Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...