Homeಮುಖಪುಟಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

ಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

- Advertisement -
- Advertisement -

“ಬಿಜೆಪಿ ಸರ್ಕಾರವು,  ನಾಯಕರು ಮತ್ತು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷ್ ಆಡಳಿತದಂತೆ ಮಾರ್ಪಟ್ಟಿದೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ನರೇಂದ್ರ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ಕೇಂದ್ರದ ಆಡಳಿತವನ್ನು ಅವರು ಬ್ರಿಟಿಷ್ ರಾಜ್‌ಗೆ ಹೋಲಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, “ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಮಹಾರ‍್ಯಾಲಿಯಲ್ಲಿ  ಪ್ರತಿಪಕ್ಷದ ಹಿರಿಯ ನಾಯಕರು ಜಮಾಯಿಸುವುದನ್ನು ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ಅಕ್ರಮವಾಗಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವುದನ್ನು ನೋಡಿ ಬಿಜೆಪಿ ಭಯಗೊಂಡಿತು” ಎಂದು ಹೇಳಿದರು.

“ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ಕಂಡುಬಂದದ್ದು ಬಿಜೆಪಿಯನ್ನು ಬೆಚ್ಚಿಬೀಳಿಸಿದೆ. ಇಂಡಿಯಾ ವಿರೋಧ ಪಕ್ಷಗಳ ದೊಡ್ಡ ನಾಯಕರು ಆ ವೇದಿಕೆಯಲ್ಲಿ ಜಮಾಯಿಸಿದರು… ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು ಜೈಲಿನಲ್ಲಿದ್ದಾರೆ; ಅತಿಶಿ, ದುರ್ಗೇಶ್ ಪಾಠಕ್, ಸಂದೀಪ್ ಪಾಠಕ್ ಮತ್ತು ನಾನು ಚಿಕ್ಕವನು ಎಂದು ನಾವು ಈ ನಾಯಕರನ್ನು ವೇದಿಕೆಗೆ ಬರಲು ವಿನಂತಿಸಿದ್ದೆವು. ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದರು” ಎಂದು ಸಚಿವರು ಹೇಳಿದರು.

ಕೇಸರಿ ಪಾಳಯವು ತನ್ನ ಎಲ್ಲಾ ಹಿರಿಯ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಎಎಪಿಯನ್ನು ಹತ್ತಿಕ್ಕಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ. ಜನರು ತಮ್ಮ ವಿರುದ್ಧ ಮತ ಚಲಾಯಿಸಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿರುವುದರಿಂದ ಅವರು ಮತದರರನ್ನು ಹೆದರಿಸಲು ಪ್ರಾರಂಭಿಸಿದರು, ಇದು ದೇಶದ ತೀವ್ರ ಕಳವಳದ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ಬಿಜೆಪಿಯವರು ನಮಗೆ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದರು ಎಂದು ಹೇಳುತ್ತಾರೆ. ಅವರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದರು ಮತ್ತು ನಮ್ಮ ದೊಡ್ಡ ನಾಯಕರೆಲ್ಲರನ್ನು ಬಂಧಿಸಿದರು. ಆದರೆ, ಪಕ್ಷವು ಇನ್ನೂ ಧೃಡವಾಗಿ ನಿಂತಿದೆ… ಜನರು ಮತ ಹಾಕಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಇಂದು  ದೇಶದ ಜನರು ಭಯಭೀತರಾಗಿದ್ದಾರೆ ಮತ್ತು ಇದು ದೇಶಕ್ಕೆ ತೀವ್ರ ಕಳವಳಕಾರಿಯಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಜನರು ಹೆದರುತ್ತಿದ್ದರು… ಜೈಲಿನ ಬೆದರಿಕೆಯಿಂದ ಹೆದರಿಸಿ ಬ್ರಿಟಿಷರು ನಮ್ಮನ್ನು ಆಳಿದರು. ಇಂದು ಬಿಜೆಪಿ ನೇತರತ್ವದ ಕೇಂದ್ರ ಸರ್ಕಾರವು ಬಹುತೇಕ ಹಾಗೆ ಮಾರ್ಪಟ್ಟಿದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಇದೀಗ ತನಿಖಾ ಸಂಸ್ಥೆಯು ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ ಎಂದು ಅವರ ಸಹೋದ್ಯೋಗಿ ಅತಿಶಿ ದೊಡ್ಡ ಹೇಳಿಕೆ ನೀಡಿದ ನಂತರ ಅವರ ಹೇಳಿಕೆಗಳು ಹೊರಬಿದ್ದಿವೆ.

“ಶೀಘ್ರದಲ್ಲೇ ನಮ್ಮ ನಿವಾಸದ ಮೇಲೆ ಇಡಿ ದಾಳಿ ನಡೆಯಲಿದೆ ಮತ್ತು ನಂತರ ನಮ್ಮನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ನನಗೆ ತಿಳಿಸಲಾಗಿದೆ. ಬಿಜೆಪಿ ಈಗ ಆಮ್ ಆದ್ಮಿ ಪಕ್ಷದ ಮುಂದಿನ ಸಾಲಿನ ನಾಯಕರನ್ನು ಗುರಿಯಾಗಿಸಿಕೊಂಡಿದೆ” ಎಂದು ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಅವರನ್ನು ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೀಗ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...