Homeಮುಖಪುಟಅರುಣಾಚಲ ಪ್ರದೇಶ: ಚುನಾವಣಾ ಪೂರ್ವ 'ಆಪರೇಷನ್ ಕಮಲ'; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಅರುಣಾಚಲ ಪ್ರದೇಶ: ಚುನಾವಣಾ ಪೂರ್ವ ‘ಆಪರೇಷನ್ ಕಮಲ’; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಕೆಯಾಗದ ಹಾಗೂ ಕೆಲ ಕಾಂಗ್ರೆಸ್‌ ಸದಸ್ಯರು ತಮ್ಮ ಉಮೇದುವಾರಿಕೆ ವಾಪಸ್ ಪಡೆದ ನಂತರ, ಬಿಜೆಪಿಯ 10 ಜನರು ಶಾಸಕರಾಗಿ ಅವಿರೋಧ ಆಯ್ಕೆಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 10 ಜನ ಈಗಾಗಲೇ ಎದುರಾಳಿಗಳಿಲ್ಲದೆ ಆಯ್ಕೆಯಾಗಿದ್ದು, ಬಿಜೆಪಿಯು ಉಳಿದ 50 ಸ್ಥಾನಗಳನ್ನು ಪೂರ್ಣ ಸ್ವೀಪ್ ಮಾಡುವ ಗುರಿ ಹೊಂದಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಚುನಾವಣಾ ಪೂರ್ವ ‘ಆಪರೇಷನ್ ಕಮಲ’ದಿಂದ ಸಿಎಂ, ಡಿಸಿಎಂ ಸೇರಿದಂತೆ ಉಳಿದ ಎಂಟು ಜನ ಅವಿರೋಧ ಆಯ್ಕೆಯಾಗಿದ್ದಾರೆ.

ಈಗಾಗಲೇ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಎಲ್ಲ 60 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಟಾನಗರದಲ್ಲಿ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ ಚೌನಾ ಮೇನ್ ಚೌಕಮ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದರೆ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಅರುಣಾಚಲ ಪ್ರದೇಶ ವಿಧಾನಸಭೆಗೆ ಅವಿರೋಧವಾಗಿ ಗೆದ್ದರು. ದಸಾಂಗ್ಲು ಪುಲ್ ಅವರು ಹಯುಲಿಯಾಂಗ್ ಅಸೆಂಬ್ಲಿ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದರು.

ದಸಾಂಗ್ಲು ಪುಲ್ ಅವರ ಏಕೈಕ ಎದುರಾಳಿ ಕಾಂಗ್ರೆಸ್ ಪಕ್ಷದ ಬಫುಟ್ಸೊ ಕ್ರೋಂಗ್ ಹಿಂಪಡೆದ ನಂತರ ಅವರ ನಾಮನಿರ್ದೇಶನವು ಅವಿರೋಧವಾಗಿ ನಡೆಯಿತು. ಅವರು ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಪತ್ನಿ. ವಿಧಾನಸಭೆ ಚುನಾವಣೆಯಲ್ಲಿ ಅವಿರೋಧವಾಗಿ ಗೆಲುವು ಸಾಧಿಸುವ ಸೂಚನೆ ನೀಡಿದ್ದಾರೆ. ರಾಜ್ಯದ 60 ಶಾಸಕರ ಪೈಕಿ 10 ಶಾಸಕರ ಅವಿರೋಧ ಗೆಲುವಿನ ಆರಂಭಕ್ಕೆ ಸಿಎಂ ಪೆಮಾ ಖಂಡು ಮತ್ತು ಡಿಸಿಎಂ ಚೌನಾ ಮೇನ್ ಅವರನ್ನು ಅಭಿನಂದಿಸಿದ ಅಶೋಕ್ ಸಿಂಘಾಲ್ ಸಚಿವ ಮತ್ತು ಸಂಸದೀಯ ಚುನಾವಣಾ ಉಸ್ತುವಾರಿ, ‘ಇದು ಮೋದಿ ಕಿ ಗ್ಯಾರಂಟಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಸಿಎಂ ಪೇಮಾ ಖಂಡು ಅವರ ನಾಯಕತ್ವದಲ್ಲಿ ಅರುಣಾಚಲ ಪ್ರದೇಶದ ಜನರ ಅಚಲ ಬೆಂಬಲ ಮತ್ತು ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿ ಎಲ್ಲಾ 60 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ಹೇಳಿದರು.

