Homeಫ್ಯಾಕ್ಟ್‌ಚೆಕ್Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಎಕ್ಸ್‌ ಬಳೆದಾರರು ಈ ಕುರಿತ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿ, ಇಲ್ಲಿ

ಫ್ಯಾಕ್ಟ್‌ಚೆಕ್ : ಇಬ್ಬರು ಸಂಪುಟ ಸಚಿವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬ ಸುದ್ದಿಯ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ‘Twexport‘ಗೂಗಲ್‌ ಕ್ರೋಮ್ ಎಕ್ಸ್‌ಟೆಂಶನ್ ಟೂಲ್ ಬಳಸಿ ನಾವು ಸಚಿವ ಭಾರಧ್ವಾಜ್ ಅವರು ಫಾಲೋ ಮಾಡುತ್ತಿರುವ ವ್ಯಕ್ತಿಗಳ ಪಟ್ಟಿ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಈ ಕುರಿತು ಸಚಿವ ಸೌರಭ್ ಭಾರದ್ವಾಜ್ ಅವರು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬುವುದು ಸುಳ್ಳು ಸುದ್ದಿ. ನಾವಿಬ್ಬರು ಪರಸ್ಪರ ಫಾಲೋ ಮಾಡುತ್ತಿದ್ದೇವೆ” ಎಂದಿದ್ದಾರೆ.

Phantombuster‘ಮತ್ತೊಂದು ಟೂಲ್ ಬಳಸಿ ನಾವು ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿರುವವರ ಪಟ್ಟಿ ಪರಿಶೀಲಿಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಆಮ್‌ ಆದ್ಮಿ ಪಕ್ಷದ ಮುಖ್ಯ ಮಾಧ್ಯಮ ಸಂಯೋಜಕರಾಗಿರುವ ವಿಕಾಸ್ ಯೋಗಿ ಅವರು ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಇಬ್ಬರು ಸಚಿವರಾದ ಅತಿಶಿ ಮತ್ತು ಭಾರದ್ವಾಜ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಬಿಜೆಪಿ ಐಟಿ ಸೆಲ್‌ ಸುಳ್ಳು ಸುದ್ದಿಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ನಾವು ವಿವಿಧ ಟೂಲ್‌ಗಳನ್ನು ಬಳಸಿ ನಡೆಸಿದ ಪರಿಶೀಲನೆ ಮತ್ತು ಆಮ್‌ ಆದ್ಮಿ ಪಕ್ಷದ ಅಧಿಕೃತ ಮೂಲಗಳ ಪ್ರಕಾರ ದೆಹಲಿ ಸರ್ಕಾರ ಸಚಿವ ಸಂಪುಟದ ಸಚಿವರು ಹಾಗೂ ಆಪ್ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...