Homeಮುಖಪುಟಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಚುನಾವಣಾ ಬಾಂಡ್‌ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ ಬೆನ್ನಲ್ಲಿ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ‘ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನ ‘ತಂತಿ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನವನ್ನು ಭಾನುವಾರ ಪ್ರಸಾರ ಮಾಡಲಾಗಿತ್ತು.

ಪ್ರತಿದಿನವೂ, ಪ್ರಧಾನಮಂತ್ರಿ ಬೂಟಾಟಿಕೆಗಳನ್ನು ಮುಂದುವರಿಸುತ್ತಾರೆ ಮತ್ತು ಅಪ್ರಾಮಾಣಿಕತೆಯಲ್ಲಿ ಮತ್ತಷ್ಟು ಆಳಕ್ಕೆ ಇಳಿಯುತ್ತಾರೆ. ನಿಧಿ ಎಲ್ಲಿಂದ ಬಂದಿದೆ, ಹೇಗೆ ಬಳಕೆಯಾಗುತ್ತಿದೆ ಎಂಬುವುದು ಅವರೇ ಸ್ಥಾಪಿಸಿದ ಚುನಾವಣಾ ಬಾಂಡ್ ಯೋಜನೆಯಿಂದ ಗೊತ್ತಾಗಿದೆ ಎಂದು ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಹಣ ಬಂದಿದೆ ಎಂಬ ವಿವರಗಳನ್ನು ಸಾರ್ವಜನಿಕರಿಂದ ಮರೆಮಾಡಲು ಮೋದಿ ಬಯಸಿದ್ದರು, 2018ರಿಂದ 2024 ರವರೆಗೆ ಆರು ವರ್ಷಗಳ ಕಾಲ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆ ಎಂದು  ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ.

2018ರ ಜನವರಿಯಲ್ಲಿ ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದೆ. ಫೆಬ್ರವರಿ 2024ರಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ತೀರ್ಪು ನೀಡಿ ರದ್ದುಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ(ಎಸ್‌ಬಿಐ) ಚುನಾವಣಾ ಬಾಂಡ್‌ ಖರೀದಿದಾರರ ಬಗ್ಗೆ ಸಂಫೂರ್ಣ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ. ಸುಪ್ರೀಂಕೋರ್ಟ್‌ನ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್ ಮಾಡಲಾಗಿದೆ.

ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ, ‘ರಿಮೋಟ್ ಕಂಟ್ರೋಲ್’ ಎಸ್‌ಬಿಐ ನ್ಯಾಯಾಲಯಕ್ಕೆ ‘ಸುಳ್ಳು’ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ದಾನಿಗಳ ಡೇಟಾವನ್ನು ಹೊಂದಿಸಲು 3 ತಿಂಗಳ  ಕಾಲಾವಾಕಾಶವನ್ನು ಕೋರಿದಾಗ ಎಸ್‌ಬಿಐ ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ಹೇಳಿದೆ. ನಮ್ಮ ತಂಡವು ಪೈಥಾನ್ ಕೋಡ್‌ನ ಐದು ಸಾಲುಗಳನ್ನು ತೆಗೆದುಕೊಂಡಿದೆ ಮತ್ತು ಪ್ರತಿ ದಾನಿಯನ್ನು ಅವರು ದೇಣಿಗೆ ನೀಡಿದ ರಾಜಕೀಯ ಪಕ್ಷದೊಂದಿಗೆ ಹೊಂದಿಸಲು ಹದಿನೈದು ಸೆಕೆಂಡುಗಳಿಗಿಂತ ಕಡಿಮೆ ಸಮಯ ತೆಗೆದುಕೊಂಡಿದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಬಾಂಡ್‌ಗಳಿಂದಾಗಿ ಆಡಳಿತಾರೂಢ ಬಿಜೆಪಿ ಹಿನ್ನೆಡೆಯನ್ನು ಕಾಣಲಿದೆ ಎಂಬುವುದನ್ನು ನಿರಾಕರಿಸುವ ಪ್ರಧಾನಿಗೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು,  8,000 ಕೋಟಿಗೂ ಹೆಚ್ಚು ಮೌಲ್ಯದ ದೇಣಿಗೆಯೊಂದಿಗೆ ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯ ಅತಿ ದೊಡ್ಡ ಫಲಾನುಭವಿಯಾಗಿದೆ. ಈ ದತ್ತಾಂಶವು ನಿಮ್ಮ ಪಕ್ಷ ಮತ್ತು ಸರ್ಕಾರದ ಬೃಹತ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕೇಸ್‌ ದಾಖಲು: ‘ಮೋದಿ ಪರಿವಾರ’ದ ವಿರುದ್ಧ ಎಫ್‌ಐಆರ್ ಎಂದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...