Homeಅಂತರಾಷ್ಟ್ರೀಯಗಾಝಾದಲ್ಲಿ 'ವರ್ಲ್ಡ್ ಸೆಂಟ್ರಲ್ ಕಿಚನ್‌' ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

- Advertisement -
- Advertisement -

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್ ತನ್ನ 7 ಸಿಬ್ಬಂದಿಗಳ ಸಾವಿನ ನಂತರ ಗಾಝಾದಲ್ಲಿ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅವರು ಯುದ್ಧದ ಮಧ್ಯದಲ್ಲಿ ಹಸಿದ ನಾಗರಿಕರಿಗೆ ಆಹಾರವನ್ನು ಒದಗಿಸುತ್ತಿದ್ದರು. ಅವರು ಧೈರ್ಯಶಾಲಿ ಮತ್ತು ನಿಸ್ವಾರ್ಥರಾಗಿದ್ದರು. ಅವರ ಸಾವು ಒಂದು ದುರಂತವಾಗಿದೆ ಎಂದು ಹೇಳಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌,  2010ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದ ಬಾಣಸಿಗ ಜೋಸ್ ಆಂಡ್ರೆಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಸಾವಿನ ಬಗ್ಗೆ ಅವರು ಆಘಾತವನ್ನು ವ್ಯಕ್ತಪಡಿಸಿದ್ದು, ಜಗತ್ತಿನಾದ್ಯಂತ ಹಸಿದ ಜನರಿಗೆ ಆಹಾರವನ್ನು ನೀಡಲು ಅವರ ಪಟ್ಟುಬಿಡದ ಮತ್ತು ವೀರೋಚಿತ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನೆರವು ಕಾರ್ಯಕರ್ತರ ವಾಹನಗಳ ಮೇಲೆ ವೈಮಾನಿಕ ದಾಳಿ ಏಕೆ ನಡೆದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವ ಬಗ್ಗೆ ಇಸ್ರೇಲ್ ವಾಗ್ದಾನ ಮಾಡಿದೆ. ಆ ತನಿಖೆಯು ತ್ವರಿತವಾಗಿರಬೇಕು, ಅದು ಹೊಣೆಗಾರಿಕೆಯನ್ನು ಹೊಂದಬೇಕು ಮತ್ತು ಅದರ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಜೋ ಬಿಡೆನ್‌ ಆಗ್ರಹಿಸಿದ್ದಾರೆ.

ಡೀರ್ ಅಲ್-ಬಾಲಾಹ್ ಗೋದಾಮಿನಿಂದ ಹೊರಡುತ್ತಿದ್ದಾಗ ಕಿಚನ್‌ ಸಿಬ್ಬಂದಿಗಳ ವಾಹನದ ಮೇಲೆ ಮೈಮಾನಿಕ ದಾಳಿ ನಡೆಸಲಾಗಿದೆ. ಸಮುದ್ರದ ಮೂಲಕ ಗಾಝಾಕ್ಕೆ ತಂದ 100 ಟನ್‌ಗಳಿಗಿಂತ ಹೆಚ್ಚು ಮಾನವೀಯ ಆಹಾರದ ಸಾಮಾಗ್ರಿಗಳನ್ನು ಅವರು ರವಾನೆ ಮಾಡುವಾಗ ಘಟನೆ ನಡೆದಿತ್ತು. ಇಸ್ರೇಲ್‌ ಮಿಲಿಟರಿಯೊಂದಿಗೆ ನಾವು ಸಂಪರ್ಕದಲ್ಲಿದ್ದೆವು,  ವರ್ಲ್ಡ್ ಸೆಂಟ್ರಲ್ ಕಿಚನ್ ಲೋಗೋವನ್ನು ಹೊಂದಿರುವ ಎರಡು ಕಾರುಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು. ಕೊಲ್ಲಲ್ಪಟ್ಟವರಲ್ಲಿ ಯು.ಎಸ್ ಮತ್ತು ಕೆನಡಾದ ದ್ವಿ ಪೌರತ್ವ ಹೊಂದಿದ್ದ ಪ್ರಜೆ ಜೇಕಬ್ ಫ್ಲಿಕಿಂಗ್ರ್(33) ಸೇರಿದ್ದಾರೆ ಎಂದು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ನಡೆದ ವೈಮಾನಿಕ ದಾಳಿಯು ಉದ್ದೇಶಪೂರ್ವಕವಲ್ಲ ಮತ್ತು ದುರಂತ ಎಂದು ಹೇಳಿದೆ.

