Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...