Homeಮುಖಪುಟಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

ಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

- Advertisement -
- Advertisement -

ಭಾರತದ ಭೂಭಾಗದ ಮೇಲೆ ಚೀನಾ ಹಕ್ಕು ಸಾಧಿಸುವುದನ್ನು ಮುಂದುವರಿಸಿದ್ದು,  ಅರುಣಾಚಲ ಪ್ರದೇಶದ ಭೂಭಾಗವನ್ನು ಒಳಗೊಂಡ 30 ಪ್ರದೇಶಗಳ ಚೀನಿ ಹೆಸರಿನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣವನ್ನು ಭಾರತ ತಿರಸ್ಕರಿಸುತ್ತಿದೆ. ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪ್ರತಿಪಾದಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಭಾನುವಾರ ವರದಿ ಮಾಡಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಈ ಪ್ರದೇಶಕ್ಕೆ 30 ಹೆಚ್ಚುವರಿ ಹೆಸರುಗಳನ್ನು  ನೀಡಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿನ ಆರು ಸ್ಥಳಗಳ ಪ್ರಮಾಣಿತ ಹೆಸರುಗಳ ಮೊದಲ ಪಟ್ಟಿಯನ್ನು 2017ರಲ್ಲಿ ಬಿಡುಗಡೆ ಮಾಡಿತ್ತು, ಇದಾದ ಬಳಿಕ 15 ಸ್ಥಳಗಳ ಎರಡನೇ ಪಟ್ಟಿಯನ್ನು 2021ರಲ್ಲಿ ಬಿಡುಗಡೆ ಮಾಡಿದೆ ಮತ್ತು ನಂತರ 2023ರಲ್ಲಿ 11 ಸ್ಥಳಗಳಿಗೆ ಹೆಸರುಗಳೊಂದಿಗೆ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೇಲಾ ಸುರಂಗದ ಉದ್ಘಾಟಣೆ, ಪ್ರಧಾನಿ ಭೇಟಿ ಬಳಿಕ ಚೀನಾ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆಯನ್ನು ಮುಂದುವರಿಸಿದೆ.

ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು ಈ ಪ್ರದೇಶದ ಮೇಲೆ ಹಕ್ಕು ಪ್ರತಿಪಾದಿಸಿ ನೀಡುವ ಹೇಳಿಕೆಗಳು ಕೋಲಾಹಲಕ್ಕೆ ಕಾರಣವಾಗಿದೆ. ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ (ಎನ್‌ಯುಎಸ್) ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್ (ಐಎಸ್‌ಎಎಸ್) ನಲ್ಲಿ ಉಪನ್ಯಾಸದ ವೇಳೆ ಮಾತನಾಡಿದ ಎಸ್.ಜೈಶಂಕರ್, ಇದು ಹೊಸ ವಿಚಾರವಲ್ಲ. ಅರುಣಾಚಲ ಪ್ರದೇಶದ ಮೇಲೆ ಪುನಾರಾವರ್ತಿತವಾಗಿ ಹಕ್ಕು ಪ್ರತಿಪಾದಿಸುತ್ತಿರುವ ಚೀನಾದ ನಡೆ ಹಾಸ್ಯಾಸ್ಪದ. ನಮ್ಮ ಗಡಿ ರಾಜ್ಯ ಅರುಣಾಚಲ ಪ್ರದೇಶ ನೈಸರ್ಗಿಕವಾಗಿಯೇ ಭಾರತದ ಅವಿಭಾಜ್ಯ ಅಂಗ. ಆದ್ದರಿಂದ, ನಾವು ಈ ಬಗ್ಗೆ ಬಹಳ ಸ್ಪಷ್ಟವಾಗಿ, ಸ್ಥಿರವಾಗಿರುತ್ತೇವೆ ಎಂದು ನಾನು ಭಾವಿಸುತ್ತೇನೆ ಮತ್ತು ಇದು ನಡೆಯುತ್ತಿರುವ ಗಡಿ ಚರ್ಚೆಗಳ ಭಾಗವಾಗಿದೆ ಎಂದು ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು.

ಅರುಣಾಚಲ ಪ್ರದೇಶವನ್ನು ಭಾರತದ ಭೂ ಭಾಗವಾಗಿ ಗುರುತಿಸುವ ಅಮೆರಿಕದ ಹೇಳಿಕೆಯ ಬಗ್ಗೆ ಬೀಜಿಂಗ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಮಾರ್ಚ್ 9ರಂದು ಅರುಣಾಚಲ ಪ್ರದೇಶವನ್ನು ಯುಎಸ್ ಭಾರತದ ಭೂಪ್ರದೇಶವೆಂದು ಗುರುತಿಸುತ್ತದೆ. ಗಡಿ ನಿಯಂತ್ರಣ ರೇಖೆಯಾದ್ಯಂತ ಆಕ್ರಮಣ ಅಥವಾ ಮಿಲಿಟರಿಗಳ ಮೂಲಕ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಅಮೆರಿಕಾ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು, ಇದು ಚೀನಾ-ಭಾರತದ ಗಡಿ ಸಮಸ್ಯೆ, ಇದು ಉಭಯ ದೇಶಗಳ ನಡುವಿನ ವಿಷಯವಾಗಿದೆ ಮತ್ತು ಇದರಲ್ಲಿ ಅಮೆರಿಕ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...