Homeಮುಖಪುಟಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಎರಡು ವಾರಗಳ ಆಕ್ರಮಣದ ಬಳಿಕ ಆಸ್ಪತ್ರೆ ತೊರೆದ ಇಸ್ರೇಲ್ ಸೇನೆ

- Advertisement -
- Advertisement -

ಗಾಝಾದ ಪ್ರಮುಖ ಆಸ್ಪತ್ರೆಯಾಗಿರುವ ಅಲ್- ಶಿಫಾದಲ್ಲಿ ಸತತ ಎರಡು ವಾರಗಳ ಕಾಲ ಆಕ್ರಮಣ ನಡೆಸಿದ ಇಸ್ರೇಲ್ ಸೇನೆ, ಆಸ್ಪತ್ರೆಯನ್ನು ಸಂಪೂರ್ಣ ಧ್ವಂಸಗೊಳಿಸಿ ಬಿಟ್ಟು ತೆರಳಿದೆ.

ಬಿಬಿಸಿ ವರದಿಯ ಪ್ರಕಾರ, ಇಸ್ರೇಲ್ ಸೇನೆ ಅಲ್-ಶಿಫಾ ಆಸ್ಪತ್ರೆ ತೊರೆದ ಬಳಿಕ ಅಲ್ಲಿ ನೂರಾರು ಮೃತದೇಹಗಳು ದೊರೆತಿವೆ ಎಂದು ಹಮಾಸ್‌ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ನಾವು 200 ಜನರನ್ನು ಹತ್ಯೆಗೈದಿದ್ದೇವೆ ಮತ್ತು 500 ಮಂದಿಯನ್ನು ಬಂಧಿಸಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಹಮಾಸ್ ಬಂಡುಕೋರರು ಅಲ್‌-ಶಿಫಾದಲ್ಲಿ ಅಡಗಿ ಕುಳಿತಿದ್ದ ಕಾರಣ ದಾಳಿ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಎರಡು ವಾರಗಳ ಕಾಲ ನಡೆಸಿದ ಆಕ್ರಮಣದಲ್ಲಿ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದ ಅತಿ ದೊಡ್ಡ ಅಲ್-ಶಿಫಾ ಆಸ್ಪತ್ರೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪಾಲು ಬಿದ್ದ ಕಟ್ಟಡದಂತಾಗಿದೆ.

“ಹಮಾಸ್ ಮತ್ತು ಇತರ ಇಸ್ಲಾಮಿಕ್ ಜಿಹಾದಿಸ್ಟ್‌ಗಳು ಅಸ್ಪತ್ರೆಯೊಳಗೆ ಅಡಗಿ ಕುಳಿತಿದ್ದರು. ಅಲ್ಲಿಂದಲೇ ದಾಳಿಗೆ ಸಂಚು ರೂಪಿಸುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದರು. ಹಾಗಾಗಿ, ವಾರ್ಡ್‌ಗಳ ಮೇಲೆ ದಾಳಿ ನಡೆಸಿದ್ದೇವೆ” ಎಂದು ಇಸ್ರೇಲ್ ತನ್ನ ಆಕ್ರಮಣವನ್ನು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಅಲ್ ಶಿಫಾ ತೊರೆದ ಬಳಿಕ ಪ್ಯಾಲೆಸ್ತೀನ್ ನಾಗರಿಕರು ಆಸ್ಪತ್ರೆಯ ಸುತ್ತ ಜಮಾಯಿಸಿರುವುದು. ಮೃತದೇಹಗಳನ್ನು ಸಾಗಿಸುತ್ತಿರುವ ವಿಡಿಯೋ, ಪೋಟೋಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

“ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೂರಾರು ಕೊಳೆತ ಮೃತದೇಹಗಳು ಪತ್ತೆಯಾಗಿವೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಆಸ್ಪತ್ರೆ ಬಳಿ 20ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿವೆ. ಕೆಲವನ್ನು ಇಸ್ರೇಲಿ ಸೇನೆ ಜೆಸಿಬಿಯಂತಹ ಯಂತ್ರ ಬಳಸಿ ನಜ್ಜು ಗುಜ್ಜಾಗಿಸಿವೆ” ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ಎಎಫ್‌ಫಿ ವರದಿ ಮಾಡಿದೆ.

ಅಲ್-ಶಿಫಾ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲಿ ಪಡೆಗಳು 400 ಪ್ಯಾಲೆಸ್ತೀನಿಯರನ್ನು ಕೊಂದಿವೆ ಇದರಲ್ಲಿ ಒಬ್ಬ ಮಹಿಳಾ ವೈದ್ಯೆ ಮತ್ತು ವೈದ್ಯರಾಗಿರುವ ಅವರ ಮಗ ಸೇರಿದ್ದಾರೆ ಎಂದು ಎಂದು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಸೇನೆ ಗಾಝಾದಲ್ಲಿ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 32,800 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಮತ್ತು 75 ಸಾವಿರಕ್ಕೂ ಅಧಿಕರ ಜನರು ಗಾಯಗೊಂಡಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...