Homeಮುಖಪುಟಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

ಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

- Advertisement -
- Advertisement -

“ಬಿಜೆಪಿ ಸರ್ಕಾರವು,  ನಾಯಕರು ಮತ್ತು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷ್ ಆಡಳಿತದಂತೆ ಮಾರ್ಪಟ್ಟಿದೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ನರೇಂದ್ರ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ಕೇಂದ್ರದ ಆಡಳಿತವನ್ನು ಅವರು ಬ್ರಿಟಿಷ್ ರಾಜ್‌ಗೆ ಹೋಲಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, “ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಮಹಾರ‍್ಯಾಲಿಯಲ್ಲಿ  ಪ್ರತಿಪಕ್ಷದ ಹಿರಿಯ ನಾಯಕರು ಜಮಾಯಿಸುವುದನ್ನು ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ಅಕ್ರಮವಾಗಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವುದನ್ನು ನೋಡಿ ಬಿಜೆಪಿ ಭಯಗೊಂಡಿತು” ಎಂದು ಹೇಳಿದರು.

“ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ಕಂಡುಬಂದದ್ದು ಬಿಜೆಪಿಯನ್ನು ಬೆಚ್ಚಿಬೀಳಿಸಿದೆ. ಇಂಡಿಯಾ ವಿರೋಧ ಪಕ್ಷಗಳ ದೊಡ್ಡ ನಾಯಕರು ಆ ವೇದಿಕೆಯಲ್ಲಿ ಜಮಾಯಿಸಿದರು… ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು ಜೈಲಿನಲ್ಲಿದ್ದಾರೆ; ಅತಿಶಿ, ದುರ್ಗೇಶ್ ಪಾಠಕ್, ಸಂದೀಪ್ ಪಾಠಕ್ ಮತ್ತು ನಾನು ಚಿಕ್ಕವನು ಎಂದು ನಾವು ಈ ನಾಯಕರನ್ನು ವೇದಿಕೆಗೆ ಬರಲು ವಿನಂತಿಸಿದ್ದೆವು. ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದರು” ಎಂದು ಸಚಿವರು ಹೇಳಿದರು.

ಕೇಸರಿ ಪಾಳಯವು ತನ್ನ ಎಲ್ಲಾ ಹಿರಿಯ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಎಎಪಿಯನ್ನು ಹತ್ತಿಕ್ಕಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ. ಜನರು ತಮ್ಮ ವಿರುದ್ಧ ಮತ ಚಲಾಯಿಸಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿರುವುದರಿಂದ ಅವರು ಮತದರರನ್ನು ಹೆದರಿಸಲು ಪ್ರಾರಂಭಿಸಿದರು, ಇದು ದೇಶದ ತೀವ್ರ ಕಳವಳದ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ಬಿಜೆಪಿಯವರು ನಮಗೆ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದರು ಎಂದು ಹೇಳುತ್ತಾರೆ. ಅವರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದರು ಮತ್ತು ನಮ್ಮ ದೊಡ್ಡ ನಾಯಕರೆಲ್ಲರನ್ನು ಬಂಧಿಸಿದರು. ಆದರೆ, ಪಕ್ಷವು ಇನ್ನೂ ಧೃಡವಾಗಿ ನಿಂತಿದೆ… ಜನರು ಮತ ಹಾಕಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಇಂದು  ದೇಶದ ಜನರು ಭಯಭೀತರಾಗಿದ್ದಾರೆ ಮತ್ತು ಇದು ದೇಶಕ್ಕೆ ತೀವ್ರ ಕಳವಳಕಾರಿಯಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಜನರು ಹೆದರುತ್ತಿದ್ದರು… ಜೈಲಿನ ಬೆದರಿಕೆಯಿಂದ ಹೆದರಿಸಿ ಬ್ರಿಟಿಷರು ನಮ್ಮನ್ನು ಆಳಿದರು. ಇಂದು ಬಿಜೆಪಿ ನೇತರತ್ವದ ಕೇಂದ್ರ ಸರ್ಕಾರವು ಬಹುತೇಕ ಹಾಗೆ ಮಾರ್ಪಟ್ಟಿದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಇದೀಗ ತನಿಖಾ ಸಂಸ್ಥೆಯು ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ ಎಂದು ಅವರ ಸಹೋದ್ಯೋಗಿ ಅತಿಶಿ ದೊಡ್ಡ ಹೇಳಿಕೆ ನೀಡಿದ ನಂತರ ಅವರ ಹೇಳಿಕೆಗಳು ಹೊರಬಿದ್ದಿವೆ.

“ಶೀಘ್ರದಲ್ಲೇ ನಮ್ಮ ನಿವಾಸದ ಮೇಲೆ ಇಡಿ ದಾಳಿ ನಡೆಯಲಿದೆ ಮತ್ತು ನಂತರ ನಮ್ಮನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ನನಗೆ ತಿಳಿಸಲಾಗಿದೆ. ಬಿಜೆಪಿ ಈಗ ಆಮ್ ಆದ್ಮಿ ಪಕ್ಷದ ಮುಂದಿನ ಸಾಲಿನ ನಾಯಕರನ್ನು ಗುರಿಯಾಗಿಸಿಕೊಂಡಿದೆ” ಎಂದು ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಅವರನ್ನು ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೀಗ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...