Homeಮುಖಪುಟಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಎರಡು ವಾರಗಳ ಆಕ್ರಮಣದ ಬಳಿಕ ಆಸ್ಪತ್ರೆ ತೊರೆದ ಇಸ್ರೇಲ್ ಸೇನೆ

- Advertisement -
- Advertisement -

ಗಾಝಾದ ಪ್ರಮುಖ ಆಸ್ಪತ್ರೆಯಾಗಿರುವ ಅಲ್- ಶಿಫಾದಲ್ಲಿ ಸತತ ಎರಡು ವಾರಗಳ ಕಾಲ ಆಕ್ರಮಣ ನಡೆಸಿದ ಇಸ್ರೇಲ್ ಸೇನೆ, ಆಸ್ಪತ್ರೆಯನ್ನು ಸಂಪೂರ್ಣ ಧ್ವಂಸಗೊಳಿಸಿ ಬಿಟ್ಟು ತೆರಳಿದೆ.

ಬಿಬಿಸಿ ವರದಿಯ ಪ್ರಕಾರ, ಇಸ್ರೇಲ್ ಸೇನೆ ಅಲ್-ಶಿಫಾ ಆಸ್ಪತ್ರೆ ತೊರೆದ ಬಳಿಕ ಅಲ್ಲಿ ನೂರಾರು ಮೃತದೇಹಗಳು ದೊರೆತಿವೆ ಎಂದು ಹಮಾಸ್‌ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ನಾವು 200 ಜನರನ್ನು ಹತ್ಯೆಗೈದಿದ್ದೇವೆ ಮತ್ತು 500 ಮಂದಿಯನ್ನು ಬಂಧಿಸಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಹಮಾಸ್ ಬಂಡುಕೋರರು ಅಲ್‌-ಶಿಫಾದಲ್ಲಿ ಅಡಗಿ ಕುಳಿತಿದ್ದ ಕಾರಣ ದಾಳಿ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಎರಡು ವಾರಗಳ ಕಾಲ ನಡೆಸಿದ ಆಕ್ರಮಣದಲ್ಲಿ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದ ಅತಿ ದೊಡ್ಡ ಅಲ್-ಶಿಫಾ ಆಸ್ಪತ್ರೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪಾಲು ಬಿದ್ದ ಕಟ್ಟಡದಂತಾಗಿದೆ.

“ಹಮಾಸ್ ಮತ್ತು ಇತರ ಇಸ್ಲಾಮಿಕ್ ಜಿಹಾದಿಸ್ಟ್‌ಗಳು ಅಸ್ಪತ್ರೆಯೊಳಗೆ ಅಡಗಿ ಕುಳಿತಿದ್ದರು. ಅಲ್ಲಿಂದಲೇ ದಾಳಿಗೆ ಸಂಚು ರೂಪಿಸುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದರು. ಹಾಗಾಗಿ, ವಾರ್ಡ್‌ಗಳ ಮೇಲೆ ದಾಳಿ ನಡೆಸಿದ್ದೇವೆ” ಎಂದು ಇಸ್ರೇಲ್ ತನ್ನ ಆಕ್ರಮಣವನ್ನು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಅಲ್ ಶಿಫಾ ತೊರೆದ ಬಳಿಕ ಪ್ಯಾಲೆಸ್ತೀನ್ ನಾಗರಿಕರು ಆಸ್ಪತ್ರೆಯ ಸುತ್ತ ಜಮಾಯಿಸಿರುವುದು. ಮೃತದೇಹಗಳನ್ನು ಸಾಗಿಸುತ್ತಿರುವ ವಿಡಿಯೋ, ಪೋಟೋಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

“ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೂರಾರು ಕೊಳೆತ ಮೃತದೇಹಗಳು ಪತ್ತೆಯಾಗಿವೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಆಸ್ಪತ್ರೆ ಬಳಿ 20ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿವೆ. ಕೆಲವನ್ನು ಇಸ್ರೇಲಿ ಸೇನೆ ಜೆಸಿಬಿಯಂತಹ ಯಂತ್ರ ಬಳಸಿ ನಜ್ಜು ಗುಜ್ಜಾಗಿಸಿವೆ” ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ಎಎಫ್‌ಫಿ ವರದಿ ಮಾಡಿದೆ.

ಅಲ್-ಶಿಫಾ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲಿ ಪಡೆಗಳು 400 ಪ್ಯಾಲೆಸ್ತೀನಿಯರನ್ನು ಕೊಂದಿವೆ ಇದರಲ್ಲಿ ಒಬ್ಬ ಮಹಿಳಾ ವೈದ್ಯೆ ಮತ್ತು ವೈದ್ಯರಾಗಿರುವ ಅವರ ಮಗ ಸೇರಿದ್ದಾರೆ ಎಂದು ಎಂದು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಸೇನೆ ಗಾಝಾದಲ್ಲಿ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 32,800 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಮತ್ತು 75 ಸಾವಿರಕ್ಕೂ ಅಧಿಕರ ಜನರು ಗಾಯಗೊಂಡಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...