Homeಮುಖಪುಟಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಹೇಳಿದ್ದು, ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 15ರವರೆಗೆ ಕೇಜ್ರಿವಾಲ್ ಜೈಲಿನಲ್ಲಿರಬೇಕಾಗಿರುವ ತಿಹಾರ್ ಜೈಲಿನ ಆಡಳಿತವು ಈ ಆಪಾದನೆಯನ್ನು ತಳ್ಳಿ ಹಾಕಿದೆ. ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಕೇಜ್ರಿವಾಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರು ಮಧುಮೇಹದಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದಿನದ 24 ಗಂಟೆಗಳ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. ಅವರ ಬಂಧನದಿಂದ ಕೇಜ್ರಿವಾಲ್ ಅವರ ತೂಕ 4.5 ಕೆಜಿಯಷ್ಟು ಕಡಿಮೆಯಾಗಿದೆ. ಇದು ತುಂಬಾ ಆತಂಕಕಾರಿಯಾಗಿದೆ. ಬಿಜೆಪಿ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿ ಇರಿಸಿ ಅವರ ಆರೋಗ್ಯವನ್ನು ಅಪಾಯದಲ್ಲಿರಿಸಿದೆ ಎಂದು ಆರೋಪಿಸಿದ್ದಾರೆ.

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿಗೆ ಮನೆ ಅಡುಗೆ ಸ್ವೀಕರಿಸಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗಿತ್ತು. ಅವರ ಶುಗರ್ ಲೆವೆಲ್ ಏರುಪೇರಾಗುತ್ತಿದ್ದರಿಂದ ತಿಹಾರ್ ಜೈಲಿನ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಹಾರ್ ಜೈಲಿನ ಮೂಲಗಳ ಪ್ರಕಾರ, ಅವರನ್ನು ಜೈಲಿಗೆ ಕರೆ ತಂದಾಗ ಅವರ ತೂಕ 55 ಕೆಜಿ ಇತ್ತು ಹಾಗೂ ಅವರ ತೂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣವು ಸಾಮಾನ್ಯವಾಗಿದ್ದು, ಅವರು ಪ್ರತಿ ದಿನ ಬೆಳಗ್ಗೆ ಅವರು ಯೋಗ ಮತ್ತು ಧ್ಯಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ನಿವಾಸದಲ್ಲಿ ಹಲವು ಗಂಟೆಗಳ ವಿಚಾರಣೆಯ ನಂತರ ಮಾರ್ಚ್ 21 ರಾತ್ರಿ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ರಾತ್ರಿ ಕೇಜ್ರಿವಾಲ್ ಅವರು ತಮ್ಮ ಐಫೋನ್ ಸ್ವಿಚ್ ಆಫ್ ಮಾಡಿ ಪಾಸ್ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದರು ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು. ಫೋನ್ ಅನ್ ಲಾಕ್ ಮಾಡಲು ಜಾರಿ ನಿರ್ದೇಶನಾಲಯ ಆ್ಯಪಲ್ ಸಂಸ್ಥೆಯನ್ನು ಸಂಪರ್ಕಿಸಿದೆ, ಆದರೆ ಫೋನ್ ಅನ್ ಲಾಕ್ ಮಾಡಲು ಆ್ಯಪಲ್ ಸಂಸ್ಥೆ ನಿರಾಕರಿಸಿದೆ ಎಂದು ಇಡಿ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...