Homeಮುಖಪುಟಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

ಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

- Advertisement -
- Advertisement -

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಮರಳಿ ಪಡೆಯಲು ಭಾರತ ಶ್ರಮಿಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲಿ ಶ್ರೀಲಂಕಾ ವಿದೇಶಾಂಗ ಸಚಿವಾಲಯವು ದ್ವೀಪವು ತನ್ನ ನಿಯಂತ್ರಣದಲ್ಲಿದೆ ಎಂದು ಸಮರ್ಥಿಸಿಕೊಂಡಿದೆ, ಆದರೆ ಬಿಜೆಪಿ ಹೇಳುವಂತೆ ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಪಡೆಯಲು ಸಾಧ್ಯವಿಲ್ಲ ಎನ್ನುವುದು ವಾಸ್ತವವಾಗಿದೆ.

ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಅವರು ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ, ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು. ರಾಷ್ಟ್ರೀಯ ಗಡಿಗಳನ್ನು ಕಾಯ್ದುಕೊಳ್ಳುವ ಕುರಿತು ಜೀವನ್ ತೊಂಡಮಾನ್ ಅವರ ಹೇಳಿಕೆಗಳ ಬೆನ್ನಲ್ಲಿ ಶ್ರೀಲಂಕಾದ ಮತ್ತೋರ್ವ ಸಚಿವರು ಇಚ್ಛೆಯಂತೆ ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕಚ್ಚತೀವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಔಪಚಾರಿಕವಾಗಿ ಗುರುತಿಸಲ್ಪಟ್ಟಿದೆ. ಗಡಿಯನ್ನು ನಿರ್ಧರಿಸಿದ ನಂತರ ಸರ್ಕಾರದ ಬದಲಾವಣೆಯ ಕಾರಣಕ್ಕಾಗಿ ಯಾರೂ ಕೂಡ ಭೂಭಾಗದ ಬದಲಾವಣೆಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಅಣ್ಣಾಮಲೈ ಹೊರತುಪಡಿಸಿ, ಮತ್ತೊಬ್ಬ ಬಿಜೆಪಿ ನಾಯಕ ಕೂಡ ಕಚ್ಚತೀವು ದ್ವೀಪದಲ್ಲಿ ಬಿಜೆಪಿ ನಾಯಕತ್ವ ಪ್ರಮುಖ ಘೋಷಣೆ ಮಾಡಲಿದೆ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಉಲ್ಭಣಗೊಂಡ ಈ ವಿವಾದವು ನೆರೆಯ ರಾಷ್ಟ್ರದೊಂದಿಗೆ ಭಾರತದ ಸಂಬಂಧವನ್ನು “ಹಾನಿ”ಗೊಳಿಸುವುದೇ ಎಂಬ ಪ್ರಶ್ನೆ? ಉದ್ಭವಿಸಿದೆ. ಇದಕ್ಕೆ ಮಾಜಿ ರಾಜತಾಂತ್ರಿಕ ಕೆಸಿ ಸಿಂಗ್ ಪ್ರತಿಕ್ರಿಯಿಸಿ ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಶಂಕರ್‌ ಅವರ ಹೇಳಿಕೆ ಭಾರತವು ದೇಶೀಯ ರಾಜಕೀಯದಲ್ಲಿ ಕಚ್ಚತೀವು ವಿಚಾರವನ್ನು ಮುನ್ನೆಲೆಗೆ ತರವುದರಿಂದ ಶ್ರೀಲಂಕಾದೊಂದಿಗಿನ ಭಾರತದ ರಾಜತಾಂತ್ರಿಕ ಸಂಬಂಧವನ್ನು ಹದಗೆಡಿಸುತ್ತದೆ. ಜೈಶಂಕರ್‌ ಅವರಂತಹ ಅನುಭವಿ ರಾಜಕಾರಣಿ ಈ ರಿತಿ ಪ್ರತಿಕ್ರಿಯಿಸುವುದು ಅವರ ಇಮೇಜ್‌ನ್ನು ಹಾನಿಗೊಳಿಸುತ್ತದೆ. ಇದು ಶ್ರೀಲಂಕಾವನ್ನು ಮಾಲ್ಡೀವ್ಸ್‌ನಂತೆ ಚೀನಾದ ತೆಕ್ಕೆಗೆ ತಳ್ಳಬಹುದು, ಆದರೆ ದಕ್ಷಿಣದಲ್ಲಿ ಬಿಜೆಪಿಗೆ ಸ್ವಲ್ಪ ಲಾಭವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಭಾರತದ ರಾಮೇಶ್ವರಂ ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿಯಲ್ಲಿ 285 ಎಕರೆ ವಿಸ್ತಾರವಾದ ಕಚ್ಚತೀವು ದ್ವೀಪವು ಭಾರತದ ಕರಾವಳಿಯಿಂದ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ. ಕಚ್ಚತೀವು ಬ್ರಿಟಿಷರ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ವಿವಾದಿತ ಪ್ರದೇಶವಾಗಿತ್ತು. ಪ್ರಧಾನ ಮಂತ್ರಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು 1974ರ “ಇಂಡೋ-ಶ್ರೀಲಂಕಾದ ಕಡಲ ಒಪ್ಪಂದ”(“Indo-Sri Lankan Maritime Agreement) ಅಡಿಯಲ್ಲಿ ದ್ವೀಪ ರಾಷ್ಟ್ರಕ್ಕೆ ಬಿಟ್ಟುಕೊಡಲು ಒಪ್ಪಿಕೊಂಡಿತು. ಕಚ್ಚತೀವು ಶ್ರೀಲಂಕಾದ ಭಾಗವಾಗಿದೆ.

ಈ ಬಗ್ಗೆ ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು. ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವಾಲಯವು ವಿವರಿಸಿತ್ತು. ಜತೆಗೆ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎನ್ನುವುದು ಬಯಲಾಗುತ್ತದೆ. ಆದ್ದರಿಂದ ಬಿಜೆಪಿಗರು ಈಗ ಹೇಳುವಂತೆ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಸೇರಿಸುವುದು ಸುಲಭವಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...