Homeಮುಖಪುಟಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಎರಡು ವಾರಗಳ ಆಕ್ರಮಣದ ಬಳಿಕ ಆಸ್ಪತ್ರೆ ತೊರೆದ ಇಸ್ರೇಲ್ ಸೇನೆ

- Advertisement -
- Advertisement -

ಗಾಝಾದ ಪ್ರಮುಖ ಆಸ್ಪತ್ರೆಯಾಗಿರುವ ಅಲ್- ಶಿಫಾದಲ್ಲಿ ಸತತ ಎರಡು ವಾರಗಳ ಕಾಲ ಆಕ್ರಮಣ ನಡೆಸಿದ ಇಸ್ರೇಲ್ ಸೇನೆ, ಆಸ್ಪತ್ರೆಯನ್ನು ಸಂಪೂರ್ಣ ಧ್ವಂಸಗೊಳಿಸಿ ಬಿಟ್ಟು ತೆರಳಿದೆ.

ಬಿಬಿಸಿ ವರದಿಯ ಪ್ರಕಾರ, ಇಸ್ರೇಲ್ ಸೇನೆ ಅಲ್-ಶಿಫಾ ಆಸ್ಪತ್ರೆ ತೊರೆದ ಬಳಿಕ ಅಲ್ಲಿ ನೂರಾರು ಮೃತದೇಹಗಳು ದೊರೆತಿವೆ ಎಂದು ಹಮಾಸ್‌ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ನಾವು 200 ಜನರನ್ನು ಹತ್ಯೆಗೈದಿದ್ದೇವೆ ಮತ್ತು 500 ಮಂದಿಯನ್ನು ಬಂಧಿಸಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಹಮಾಸ್ ಬಂಡುಕೋರರು ಅಲ್‌-ಶಿಫಾದಲ್ಲಿ ಅಡಗಿ ಕುಳಿತಿದ್ದ ಕಾರಣ ದಾಳಿ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಎರಡು ವಾರಗಳ ಕಾಲ ನಡೆಸಿದ ಆಕ್ರಮಣದಲ್ಲಿ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದ ಅತಿ ದೊಡ್ಡ ಅಲ್-ಶಿಫಾ ಆಸ್ಪತ್ರೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪಾಲು ಬಿದ್ದ ಕಟ್ಟಡದಂತಾಗಿದೆ.

“ಹಮಾಸ್ ಮತ್ತು ಇತರ ಇಸ್ಲಾಮಿಕ್ ಜಿಹಾದಿಸ್ಟ್‌ಗಳು ಅಸ್ಪತ್ರೆಯೊಳಗೆ ಅಡಗಿ ಕುಳಿತಿದ್ದರು. ಅಲ್ಲಿಂದಲೇ ದಾಳಿಗೆ ಸಂಚು ರೂಪಿಸುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದರು. ಹಾಗಾಗಿ, ವಾರ್ಡ್‌ಗಳ ಮೇಲೆ ದಾಳಿ ನಡೆಸಿದ್ದೇವೆ” ಎಂದು ಇಸ್ರೇಲ್ ತನ್ನ ಆಕ್ರಮಣವನ್ನು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಅಲ್ ಶಿಫಾ ತೊರೆದ ಬಳಿಕ ಪ್ಯಾಲೆಸ್ತೀನ್ ನಾಗರಿಕರು ಆಸ್ಪತ್ರೆಯ ಸುತ್ತ ಜಮಾಯಿಸಿರುವುದು. ಮೃತದೇಹಗಳನ್ನು ಸಾಗಿಸುತ್ತಿರುವ ವಿಡಿಯೋ, ಪೋಟೋಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

“ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೂರಾರು ಕೊಳೆತ ಮೃತದೇಹಗಳು ಪತ್ತೆಯಾಗಿವೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಆಸ್ಪತ್ರೆ ಬಳಿ 20ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿವೆ. ಕೆಲವನ್ನು ಇಸ್ರೇಲಿ ಸೇನೆ ಜೆಸಿಬಿಯಂತಹ ಯಂತ್ರ ಬಳಸಿ ನಜ್ಜು ಗುಜ್ಜಾಗಿಸಿವೆ” ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ಎಎಫ್‌ಫಿ ವರದಿ ಮಾಡಿದೆ.

ಅಲ್-ಶಿಫಾ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲಿ ಪಡೆಗಳು 400 ಪ್ಯಾಲೆಸ್ತೀನಿಯರನ್ನು ಕೊಂದಿವೆ ಇದರಲ್ಲಿ ಒಬ್ಬ ಮಹಿಳಾ ವೈದ್ಯೆ ಮತ್ತು ವೈದ್ಯರಾಗಿರುವ ಅವರ ಮಗ ಸೇರಿದ್ದಾರೆ ಎಂದು ಎಂದು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಸೇನೆ ಗಾಝಾದಲ್ಲಿ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 32,800 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಮತ್ತು 75 ಸಾವಿರಕ್ಕೂ ಅಧಿಕರ ಜನರು ಗಾಯಗೊಂಡಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...