Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

- Advertisement -
- Advertisement -

ತಮಿಳಿನ ತಂತಿ ಟಿವಿ ಚಾನೆಲ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಬಾಂಡ್‌ ಕುರಿತು ಮಾತನಾಡಿದ್ದು, ಪ್ರಧಾನಿ ನೀಡಿರುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ವಿಶೇಷ ಸಂದರ್ಶನದ ಬರೊಬ್ಬರಿ 1 ಗಂಟೆ 2 ನಿಮಿಷ 56 ಸೆಕೆಂಡ್‌ನ ಸುದೀರ್ಘ ವಿಡಿಯೋವನ್ನು ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ 53 ನಿಮಿಷ 58 ಸೆಕೆಂಡ್‌ನಿಂದ 54 ನಿಮಿಷ 43 ಸೆಕೆಂಡ್‌ ನಡುವೆ ಪ್ರಧಾನಿ ಚುನಾವಣಾ ಬಾಂಡ್‌ ಕುರಿತು ಮಾತನಾಡಿರುವುದು ಇದೆ.

ಸಂದರ್ಶನದಲ್ಲಿ ನಿರೂಪಕಿ, “ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ರದ್ದುಪಡಿಸಿರುವುದು ನಿಮ್ಮ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಲ್ಲವೇ?” ಎಂದು ಪ್ರಧಾನಿಯನ್ನು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಪ್ರಧಾನಿ, “ನಮಗೆ ಯಾಕೆ ಹಿನ್ನಡೆ? ನೋಡಿ 2014ರ ಮೊದಲು ರಾಜಕೀಯ ಪಕ್ಷಗಳು ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆಯುತ್ತಿದ್ದವು. ಆದರೆ, ಅದನ್ನು ಯಾರು, ಯಾರಿಗೆ ಕೊಟ್ಟಿದ್ದಾರೆ. ಎಷ್ಟು ಖರ್ಚಾಗಿದೆ ಇತ್ಯಾದಿ ಮಾಹಿತಿ ಗೊತ್ತಾಗುತ್ತಿರಲಿಲ್ಲ. ನಾವು ಚುನಾವಣಾ ಬಾಂಡ್ ತಂದ ಬಳಿಕ, ಯಾರು ಯಾವ ಪಕ್ಷಕ್ಕೆ ದೇಣಿಗೆ ಕೊಟ್ಟಿದ್ದಾರೆ? ಎಷ್ಟು ಕೊಟ್ಟಿದ್ದಾರೆ? ಎಷ್ಟು ಖರ್ಚಾಗಿದೆ? ಎಂಬ ಸಂಪೂರ್ಣ ದಾಖಲಾತಿ ಸಿಗುತ್ತಿತ್ತು” ಎಂದಿದ್ದಾರೆ.

ಯೂಟ್ಯೂಬ್‌ ವಿಡಿಯೋ ಲಿಂಕ್ ಇಲ್ಲಿದೆ 

ಪ್ರಧಾನಿ ಮೋದಿಯವರು ನೀಡಿರುವ ಈ ಹೇಳಿಕೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ನಡೆದ ಕೆಲವು ಸನ್ನಿವೇಶಗಳು ಹೊಂದಾಣಿಕೆಯಾಗುತ್ತಿಲ್ಲ. ಹಾಗಾಗಿ, ಪ್ರಧಾನಿ ಹೇಳಿರುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಎಷ್ಟು ಸತ್ಯ ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗಳನ್ನು ನಾವು ಗಮನಿಸಿದ್ದೇವೆ.

