Homeಮುಖಪುಟಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

ಬಿಜೆಪಿ ಹೇಳುವಂತೆ ಕಚ್ಚತೀವು ದ್ವೀಪ ಮರಳಿ ಪಡೆಯಲು ಸಾಧ್ಯವೇ?

- Advertisement -
- Advertisement -

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಮರಳಿ ಪಡೆಯಲು ಭಾರತ ಶ್ರಮಿಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲಿ ಶ್ರೀಲಂಕಾ ವಿದೇಶಾಂಗ ಸಚಿವಾಲಯವು ದ್ವೀಪವು ತನ್ನ ನಿಯಂತ್ರಣದಲ್ಲಿದೆ ಎಂದು ಸಮರ್ಥಿಸಿಕೊಂಡಿದೆ, ಆದರೆ ಬಿಜೆಪಿ ಹೇಳುವಂತೆ ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಪಡೆಯಲು ಸಾಧ್ಯವಿಲ್ಲ ಎನ್ನುವುದು ವಾಸ್ತವವಾಗಿದೆ.

ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಅವರು ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ, ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು. ರಾಷ್ಟ್ರೀಯ ಗಡಿಗಳನ್ನು ಕಾಯ್ದುಕೊಳ್ಳುವ ಕುರಿತು ಜೀವನ್ ತೊಂಡಮಾನ್ ಅವರ ಹೇಳಿಕೆಗಳ ಬೆನ್ನಲ್ಲಿ ಶ್ರೀಲಂಕಾದ ಮತ್ತೋರ್ವ ಸಚಿವರು ಇಚ್ಛೆಯಂತೆ ಇದನ್ನು ಬದಲಾಯಿಸಲಾಗುವುದಿಲ್ಲ ಎಂದು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕಚ್ಚತೀವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಔಪಚಾರಿಕವಾಗಿ ಗುರುತಿಸಲ್ಪಟ್ಟಿದೆ. ಗಡಿಯನ್ನು ನಿರ್ಧರಿಸಿದ ನಂತರ ಸರ್ಕಾರದ ಬದಲಾವಣೆಯ ಕಾರಣಕ್ಕಾಗಿ ಯಾರೂ ಕೂಡ ಭೂಭಾಗದ ಬದಲಾವಣೆಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಅಣ್ಣಾಮಲೈ ಹೊರತುಪಡಿಸಿ, ಮತ್ತೊಬ್ಬ ಬಿಜೆಪಿ ನಾಯಕ ಕೂಡ ಕಚ್ಚತೀವು ದ್ವೀಪದಲ್ಲಿ ಬಿಜೆಪಿ ನಾಯಕತ್ವ ಪ್ರಮುಖ ಘೋಷಣೆ ಮಾಡಲಿದೆ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಉಲ್ಭಣಗೊಂಡ ಈ ವಿವಾದವು ನೆರೆಯ ರಾಷ್ಟ್ರದೊಂದಿಗೆ ಭಾರತದ ಸಂಬಂಧವನ್ನು “ಹಾನಿ”ಗೊಳಿಸುವುದೇ ಎಂಬ ಪ್ರಶ್ನೆ? ಉದ್ಭವಿಸಿದೆ. ಇದಕ್ಕೆ ಮಾಜಿ ರಾಜತಾಂತ್ರಿಕ ಕೆಸಿ ಸಿಂಗ್ ಪ್ರತಿಕ್ರಿಯಿಸಿ ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಶಂಕರ್‌ ಅವರ ಹೇಳಿಕೆ ಭಾರತವು ದೇಶೀಯ ರಾಜಕೀಯದಲ್ಲಿ ಕಚ್ಚತೀವು ವಿಚಾರವನ್ನು ಮುನ್ನೆಲೆಗೆ ತರವುದರಿಂದ ಶ್ರೀಲಂಕಾದೊಂದಿಗಿನ ಭಾರತದ ರಾಜತಾಂತ್ರಿಕ ಸಂಬಂಧವನ್ನು ಹದಗೆಡಿಸುತ್ತದೆ. ಜೈಶಂಕರ್‌ ಅವರಂತಹ ಅನುಭವಿ ರಾಜಕಾರಣಿ ಈ ರಿತಿ ಪ್ರತಿಕ್ರಿಯಿಸುವುದು ಅವರ ಇಮೇಜ್‌ನ್ನು ಹಾನಿಗೊಳಿಸುತ್ತದೆ. ಇದು ಶ್ರೀಲಂಕಾವನ್ನು ಮಾಲ್ಡೀವ್ಸ್‌ನಂತೆ ಚೀನಾದ ತೆಕ್ಕೆಗೆ ತಳ್ಳಬಹುದು, ಆದರೆ ದಕ್ಷಿಣದಲ್ಲಿ ಬಿಜೆಪಿಗೆ ಸ್ವಲ್ಪ ಲಾಭವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಭಾರತದ ರಾಮೇಶ್ವರಂ ಮತ್ತು ಶ್ರೀಲಂಕಾ ನಡುವಿನ ಪಾಕ್ ಜಲಸಂಧಿಯಲ್ಲಿ 285 ಎಕರೆ ವಿಸ್ತಾರವಾದ ಕಚ್ಚತೀವು ದ್ವೀಪವು ಭಾರತದ ಕರಾವಳಿಯಿಂದ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ. ಕಚ್ಚತೀವು ಬ್ರಿಟಿಷರ ಕಾಲದಿಂದಲೂ ಭಾರತ ಮತ್ತು ಶ್ರೀಲಂಕಾ ನಡುವೆ ವಿವಾದಿತ ಪ್ರದೇಶವಾಗಿತ್ತು. ಪ್ರಧಾನ ಮಂತ್ರಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು 1974ರ “ಇಂಡೋ-ಶ್ರೀಲಂಕಾದ ಕಡಲ ಒಪ್ಪಂದ”(“Indo-Sri Lankan Maritime Agreement) ಅಡಿಯಲ್ಲಿ ದ್ವೀಪ ರಾಷ್ಟ್ರಕ್ಕೆ ಬಿಟ್ಟುಕೊಡಲು ಒಪ್ಪಿಕೊಂಡಿತು. ಕಚ್ಚತೀವು ಶ್ರೀಲಂಕಾದ ಭಾಗವಾಗಿದೆ.

ಈ ಬಗ್ಗೆ ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು. ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವಾಲಯವು ವಿವರಿಸಿತ್ತು. ಜತೆಗೆ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎನ್ನುವುದು ಬಯಲಾಗುತ್ತದೆ. ಆದ್ದರಿಂದ ಬಿಜೆಪಿಗರು ಈಗ ಹೇಳುವಂತೆ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಸೇರಿಸುವುದು ಸುಲಭವಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...