Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...