Homeಮುಖಪುಟಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ...

ಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯ ಹೊಸ್ತಿಲ್ಲಲ್ಲೇ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದ (ರಾಮ್‌ವಿಲಾಸ್) 22 ನಾಯಕರು ರಾಜೀನಾಮೆ ನೀಡಿದ್ದಾರೆ. ಒಬ್ಬ ನಾಯಕ ಪಾಸ್ವಾನ್ ಅವರು ‘ಹಣಕ್ಕಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಏಕಕಾಲಕ್ಕೆ ರಾಜೀನಾಮೆ ನೀಡಿರುವ ಎಲ್‌ಜಿಪಿ ನಾಯಕರು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಮಹಾಘಟಬಂಧನ್ ಅನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಪಾಸ್ವಾನ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದವರಲ್ಲಿ ಒಬ್ಬರಾಗಿರುವ ಮಾಜಿ ಸಂಸದ ರೇಣು ಕುಶ್ವಾಹಾ ಅವರು, “ಟಿಕೆಟ್ ಹಂಚಿಕೆಯ ವಿಷಯಕ್ಕೆ ಬಂದಾಗ, ಹೊರಗಿನವರಿಗಿಂತ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

“ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ಸಮರ್ಥರು ಇಲ್ಲ ಎಂದಲ್ಲವೇ? ಹಾಗಾದರೆ, ನಾವೆಲ್ಲ ದುಡಿದು ನಿಮ್ಮನ್ನು ನಾಯಕರನ್ನಾಗಿ ಮಾಡುವ ಕಾರ್ಮಿಕರಾ? ನಾವು ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ” ಎಂದು ಕುಶ್ವಾಹಾ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಎಲ್‌ಜಿಪಿಯಿಂದ ನಿರ್ಗಮಿಸಿದ ಮತ್ತೋರ್ವ ನಾಯಕ, ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಸತೀಶ್ ಕುಮಾರ್ ಅವರು “ಪಾಸ್ವಾನ್ ಅವರ ನಿಲುವಿನಿಂದ ಪಕ್ಷದ ಕಾರ್ಯಕರ್ತರು ‘ದಿಗ್ಭ್ರಮೆಗೊಂಡಿದ್ದಾರೆ’ ಎಂದಿದ್ದಾರೆ.

“ಚಿರಾಗ್ ಪಾಸ್ವಾನ್‌ಗೆ ನಮಸ್ಕಾರ” ಎಂದು ಹಗಲಿರುಳು ಘೋಷಣೆಗಳನ್ನು ಕೂಗುತ್ತಿದ್ದ ಮತ್ತು ಹೊಸ ಬಿಹಾರಕ್ಕಾಗಿ ಆಶಿಸಿದ ಜನರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಧ್ವಂಸ ಮಾಡಲಾಗಿದೆ. ಈಗ ದೇಶವನ್ನು ಉಳಿಸಲು, ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕಾಗಿದೆ. ನಾವು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ” ಎಂದು ಕುಮಾರ್ ಹೇಳಿದ್ದಾರೆ.

ಎಲ್‌ಜೆಪಿಯ ಕಾರ್ಯದರ್ಶಿ ರವೀಂದ್ರ ಸಿಂಗ್ ಕೂಡ ಪಕ್ಷದ ತೊರೆದಿದ್ದು, ಪಾಸ್ವಾನ್ ‘ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

“ಅವರು (ಚಿರಾಗ್ ಪಾಸ್ವಾನ್) ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟು ಸಿಕ್ಕರೂ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಜನತೆ ಅವರಿಗೆ ಉತ್ತರ ನೀಡಲಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ಎನ್‌ಡಿಎ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ, ಎಲ್‌ಜೆಪಿ (ಪಾಸ್ವಾನ್) ಬಿಹಾರದ ಒಟ್ಟು 40 ಸ್ಥಾನಗಳ ಪೈಕಿ ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಹಾಜಿಪುರದಿಂದ ಸ್ಪರ್ಧಿಸಿದರೆ, ಅರುಣ್ ಭಾರತಿ ಜಮುಯಿಯಿಂದ, ರಾಜೇಶ್ ವರ್ಮಾ ಖಗಾರಿಯಾದಿಂದ, ಶಾಂಭವಿ ಚೌಧರಿ ಸಮಸ್ತಿಪುರದಿಂದ ಮತ್ತು ವೀಣಾ ದೇವಿ ವೈಶಾಲಿಯಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...