Homeಚಳವಳಿನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

ನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಸಂವಿಧಾನ ಸಭೆಯಲ್ಲಿದ್ದ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ ನೀಡಲಾಗಿದೆ. 

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

1. ಅಮ್ಮು ಸ್ವಾಮಿನಾಥನ್

ಅಮ್ಮು ಸ್ವಾಮಿನಾಥನ್ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಆನಕ್ಕರ ಎಂಬಲ್ಲಿ ಮೇಲ್ಜಾತಿಯ ಹಿಂದೂ ಕುಟುಂಬವೊಂದರಲ್ಲಿ ಜನಿಸಿದರು. ಅವರು 1917ರಲ್ಲಿ ಅನ್ನಿ ಬೆಸೆಂಟ್, ಮಾರ್ಗರೆಟ್ ಕಸಿನ್ಸ್, ಮಾಲತಿ ಪಟವರ್ಧನ್, ದಾದಾಭೋಯ್ ಮತ್ತು ಅಂಬುಜಮ್ಮಾಳ್ ಅವರ ಜೊತೆ ಸೇರಿ ವುಮನ್ಸ್ ಇಂಡಿಯಾ ಅಸೋಸಿಯೇಷನ್ ಎಂಬ ಸಂಘಟನೆಯನ್ನು ಕಟ್ಟಿದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಡಾ. ಬಿ.ಆರ್. ಅಂಬೇಡ್ಕರ್ ಅವರು 24 ನವೆಂಬರ್ 1949ರಲ್ಲಿ ಕರಡು ಸಂವಿಧಾನವನ್ನು ಅಂಗೀಕರಿಸುವ ಗೊತ್ತುವಳಿಯನ್ನು ಮಂಡಿಸಿದಾಗ ಆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅಮ್ಮು ಸ್ವಾಮಿನಾಥನ್ ಅವರು, “ಭಾರತವು ತನ್ನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕೊಟ್ಟಿಲ್ಲ ಎಂದು ಹೊರಗಿನವರು ಹೇಳುತ್ತಿದ್ದರು. ಆದರೆ, ಭಾರತೀಯ ಜನರು ತಮ್ಮ ಸ್ವಂತ ಸಂವಿಧಾನವನ್ನು ರೂಪಿಸಿದಾಗ ಮಹಿಳೆಯರಿಗೆ ದೇಶದ ಯಾವುದೇ ನಾಗರಿಕನಿಗೆ ಇರುವಷ್ಟೇ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ನಾವೀಗ ಹೇಳಬಹುದು” ಎಂದು ಹೇಳಿದ್ದರು.

ಅವರು 1952ರಲ್ಲಿ ಲೋಕಸಭೆಗೆ ಮತ್ತು 1954ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಚಲನಚಿತ್ರ ಚಿತ್ರಗಳಲ್ಲಿ ಅತ್ಯಂತ ಆಸಕ್ತಿಯಿದ್ದ ಅವರು 1959ರಲ್ಲಿ  ಫೆಡರೇಷನ್ ಆಫ್ ಫಿಲ್ಮ್ ಸೊಸೈಟೀಸ್‌ನ ಉಪಾಧ್ಯಕ್ಷರಾದರು. ಆಗ ಸತ್ಯಜಿತ್ ರಾಯ್ ಅಧ್ಯಕ್ಷರಾಗಿದ್ದರು. ಅವರು ಸೆನ್ಸಾರ್ ಮಂಡಳಿ ಮತ್ತು ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ (1960-65) ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು.

2. ದಾಕ್ಷಾಯಣಿ ವೇಲಾಯುಧನ್

ದಾಕ್ಷಾಯಣಿ ವೇಲಾಯುಧನ್ ಅವರು 1912ರ ಜುಲೈ 4ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ಜನಿಸಿದರು. ಅತ್ಯಂತ ಅವಗಣಿತ ಪುಲಯ ಸಮುದಾಯದ ನಾಯಕಿಯಾಗಿದ್ದ ಅವರು ಈ ಸಮುದಾಯದ ಮೊದಲ ತಲೆಮಾರಿನ ವಿದ್ಯಾವಂತೆಯಾಗಿದ್ದು, ಈ ಸಮುದಾಯದಲ್ಲಿ ರವಕೆ ಧರಿಸಿದ ಮೊದಲ ಮಹಿಳೆ.