ಶ್ವೇತಭವನದ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಬಿಡೆನ್ ಆಡಳಿತದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲಿಗಳು ಮಾನವೀಯ ನೆರವು ನೀಡುತ್ತಿದ್ದವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಸಿಬ್ಬಂದಿಗಳ ಸಾವುಗಳು ದೊಡ್ಡ ಸಮಸ್ಯೆಯ ಸಾಂಕೇತಿಕವಾಗಿದೆ ಮತ್ತು ಗಾಝಾದಲ್ಲಿ ಸಹಾಯ ವಿತರಣೆ ಏಕೆ ತುಂಬಾ ಸವಾಲಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಳೆದ ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 200ಕ್ಕೂ ಹೆಚ್ಚು ಮಾನವೀಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಿರ್ಬಿ ಹೇಳಿದ್ದಾರೆ.

ಗಾಝಾದಲ್ಲಿ ಮಾನವೀಯ ನೆರವನ್ನು ವಿತರಿಸುವುದು ತುಂಬಾ ಕಷ್ಟಕರವಾಗಲು ಇದು ಒಂದು ಪ್ರಮುಖ ಕಾರಣವಾಗಿದೆ. ಏಕೆಂದರೆ ನಾಗರಿಕರಿಗೆ ಅಗತ್ಯವಿರುವ ಸಹಾಯವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಹಾಯ ಕಾರ್ಯಕರ್ತರನ್ನು ರಕ್ಷಿಸಲು ಇಸ್ರೇಲ್ ಕ್ರಮ ಕೈಗೊಂಡಿಲ್ಲ ಎಂದು ಬೈಡನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಇಸ್ರೇಲ್ ಅಮಾಯಕ ಗಾಝಾದ ನಾಗರಿಕರನ್ನು ರಕ್ಷಿಸಲು ಏನನ್ನೂ ಮಾಡಿಲ್ಲ. ನಾಗರಿಕ ಸಾವುನೋವುಗಳನ್ನು ತಪ್ಪಿಸಲು ಯುನೈಟೆಡ್ ಸ್ಟೇಟ್ಸ್ ಇಸ್ರೇಲ್‌ನ್ನು ಪದೇ ಪದೇ ಒತ್ತಾಯಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿರುವ ಪ್ಯಾಲೆಸ್ತೀನ್‌ ನಾಗರಿಕರಿಗೆ ಲಭ್ಯವಿರುವ ಎಲ್ಲಾ ವಿಧಾನಗಳ ಮೂಲಕ ಮಾನವೀಯ ನೆರವು ನೀಡಲು ಯುನೈಟೆಡ್ ಸ್ಟೇಟ್ಸ್ ತನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಬಿಡೆನ್ ಹೇಳಿದ್ದಾರೆ. ಆ ನೆರವನ್ನು ಸುಗಮಗೊಳಿಸಲು ಹೆಚ್ಚಿನ ಕ್ರಮಕ್ಕೆ ಇಸ್ರೇಲ್‌ಗೆ ಒತ್ತಡ ಹೇರುವುದಾಗಿ ಬೈಡನ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ ಎಂದು ಬೈಡನ್‌ ವಿರುದ್ಧ ಆಕ್ರೋಶ:

ಗಾಝಾ ವಿರುದ್ಧ ಇಸ್ರೇಲ್‌ ಅ.7ರಂದು ಯುದ್ಧ ಘೋಷಿಸಿದಾಗ ಅಮೆರಿಕ ಇಸ್ರೇಲ್‌ಗೆ ವ್ಯಾಪಕ ಬೆಂಬಲವನ್ನು ವ್ಯಕ್ತಪಡಿಸಿತ್ತು. ಇದರ ಜೊತೆಗೆ ಇಸ್ರೇಲ್‌ಗೆ ಅಮೆರಿಕ ಯುದ್ಧ ವಿಮಾನಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿತ್ತು. ಇದೀಗ ಬಾಣಸಿಗರ ಹತ್ಯೆ ಬಗ್ಗೆ ಬೈಡನ್‌ಗೆ ಅಮೆರಿಕನ್ನರು ತರಾಟೆಗೆ ತೆಗೆದುಕೊಂಡಿದ್ದು, ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದಲ್ಲದೆ ಘಟನೆ ಬಗ್ಗೆ ಉತ್ತರಿಸಲು ಬೈಡನ್‌ 24 ಗಂಟೆಗಳ ಕಾಲಾವಕಾಶವನ್ನು ತೆಗೆದುಕೊಂಡಿದ್ದಾರೆ ಎಂದು ಹಲವುರು ಎಕ್ಸ್‌ನಲ್ಲಿ ಬೈಡನ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...