Homeಮುಖಪುಟದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಲೋಕತಂತ್ರ ಬಚಾವೋ’ ರ್‍ಯಾಲಿ

ದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ‘ಲೋಕತಂತ್ರ ಬಚಾವೋ’ ರ್‍ಯಾಲಿ

- Advertisement -
- Advertisement -

ಪ್ರತಿಪಕ್ಷದ ಇಂಡಿಯಾ ಬ್ಲಾಕ್ ನಾಯಕರು ಭಾನುವಾರ ತಮ್ಮ ‘ಲೋಕತಂತ್ರ ಬಚಾವೋ’ (ಪ್ರಜಾಪ್ರಭುತ್ವ ಉಳಿಸಿ) ರ್ಯಾಲಿಗಾಗಿ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಸಮಾವೇಶಗೊಂಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿರುವುದನ್ನು ಖಂಡಿಸಿ ಈ ರ್ಯಾಲಿ ಎಂದು ಮೈತ್ರಿಕೂಟದ ಸದಸ್ಯ ಎಎಪಿ ಹೇಳಿದರೆ, ಇಂಡಿಯಾ ಮೈತ್ರಿಕೂಟದ ಅತಿದೊಡ್ಡ ಪಕ್ಷ ಕಾಂಗ್ರೆಸ್, ಇದು ನಿರ್ದಿಷ್ಟ ವ್ಯಕ್ತಿ ಅಥವಾ ವಿಚಾರಕ್ಕೆ ಸಂಬಂಧಿಸಿದ ಪ್ರತಿಭಟನೆಯಲ್ಲ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರದ ವಿರುದ್ಧ ಪ್ರತಿಪಕ್ಷಗಳು ಧ್ವನಿ ಎತ್ತಲಿವೆ ಎಂದು ಹೇಳಿದೆ.

ಕೆಲವು ಷರತ್ತುಗಳೊಂದಿಗೆ ದೆಹಲಿ ಪೊಲೀಸರು ರ್ಯಾಲಿಗೆ ಅನುಮತಿ ನೀಡಿದ್ದಾರೆ. ಸ್ಥಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅವಕಾಶ ನೀಡಬಹುದಾದರೂ,  20,000 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದೆ. 30,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ. ಆದರೆ AAP ಪಕ್ಷವು ಮೈದಾನವು ಸಂಪೂರ್ಣವಾಗಿ ತುಂಬಲಿದೆ ಎಂದು ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಇಂಡಿಯಾ ಬ್ಲಾಕ್‌ನ ಬಹುತೇಕ ಎಲ್ಲಾ ಉನ್ನತ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಸಿಎಂ ಅವರನ್ನು ಜನವರಿಯಲ್ಲಿ ಇಡಿ ಬಂಧಿಸಿತ್ತು.

ಈ ಸರ್ವಾಧಿಕಾರಿ ಮತ್ತು ಕೋಮುವಾದಿ ಸರ್ಕಾರದ ವಿರುದ್ಧ ದೇಶಾದ್ಯಂತ ಜನರು ಒಟ್ಟುಗೂಡಿದ್ದಾರೆ ಎಂಬ ಸಂದೇಶವನ್ನು ನೀಡುವುದಾಗಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನ, ಯುಎಪಿಎ ನಿರಂತರ ಬಳಕೆ ಮತ್ತು ಇಡಿ-ಸಿಬಿಐ ದುರ್ಬಳಕೆ ವಿರುದ್ಧ ದೆಹಲಿಯ ಈ ಮಹಾ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ, ಇದು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನ ಎಂದು ಕೂಡ ಹೇಳಲಾಗುತ್ತಿದೆ.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...