‘ಅರುಣಾಚಲ ಲೋಕಸಭೆಯಲ್ಲಿ ಇಬ್ಬರೂ ಅಭ್ಯರ್ಥಿಗಳು ದಾಖಲೆಯ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವೀಪ್ ಮಾಡುತ್ತಿದೆ! ಇಟಾನಗರಕ್ಕೆ ನನ್ನ ಭೇಟಿಯ ಸಂದರ್ಭದಲ್ಲಿ, ತಮ್ಮ ಅಸೆಂಬ್ಲಿ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವ ಮುಖ್ಯಮಂತ್ರಿ ಪೆಮಾ ಖಂಡು, ಉಪಮುಖ್ಯಮಂತ್ರಿ ಚೌನಾ ಮತ್ತು ಅರುಣಾಚಲ ಬಿಜೆಪಿ ಶಾಸಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. ನಮ್ಮ ಸಮರ್ಪಿತ ಪಕ್ಷದ ಕಾರ್ಯಕರ್ತರಲ್ಲಿನ ಜೋಶ್ ಮತ್ತು ಸಂಭ್ರಮವನ್ನು ನೋಡಿ ಅತೀವ ಸಂತೋಷವಾಯಿತು. ಏಪ್ರಿಲ್ 19ರಂದು ಬನ್ನಿ, ಚುನಾವಣೆಯಲ್ಲಿ ನಾವು ಪ್ರಚಂಡ ಗೆಲುವು ಸಾಧಿಸುತ್ತೇವೆ!” ಕೇಂದ್ರ ಸಚಿವ ಮತ್ತು ಅರುಣಾಚಲದ ಲೋಕಸಭಾ ಸಂಸದ ಕಿರಣ್ ರಿಜಿಜು ಅವರು ತಮ್ಮ ಎಕ್ಸ್‌ನಲ್ಲಿ ಹೇಳಿದ್ದಾರೆ.

ಚುನಾವಣೆಗೆ ಪೂರ್ವ ‘ಆಪರೇಷನ್ ಕಮಲ’

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಅರುಣಾಚಲ ಪ್ರದೆಶದಲ್ಲಿ ಅಧೀಕಾರ ಉಳಿಸಿಕೊಳ್ಳಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಮುಂಚೆ ‘ಆಪರೇಷನ್’ ಆರಂಭಿಸಿದೆ ಎನ್ನಲಾಗುತ್ತಿದೆ.

ಅರುಣಾಚಲ ಪ್ರದೇಶ ವಿಧಾನಸಭೆಯ ಎಲ್ಲಾ 60 ಸದಸ್ಯರಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಿದೆ. ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯು ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ನಡೆಯಲಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ನಂತರ, ಜನತಾ ದಳ-ಯುನೈಟೆಡ್ ಸೇರಿದಂತೆ ಇತರ ಪಕ್ಷಗಳ ಏಳು ಶಾಸಕರು, ಬಿಜೆಪಿಗೆ ಸೇರ್ಪಡೆಗೊಂಡರು. 2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ತನ್ನ ಮೊದಲ ಚುನಾಯಿತ ಸರ್ಕಾರವನ್ನು ರಚಿಸಿತು. ಮುಖ್ಯಮಂತ್ರಿ ಖಂಡು ಅವರು 2016 ರಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ್ದರು. ಅವರು ಹಲವಾರು ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಅರುಣಾಚಲದ ಪೀಪಲ್ಸ್ ಪಾರ್ಟಿಗೆ ಸೇರಿದರು. ಇತ್ತೀಚೆಗೆ ಇಬ್ಬರು ಎನ್‌ಸಿಪಿ ಮತ್ತು ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...