1945ರಲ್ಲಿ ದಾಕ್ಷಾಯಣಿ ಅವರನ್ನು ರಾಜ್ಯ ಸರಕಾರ ಕೊಚ್ಚಿ ವಿಧಾನ ಮಂಡಳಿಗೆ ನಾಮಕರಣ ಮಾಡಿತು. 1946ರಲ್ಲಿ ಅವರು ಸಂವಿಧಾನ ಸಭೆಗೆ ಆಯ್ಕೆಯಾದ ಮೊದಲ ಮತ್ತು ಏಕೈಕ ದಲಿತ ಮಹಿಳೆ ಎನಿಸಿದರು. ಸಂವಿಧಾನ ಸಭೆಯ ಚರ್ಚೆಗಳ ವೇಳೆ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಅಂಬೇಡ್ಕರ್ ಪರವಾಗಿ ನಿಂತಿದ್ದರು.

3. ಬೇಗಂ ಐಝಾಝ್ ರಸೂಲ್

ಮಾಲೇರ್ ಕೋಟ್ಲಾದ ರಾಜಮನೆತನದಲ್ಲಿ ಹುಟ್ಟಿದ ಅವರು ಯುವ ಜಮೀನ್ದಾರ ನವಾಬ್ ಐಝಾಝ್ ರಸೂಲ್ ಅವರನ್ನು ಮದುವೆಯಾದರು. ಅವರು ಸಂವಿಧಾನ ಸಭೆಯಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ. 1935ರ ಭಾರತ ಸರಕಾರ ಕಾಯಿದೆ ಜಾರಿಗೆ ಬಂದಾಗ ಬೇಗಂ ಹಾಗೂ ಅವರ ಗಂಡ ಮುಸ್ಲಿಂ ಲೀಗ್ ಸೇರಿ ಚುನಾವಣಾ ರಾಜಕೀಯಕ್ಕೆ ಧುಮುಕಿದರು. 1937ರ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು.

ಚಿತ್ರಕೃಪೆ: ಎನ್‌ಡಿಟಿವಿ

1950ರಲ್ಲಿ ಭಾರತದಲ್ಲಿ ಮುಸ್ಲಿಂ ಲೀಗ್ ವಿಸರ್ಜನೆಗೊಂಡಾಗ ಬೇಗಂ ಐಝಾಝ್ ರಸೂಲ್ ಕಾಂಗ್ರೆಸ್ ಸೇರಿದರು. 1952ರಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅವರು 1969ರಿಂದ 1990ರ ತನಕವೂ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯೆಯಾಗಿದ್ದರು. 1971ರಿಂದ 1971ರ ತನಕ ಅವರು ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವೆಯಾಗಿದ್ದರು. 2000ದಲ್ಲಿ ಸಮಾಜಸೇವೆಗಾಗಿ ಅವರಿಗೆ ಪದ್ಮಭೂಷಣದ ಗೌರವ ಸಿಕ್ಕಿತು.

4. ದುರ್ಗಾಬಾಯಿ ದೇಶ್‌ಮುಖ್

ದುರ್ಗಾಬಾಯಿಯವರು 15 ಜುಲೈ 1909ರಲ್ಲಿ ರಾಜಮುಂದ್ರಿಯಲ್ಲಿ ಹುಟ್ಟಿದರು. 12ರ ಹರೆಯದಲ್ಲಿಯೇ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಆಂಧ್ರ ಕೇಸರಿ ಟಿ. ಪ್ರಕಾಶಂ ಅವರ ಜೊತೆ 1930ರ ಮೇಯಲ್ಲಿ ಮದ್ರಾಸ್ ನಗರದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದರು. 1936ರಲ್ಲಿ ಅವರು ಆಂಧ್ರ ಮಹಿಳಾ ಸಭಾವನ್ನು ಸ್ಥಾಪಿದರು. ಅದು ಒಂದೇ ದಶಕದ ಅವಧಿಯಲ್ಲಿ ಮದ್ರಾಸಿನಲ್ಲಿ  ಮಹಾನ್ ಶೈಕ್ಷಣಿಕ ಮತ್ತು ಸಮಾಜಸೇವಾ ಸಂಸ್ಥೆ ಎನಿಸಿಕೊಂಡಿತು.

