಟಿ ಪ್ರಿಂಟಿಂಗ್‌ ಎಂಡ್‌ ಮಿಂಟಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾಗೆ (ಎಸ್‌ಪಿಎಂಸಿಐಎಲ್)‌ ಅಂತಿಮ ಅನುಮೋದನೆ ನೀಡಿತ್ತು ಎಂದು indianexpress.com ವರದಿ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆ ದೊರೆಯುವ ಮುಂಚೆ ಎಸ್‌ಪಿಎಂಸಿಐಎಲ್‌ 8,350 ಬಾಂಡ್‌ಗಳನ್ನು ಮುದ್ರಿಸಿ ಎಸ್‌ಬಿಐಗೆ ನೀಡಿತ್ತು.

ಇದಾದ ಒಂದು ದಿನದ ನಂತರ, ಎಸ್‌ಬಿಐನ ಬ್ಯಾಂಕಿಂಗ್ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ‘ಚುನಾವಣಾ ಬಾಂಡ್‌ಗಳ ಮುದ್ರಣವನ್ನು ತಡೆಹಿಡಿಯಿರಿ – ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ಎಂಬ ಶೀರ್ಷಿಕೆಯ ಮೇಲ್‌ನಲ್ಲಿ ಮುದ್ರಣವನ್ನು ನಿಲ್ಲಿಸಲು ಆದೇಶಗಳನ್ನು ಕಳುಹಿಸಿದ್ದಾರೆ.

ನಾವು 23.02.2024ರ ಒಟ್ಟು 8,350 ಬಾಂಡ್‌ಗಳ ಇಮೇಲ್‌ನ್ನು ಒಳಗೊಂಡಿರುವ ಚುನಾವಣಾ ಬಾಂಡ್‌ಗಳ 4 ಬಾಕ್ಸ್‌ಗಳ ಭದ್ರತಾ ರೂಪಗಳ ಸ್ವೀಕೃತಿಯನ್ನು ಅಂಗೀಕರಿಸಿದ್ದೇವೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆ, ಉಳಿದ 1,650 ಎಲೆಕ್ಟೋರಲ್ ಬಾಂಡ್‌ಗೆ ಮುದ್ರಣವನ್ನು ತಡೆಹಿಡಿಯಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಮೇಲ್‌ನಲ್ಲಿ ಹೇಳಲಾಗಿದೆ. ಇದರರ್ಥ ಮುದ್ರಣವನ್ನು ನಿಲ್ಲಿಸುವ ಅಂತಿಮ ಆದೇಶದ ಮೊದಲು, SPMCIL ಈಗಾಗಲೇ ತಲಾ 1 ಕೋಟಿ ಮೌಲ್ಯದ 8,350 ಬಾಂಡ್‌ಗಳನ್ನು ರವಾನಿಸಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಜೆಪಿಯು 2018ರಿಂದ ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂ.ಗಳನ್ನು ಪಡೆದಿದೆ, ಈ ಅವಧಿಯಲ್ಲಿ ಮಾರಾಟವಾದ ಒಟ್ಟು ಬಾಂಡ್ ಮೌಲ್ಯದ 16,518 ಕೋಟಿ ರೂ.ಆಗಿದ್ದು, ಒಟ್ಟು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ನಿಧಿಯಲ್ಲಿ 50% ಬಿಜೆಪಿ ಪಾಲಾಗಿದೆ ಎಂದು ದಾಖಲೆಗಳು ಸೂಚಿಸುತ್ತದೆ.

ಇದನ್ನು ಓದಿ: ದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...