Homeಫ್ಯಾಕ್ಟ್‌ಚೆಕ್Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದ ಹಳೆಯ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಮನಮೋಹನ್ ಸಿಂಗ್ ಅವರು ಭಾರತದ ಪ್ರಧಾನಿಯಾಗಿದ್ದರೂ ಕೂಡ, ಅವರಿಗೆ ಗೌರವ ಕೊಡದೆ ಸೋನಿಯಾ ಗಾಂಧಿಯವರು ಹಸೀನಾ ಜೊತೆ ಮಾತುಕತೆ ನಡೆಸಿದ್ದಾರೆ” ಎಂದು ಹೇಳಲಾಗಿದೆ.

ಜಿತೇಂದ್ರ ಪ್ರತಾಪ್ ಸಿಂಗ್‘ ಎಂಬ ಎಕ್ಸ್ ಬಳಕೆದಾರ ವೈರಲ್ ಪೋಟೋ ಹಂಚಿಕೊಂಡಿದ್ದು, “ಒಮ್ಮೆ ನಮ್ಮ ದೇಶದ ಕಾಂಗ್ರೆಸ್ ಪ್ರಧಾನಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಒಬ್ಬ ಮಾಮೂಲಿ ಮಂತ್ರಿಯಂತೆ ಪಕ್ಕದಲ್ಲಿ ಕೂತಿರುವ ರೀತಿ ನೋಡಿ” ಎಂದು ಬರೆದುಕೊಂಡಿದ್ದಾರೆ.

‘ಲಲಿತ್ ಕಿಶೋರ್ ಭಾರದ್ವಾಜ್’ ಫೇಸ್‌ಬುಕ್ ಬಳಕೆದಾರ ವೈರಲ್ ಫೋಟೋವನ್ನು ಹಂಚಿಕೊಂಡಿದ್ದು, ಇದೇ ರೀತಿಯ ಪ್ರತಿಪಾದನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅಕ್ಟೋಬರ್ 6, 2019ರಂದು ಟೈಮ್ಸ್ ಆಫ್‌ ಇಂಡಿಯಾದಲ್ಲಿ ಪ್ರಕಟಗೊಂಡ ಸುದ್ದಿಯೊಂದು ಲಭ್ಯವಾಗಿದೆ. ಆ ಸುದ್ದಿಯಲ್ಲಿ “ಬಾಂಗ್ಲಾದೇಶದ ಸ್ವಾತಂತ್ರ್ಯತೋತ್ಸವದ 50ನೇ ವರ್ಷಾಚರಣೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೀಡಿರುವ ಆಹ್ವಾನವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ವೀಕರಿಸಿದ್ದಾರೆ. ಶೇಖ್ ಹಸೀನಾ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಿದ್ದಾರೆ” ಎಂದು ಹೇಳಲಾಗಿದೆ.

ಅಕ್ಟೋಬರ್ 6, 2019ರಂದು ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲೂ ವೈರಲ್ ಫೋಟೋ ಪೋಸ್ಟ್ ಮಾಡಿತ್ತು. ಅದರಲ್ಲಿ, “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ಆನಂದ್ ಶರ್ಮಾ ಸೇರಿದಂತೆ ಕಾಂಗ್ರೆಸ್ ನಿಯೋಗ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿತು” ಎಂದು ತಿಳಿಸಿಲಾಗಿದೆ.

ಮಾರ್ಚ್ 2023ರಲ್ಲಿ ಇದೇ ಫೋಟೋ ವೈರಲ್ ಆಗಿತ್ತು. ಆ ಸಂದರ್ಭದಲ್ಲಿ ಬೂಮ್ ಹಿಂದಿ ವೆಬ್‌ಸೈಟ್‌ ಈ ಕುರಿತು ಫ್ಯಾಕ್ಟ್‌ಚೆಕ್ ಮಾಡಿತ್ತು. ಅದರಲ್ಲಿ” ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಅದು 2019ರ ಫೋಟೋ. ಫೋಟೋದಲ್ಲಿರುವಂತೆ ಶೇಖ್ ಹಸೀನಾ ಬಳಿ ಪ್ರಧಾನಿ ಮನಮೋಹನ್ ಸಿಂಗ್ ಬದಲು ಸೋನಿಯಾ ಗಾಂಧಿ ಕುಳಿತಿದ್ದಾರೆ. ಈ ಮೂಲಕ ಪ್ರಧಾನಿಗೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಆದರೆ, 2019ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ” ಎಂದು ಹೇಳಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ಫೋಟೋ 2019ರದ್ದು. ಭಾರತಕ್ಕೆ ಆಗಮಿಸಿದ್ದ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್‌ ನಿಯೋಗ ಭೇಟಿ ಮಾಡಿತ್ತು. ಆ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ. ಹಾಗಾಗಿ, ಸೋನಿಯಾ ಗಾಂಧಿ ಪ್ರಧಾನಿಯನ್ನು ಮೂಲೆಗುಂಪು ಮಾಡಿ ಮುಂಬದಿ ಕುರ್ಚಿಯಲ್ಲಿ ಕುಳಿತಿದ್ದರು ಎನ್ನುವ ವಾದ ಸುಳ್ಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...