ಚಿತ್ರಕೃಪೆ: ವಿಮೆನ್ಸ್‌ ವೆಬ್‌

ಅವರು ಕೇಂದ್ರೀಯ ಸಮಾಜ ಕಲ್ಯಾಣ ಮಂಡಳಿ, ರಾಷ್ಟ್ರೀಯ ಮಹಿಳಾ ಶಿಕ್ಷಣ ಮಂಡಳಿ, ಹೆಣ್ಣು ಮಕ್ಕಳು ಮತ್ತು ಮಹಿಳಾ ಶಿಕ್ಷಣ ರಾಷ್ಟ್ರೀಯ ಸಮಿತಿ ಮುಂತಾದ ಸಂಸ್ಥೆಗಳ ಅಧ್ಯಕ್ಷೆಯಾಗಿದ್ದರು. ಅವರು ಸಂಸದೆಯೂ, ಯೋಜನಾ ಆಯೋಗದ ಸದಸ್ಯೆಯೂ ಆಗಿದ್ದರು.

ಅವರು ದಿಲ್ಲಿಯ ಆಂಧ್ರ ಎಜುಕೇಶನಲ್ ಸೊಸೈಟಿಯೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಸಾಕ್ಷರತೆಗೆ ಅವರ ಅಮೋಘ ಕೊಡುಗೆಗಾಗಿ 1971ರಲ್ಲಿ ಅವರಿಗೆ ನಾಲ್ಕನೇ ನೆಹರೂ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. 1975ರಲ್ಲಿ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.

5. ಹಂಸಾ ಜೀವರಾಜ್ ಮೆಹ್ತಾ

ಬರೋಡದ ದಿವಾನ ಮನುಭಾಯ್ ನಂದಶಂಕರ ಮೆಹ್ತಾ ಅವರ ಮಗಳಾಗಿ ಜೂನ್ 3, 1879ರಲ್ಲಿ ಹುಟ್ಟಿದ ಹಂಸಾ ಅವರು ಇಂಗ್ಲೆಂಡ್‌ನಲ್ಲಿ ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರ ಕಲಿತಿದ್ದರು. ಸಮಾಜ ಸುಧಾರಕಿ, ಕಾರ್ಯಕರ್ತೆ, ಶಿಕ್ಷಣ ತಜ್ಞೆ ಹಾಗೂ ಲೇಖಕಿಯಾಗಿಯೂ ಹೆಸರು ಪಡೆದಿದ್ದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಅವರು ಗುಜರಾತಿಯಲ್ಲಿ ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದು, ‘ಗಲಿವರ್‌ನ ಯಾತ್ರೆಗಳು’ ಸೇರಿದಂತೆ ಹಲವು ಇಂಗ್ಲಿಷ್ ಕತೆಗಳನ್ನು ಅನುವಾದಿಸಿದ್ದಾರೆ. ಅವರು 1926ರಲ್ಲಿ ಬಾಂಬೆ ಸ್ಕೂಲ್ ಕಮಿಟಿಗೆ ಆಯ್ಕೆಯಾದರು. 1945-46ರಲ್ಲಿ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್‌ನ ಅಧ್ಯಕ್ಷೆಯಾದರು. ಹೈದರಾಬಾದ್‌ನಲ್ಲಿ ನಡೆದ ಅದರ ಸಮಾವೇಶದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ ಮಹಿಳಾ ಹಕ್ಕುಗಳ ಕುರಿತು ಕಾರ್ಯಕ್ರಮಪಟ್ಟಿಯನ್ನು ಮಂಡಿಸಿದ್ದರು.

ಅವರು 1945ರಿಂದ 1960ರ ತನಕ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಣ ಮಂಡಳಿಯ ಸದಸ್ಯೆ, ಭಾರತೀಯ ಅಂತರವಿಶ್ವವಿದ್ಯಾಲಯ ಮಂಡಳಿಯ ಅಧ್ಯಕ್ಷೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಉಪಕುಲಪತಿ ಇತ್ಯಾದಿಯಾಗಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...