ಅಕ್ಟೋಬರ್ 30, 2023ರಂದು Livelaw.in ಪ್ರಕಟಿಸಿದ ‘Citizens Don’t Have Right To Know Source Of Political Parties’ Funds : Attorney General Tells Supreme Court In Electoral Bonds Case’ಎಂಬ ಶೀರ್ಷಿಕೆಯ ವರದಿಯಲ್ಲಿ ” ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಅಟಾರ್ನಿ ಜನರಲ್ ಆರ್‌. ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ರಾಜಕೀಯ ಪಕ್ಷಗಳ ದೇಣಿಗೆ ಕುರಿತು ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕಿಲ್ಲ ಎಂದು ತಿಳಿಸಿದ್ದಾರೆ. ಚುನಾವಣಾ ಬಾಂಡ್‌ ಮಾಹಿತಿ ಒದಗಿಸುವಂತೆ ಪ್ರತಿಪಾದಿಸಿದ ಅರ್ಜಿದಾರರ ವಾದವನ್ನು ಅಟಾರ್ನಿ ಜನರಲ್ ತಳ್ಳಿ ಹಾಕಿದ್ದಾರೆ ಎಂದು” ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 11, 2020ರಂದು ‘thewire.in’ಪ್ರಕಟಿಸಿದ ‘Electoral Bonds: SBI Refuses Yet Again to Divulge Information on Rs 1 Crore Donors’ಎಂಬ ಶೀರ್ಷಿಕೆಯ ವರದಿಯಲ್ಲಿ “ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಕೇಂದ್ರದಿಂದ ಅಧಿಕಾರ ಪಡೆದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ದೊಡ್ಡ ದಾನಿಗಳ ವಿವರಗಳನ್ನು ‘ಮಾಹಿತಿ ಹಕ್ಕು ಕಾಯ್ದೆ’ಯಡಿ ಬಹಿರಂಗಪಡಿಸಲು ಮತ್ತೊಮ್ಮೆ ನಿರಾಕರಿಸಿದೆ.” ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಫೆಬ್ರವರಿ 15, 2024ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ “ಈ ಯೋಜನೆ ಅಸಂವಿಧಾನಿಕ ಮತ್ತು ಜನರ ‘ಮಾಹಿತಿ ಹಕ್ಕಿಗೆ’ ವಿರುದ್ದವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ನಮಗೆ ತಿಳಿಯುವುದು ಏನೆಂದರೆ, ಚುನಾವಣಾ ಬಾಂಡ್‌ನ ಮಾಹಿಯು ‘ಮಾಹಿತಿ ಹಕ್ಕು ಕಾಯ್ದೆ'(ಆರ್‌ಟಿಐ) ಅಡಿ ದೊರೆಯುತ್ತಿರಲಿಲ್ಲ ಎಂಬುದು.

ಸುದ್ದಿ ಲಿಂಕ್ ಇಲ್ಲಿದೆ 

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು ಮತ್ತು ಈ ಮಾಹಿತಿಯನ್ನು ಮಾರ್ಚ್ 12ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

2024ರ ಮಾರ್ಚ್ 6ರೊಳಗೆ ಮಾಹಿತಿ ಒದಗಿಸದ ಎಸ್‌ಬಿಐ, ಮಾರ್ಚ್ 4ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಬಾಂಡ್‌ ಮಾಹಿತಿ ಒದಗಿಸಲು ಜೂನ್‌ 30ರವರೆಗೆ ಸಮಯ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಮಾರ್ಚ್‌ 11ರಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಸ್‌ಬಿಐಗೆ ಛೀಮಾರಿ ಹಾಕಿ ನಾಳೆಯೊಳಗೆ (ಮಾರ್ಚ್‌ 12) ಮಾಹಿತಿ ಒದಗಿಸಿ ಎಂದು ಖಡಕ್ ಆದೇಶ ನೀಡಿತ್ತು. ಮಾರ್ಚ್‌ 15ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೂ ನಿರ್ದೇಶನ ನೀಡಿತ್ತು.

ಕೊನೆಗೂ ಮಾರ್ಚ್‌ 12 ರಂದು ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿತ್ತು. ಅದನ್ನು ಗಡುವಿಗಿಂತ ಒಂದು ದಿನ ಮೊದಲೇ, ಅಂದರೆ ಮಾರ್ಚ್‌ 14ರಂದು ಸಂಜೆಯೇ ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಇದರಿಂದ ಮೊದಲ ಬಾರಿಗೆ ದೇಶದ ಯಾವ ಉದ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಎಷ್ಟು ನೀಡಿದ್ದಾರೆ. ರಾಜಕೀಯ ಪಕ್ಷಗಳು ಪಡೆದ ದೇಣಿಗೆ ಎಷ್ಟು ಇತ್ಯಾದಿ ಬಯಲಾಗಿತ್ತು.

