Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಟಿಕೆಟ್‌ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಜಲಗಾಂವ್‌ನ ಬಿಜೆಪಿ ಸಂಸದ ಉನ್ಮೇಶ್ ಪಾಟೀಲ್ ಅವರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಶಿವಸೇನೆ (ಯುಬಿಟಿ) ಬಣವನ್ನು ಸೇರ್ಪಡೆಗೊಂಡಿದ್ದಾರೆ.

ಜಲಗಾಂವ್‌ನ ಹಾಲಿ ಬಿಜೆಪಿ ಸಂಸದ ಉನ್ಮೇಶ್ ಪಾಟೀಲ್ ಅವರು ಬುಧವಾರ ಶಿವಸೇನಾ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಕ್ಷದ ಮುಖಂಡರಾದ ಸಂಜಯ್ ರಾವುತ್ ಮತ್ತು ಅರವಿಂದ್ ಸಾವಂತ್ ಅವರ ಸಮ್ಮುಖದಲ್ಲಿ ಶಿವಸೇನೆ ಉದ್ಧವ್‌ ಬಣಕ್ಕೆ ಸೇರ್ಪಡೆಗೊಂಡಿದ್ದಾರೆ.

ಪಾಟೀಲ್ ಅವರನ್ನು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ ಮಾತೋಶ್ರೀ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಪಾಟೀಲ್ ಸೇರ್ಪಡೆ ಬಳಿಕ ಸಂಜಯ್ ರಾವುತ್ ಮಾತೋಶ್ರೀಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಜಲಗಾಂವ್‌ನಿಂದ ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಎನ್‌ಡಿಎ ಮೈತ್ರಿಕೂಟದಿಂದ ಟಿಕೆಟ್‌ ಸಿಗದ ಹಿನ್ನೆಲೆ ಉನ್ಮೇಶ್ ಪಾಟೀಲ್ ಶಿವಸೇನೆ ಉದ್ಧವ್‌ ಬಣದ ಸಂಜಯ್‌ ರಾವತ್‌ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದರು. ಜಲಗಾಂವ್‌ನಿಂದ ಮಹಾ ವಿಕಾಸ್ ಅಘಾಡಿ ಮೈತ್ರಿಯ ಅಂದರೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಉನ್ಮೇಶ್ ಪಾಟೀಲ್ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಉನ್ಮೇಶ್ ಪಾಟೀಲ್ 2019ರಲ್ಲಿ ಜಲಗಾಂವ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವನ್ನು ಕಂಡಿದ್ದರು. ಅವರು ಒಟ್ಟು 7.13 ಲಕ್ಷ ಮತಗಳನ್ನು ಪಡೆದಿದ್ದರು. ಆದರೆ 2024ರ ಲೋಕಸಭೆ ಚುನಾವಣೆಗೆ ಉನ್ಮೇಶ್ ಪಾಟೀಲ್‌ಗೆ ಟಿಕೆಟ್‌ ನೀಡದೆ ಸ್ಮಿತಾ ವಾಘ್ ಅವರಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿತ್ತು. ಇದರಿಂದ ಉನ್ಮೇಶ್ ಪಾಟೀಲ್‌ ಅಸಮಾಧಾನಗೊಂಡಿದ್ದು, ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರು.

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಟಿಕೆಟ್‌ ಹಂಚಿಕೆ ಬಿಕ್ಕಟ್ಟು ಉದ್ಭವಿಸಿತ್ತು, ಬಿಜೆಪಿ, ಶಿವಸೇನಾ ಶಿಂಧೆ ಬಣ, ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಡುವೆ ಟಿಕೆಟ್‌ಗೆ ಪೈಪೋಟಿ ನಡೆದಿತ್ತು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುದ್ದು ಮಹಾರಾಷ್ಟ್ರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...