Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...