ಆದರೆ, ಯಾವ ಸಂಸ್ಥೆ ಅಥವಾ ವ್ಯಕ್ತಿ ನಿರ್ದಿಷ್ಟವಾಗಿ ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರ ಬಂದಿರಲಿಲ್ಲ. ಕಾರಣ, ಅದನ್ನು ಕಂಡು ಹಿಡಿಯಲು ಸಹಕಾರಿಯಾಗುವ ವಿಶೇಷ ಸಂಖ್ಯೆ ಅಥವಾ ‘ಆಲ್ಫಾ ನ್ಯೂಮರಿಕ್ ನಂಬರ್’ ಅನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿರಲಿಲ್ಲ. ಮಾರ್ಚ್‌ 18ರಂದು ಮತ್ತೊಮ್ಮೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆಲ್ಫಾ ನ್ಯೂಮರಿಕ್ ನಂಬರ್ ಸಹಿತ ಎಲ್ಲಾ ಮಾಹಿತಿಗಳನ್ನು ಮಾರ್ಚ್‌ 21ರ ಒಳಗೆ ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಸಿತ್ತು.

ಮಾರ್ಚ್ 21ರಂದು ‘ಆಲ್ಫಾ ನ್ಯೂಮರಿಕ್’ ನಂಬರ್ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದರು. ಅಂದೇ ಸಂಜೆ ಚುನಾವಣಾ ಆಯೋಗ ಬಾಂಡ್‌ ನಂಬರ್‌ಗಳೊಂದಿಗೆ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಿಸಿತ್ತು.

ಎಸ್‌ಬಿಐ ನೀಡಿದ ಆಲ್ಪಾ ನ್ಯೂಮರಿಕ್ ಕೋಡ್‌ ಬಳಸಿ ಅನೇಕ ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ, ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರಗೆಳೆದಿದ್ದರು. ಈ ಮೂಲಕ ಚುನಾವಣಾ ಬಾಂಡ್ ಎಂಬ ‘ಅಸಂವಿಧಾನಿಕ’ ಯೋಜನೆಯ ಬಣ್ಣ ಬಯಲಾಗಿತ್ತು.

ನಾವು ಮೇಲೆ ಉಲ್ಲೇಖಿಸಿದ ಮಾಧ್ಯಮ ವರದಿಗಳು ಇತರ ಮಾಹಿತಿಯನ್ನು ಗಮನಿಸುವುದಾದರೆ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕವಷ್ಟೇ ಚುನಾವಣಾ ಬಾಂಡ್‌ಗಳ ಮಾಹಿತಿ ಹೊರ ಬಂದಿದೆ. ಅದಕ್ಕೂ ಮುನ್ನ ಆರ್‌ಟಿಐ ಅಡಿ ಅರ್ಜಿ ಹಾಕಿದರೂ, ಮಾಹಿತಿ ಸಿಗುತ್ತಿರಲಿಲ್ಲ. ಆರ್‌ಟಿಐ ಅಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ವತಃ ಅಟಾರ್ನಿ ಜನರಲ್ ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದರು. ಹಾಗಾಗಿ, “ನಾವು ಚುನಾವಣಾ ಬಾಂಡ್‌ ತಂದ ಬಳಿಕ ಯಾವ ರಾಜಕೀಯ ಪಕ್ಷಕ್ಕೆ ಯಾರು, ಎಷ್ಟೆಷ್ಟು ದೇಣಿಗೆ ಕೊಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿತ್ತು” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಸುಪ್ರೀಂ ಕೋರ್ಟ್‌ ಚುನಾವಣಾ ಬಾಂಡ್‌ ರದ್ದುಗೊಳಿಸಿ ಮಾಹಿತಿ ಬಹಿರಂಗಪಡಿಸುವಂತೆ ಆದೇಶ ನೀಡಿರದಿದ್ದರೆ, ಇವತ್ತಿಗೂ ಬಾಂಡ್‌ಗಳ ಮಾಹಿತಿ ಜನ ಸಾಮಾನ್ಯಗರಿಗೆ ಗೊತ್ತಾಗುತ್ತಿರಲಿಲ್ಲ.

ಇದನ್ನೂ ಓದಿ : Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...