Homeಮುಖಪುಟವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

ವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

- Advertisement -
- Advertisement -

ಕಳೆದ ವರ್ಷ ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿರುವ ಬಿಟ್ಟು ಭಜರಂಗಿ, ವ್ಯಕ್ತಿಯೊಬ್ಬರಿಗೆ ಅಮಾನವೀಯ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ಬಿಟ್ಟು ಭಜರಂಗಿಯ ದುಷ್ಕೃತ್ಯಕ್ಕೆ ಆತನ ಸ್ವಯಂ ಘೋಷಿತ ಗೋರಕ್ಷಕ ಗುಂಪಿನ ಇತರ ಸದಸ್ಯರು ಸಾಥ್ ನೀಡಿದ್ದಾರೆ. ರಸ್ತೆಯಲ್ಲೇ ಹಲ್ಲೆ ನಡೆಯುತ್ತಿದ್ಧರೂ ಪೊಲೀಸ್ ಸಿಬ್ಬಂದಿಯೊಬ್ಬರು ಮೂಕ ಪ್ರೇಕ್ಷರಾಗಿ ನಿಂತು ನೋಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಹಲ್ಲೆಯ ವಿಡಿಯೋ ಏಪ್ರಿಲ್ 1ನೇ ತಾರೀಖಿನದ್ದಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶಾಮು ಎಂದು ಗುರುತಿಸಲಾಗಿದ್ದು, ಫರಿದಾಬಾದ್‌ನ ಸರೂರ್‌ಪುರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಮು ಇಬ್ಬರು ಹುಡುಗಿಯರನ್ನು ಚಾಕೋಲೇಟ್ ಆಸೆ ತೋರಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಮುನ ಮನೆಗೆ ನುಗ್ಗಿ ಆತನನ್ನು ಹಿಡಿದು ತಂದಿದ್ದಾರೆ.

ಈ ವಿಷಯ ಬಿಟ್ಟು ಭಜರಂಗಿಯ ‘ಗೋರಕ್ಷ ಭಜರಂಗಿ ಪೋರ್ಸ್‌’ಗೆ ಗೊತ್ತಾಗಿದೆ. ಸ್ಥಳಕ್ಕೆ ಬಂದ ತಂಡ ಶಾಮುವನ್ನು ಭಜರಂಗಿಯ ಮನೆ ಫರಿದಾಬಾದ್‌ನ ಸಂಜಯ್ ಎನ್‌ಕ್ಲೇವ್‌ಗೆ ಕರೆದುಕೊಂಡು ಹೋಗಿದ್ದಾರೆ. ಬಿಟ್ಟು ತನ್ನ ಮನೆ ಮುಂದೆ ಶಾಮುಗೆ ಬೆತ್ತದಿಂದ ಥಳಿಸಿದ್ದಾನೆ. ಆತನ ಸಹಚರರು ಸಾಥ್ ನೀಡಿದ್ದಾರೆ.

ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ನಿಂತು ದುಷ್ಕೃತ್ಯವನ್ನು ನೋಡಿದ್ದಾರೆ. ತಡೆಯುವ ಪ್ರಯತ್ನ ಮಾಡಿಲ್ಲ. ಆ ಪೊಲೀಸ್ ಸಿಬ್ಬಂದಿ ಬಿಟ್ಟು ಭಜರಂಗಿಯ ಭದ್ರತೆಗೆ ನಿಯೋಜಿಸಿದವರು ಎಂದು ಹೇಳಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸರನ್ ಪೊಲೀಸ್ ಠಾಣೆಯ ಅಧಿಕಾರಿ, ವ್ಯಕ್ತಿಯೊಬ್ಬರಿಗೆ ಥಳಿಸಿರುವ ವಿಡಿಯೋವನ್ನು ನಾವು ಗಮನಿಸಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡಿದರೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಅವರು ದೂರು ನೀಡದಿದ್ದರೂ, ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಹರಿಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದಿತ್ತು. ನಂತರ ಗುರುಗ್ರಾಮ್ ಮತ್ತು ಬಾದ್‌ಶಹಪುರ ಸೇರಿದಂತೆ ಇತರ ಪ್ರದೇಶಗಳಿಗೂ ಹಿಂಸಾಚಾರ ಹರಡಿತ್ತು. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದರು ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದರು. ಮಸೀದಿಗೆ ಬೆಂಕಿ ಹಚ್ಚಲಾಗಿತ್ತು. ಮೃತರಲ್ಲಿ ಒಬ್ಬರು ಧರ್ಮಗುರುವೂ ಸೇರಿದ್ದರು.

ಇದನ್ನೂ ಓದಿ : ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...