Homeಮುಖಪುಟಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

ಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

- Advertisement -
- Advertisement -

ಭಾರತದ ಭೂಭಾಗದ ಮೇಲೆ ಚೀನಾ ಹಕ್ಕು ಸಾಧಿಸುವುದನ್ನು ಮುಂದುವರಿಸಿದ್ದು,  ಅರುಣಾಚಲ ಪ್ರದೇಶದ ಭೂಭಾಗವನ್ನು ಒಳಗೊಂಡ 30 ಪ್ರದೇಶಗಳ ಚೀನಿ ಹೆಸರಿನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣವನ್ನು ಭಾರತ ತಿರಸ್ಕರಿಸುತ್ತಿದೆ. ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪ್ರತಿಪಾದಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಭಾನುವಾರ ವರದಿ ಮಾಡಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಈ ಪ್ರದೇಶಕ್ಕೆ 30 ಹೆಚ್ಚುವರಿ ಹೆಸರುಗಳನ್ನು  ನೀಡಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿನ ಆರು ಸ್ಥಳಗಳ ಪ್ರಮಾಣಿತ ಹೆಸರುಗಳ ಮೊದಲ ಪಟ್ಟಿಯನ್ನು 2017ರಲ್ಲಿ ಬಿಡುಗಡೆ ಮಾಡಿತ್ತು, ಇದಾದ ಬಳಿಕ 15 ಸ್ಥಳಗಳ ಎರಡನೇ ಪಟ್ಟಿಯನ್ನು 2021ರಲ್ಲಿ ಬಿಡುಗಡೆ ಮಾಡಿದೆ ಮತ್ತು ನಂತರ 2023ರಲ್ಲಿ 11 ಸ್ಥಳಗಳಿಗೆ ಹೆಸರುಗಳೊಂದಿಗೆ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೇಲಾ ಸುರಂಗದ ಉದ್ಘಾಟಣೆ, ಪ್ರಧಾನಿ ಭೇಟಿ ಬಳಿಕ ಚೀನಾ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆಯನ್ನು ಮುಂದುವರಿಸಿದೆ.

ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು ಈ ಪ್ರದೇಶದ ಮೇಲೆ ಹಕ್ಕು ಪ್ರತಿಪಾದಿಸಿ ನೀಡುವ ಹೇಳಿಕೆಗಳು ಕೋಲಾಹಲಕ್ಕೆ ಕಾರಣವಾಗಿದೆ. ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ (ಎನ್‌ಯುಎಸ್) ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್ (ಐಎಸ್‌ಎಎಸ್) ನಲ್ಲಿ ಉಪನ್ಯಾಸದ ವೇಳೆ ಮಾತನಾಡಿದ ಎಸ್.ಜೈಶಂಕರ್, ಇದು ಹೊಸ ವಿಚಾರವಲ್ಲ. ಅರುಣಾಚಲ ಪ್ರದೇಶದ ಮೇಲೆ ಪುನಾರಾವರ್ತಿತವಾಗಿ ಹಕ್ಕು ಪ್ರತಿಪಾದಿಸುತ್ತಿರುವ ಚೀನಾದ ನಡೆ ಹಾಸ್ಯಾಸ್ಪದ. ನಮ್ಮ ಗಡಿ ರಾಜ್ಯ ಅರುಣಾಚಲ ಪ್ರದೇಶ ನೈಸರ್ಗಿಕವಾಗಿಯೇ ಭಾರತದ ಅವಿಭಾಜ್ಯ ಅಂಗ. ಆದ್ದರಿಂದ, ನಾವು ಈ ಬಗ್ಗೆ ಬಹಳ ಸ್ಪಷ್ಟವಾಗಿ, ಸ್ಥಿರವಾಗಿರುತ್ತೇವೆ ಎಂದು ನಾನು ಭಾವಿಸುತ್ತೇನೆ ಮತ್ತು ಇದು ನಡೆಯುತ್ತಿರುವ ಗಡಿ ಚರ್ಚೆಗಳ ಭಾಗವಾಗಿದೆ ಎಂದು ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು.

ಅರುಣಾಚಲ ಪ್ರದೇಶವನ್ನು ಭಾರತದ ಭೂ ಭಾಗವಾಗಿ ಗುರುತಿಸುವ ಅಮೆರಿಕದ ಹೇಳಿಕೆಯ ಬಗ್ಗೆ ಬೀಜಿಂಗ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಮಾರ್ಚ್ 9ರಂದು ಅರುಣಾಚಲ ಪ್ರದೇಶವನ್ನು ಯುಎಸ್ ಭಾರತದ ಭೂಪ್ರದೇಶವೆಂದು ಗುರುತಿಸುತ್ತದೆ. ಗಡಿ ನಿಯಂತ್ರಣ ರೇಖೆಯಾದ್ಯಂತ ಆಕ್ರಮಣ ಅಥವಾ ಮಿಲಿಟರಿಗಳ ಮೂಲಕ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಅಮೆರಿಕಾ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು, ಇದು ಚೀನಾ-ಭಾರತದ ಗಡಿ ಸಮಸ್ಯೆ, ಇದು ಉಭಯ ದೇಶಗಳ ನಡುವಿನ ವಿಷಯವಾಗಿದೆ ಮತ್ತು ಇದರಲ್ಲಿ ಅಮೆರಿಕ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....