Homeಮುಖಪುಟಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ...

ಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ

- Advertisement -
- Advertisement -

ಲೋಕಸಭೆ ಚುನಾವಣೆಯ ಹೊಸ್ತಿಲ್ಲಲ್ಲೇ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದ (ರಾಮ್‌ವಿಲಾಸ್) 22 ನಾಯಕರು ರಾಜೀನಾಮೆ ನೀಡಿದ್ದಾರೆ. ಒಬ್ಬ ನಾಯಕ ಪಾಸ್ವಾನ್ ಅವರು ‘ಹಣಕ್ಕಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಏಕಕಾಲಕ್ಕೆ ರಾಜೀನಾಮೆ ನೀಡಿರುವ ಎಲ್‌ಜಿಪಿ ನಾಯಕರು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಮಹಾಘಟಬಂಧನ್ ಅನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಪಾಸ್ವಾನ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದವರಲ್ಲಿ ಒಬ್ಬರಾಗಿರುವ ಮಾಜಿ ಸಂಸದ ರೇಣು ಕುಶ್ವಾಹಾ ಅವರು, “ಟಿಕೆಟ್ ಹಂಚಿಕೆಯ ವಿಷಯಕ್ಕೆ ಬಂದಾಗ, ಹೊರಗಿನವರಿಗಿಂತ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

“ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ಸಮರ್ಥರು ಇಲ್ಲ ಎಂದಲ್ಲವೇ? ಹಾಗಾದರೆ, ನಾವೆಲ್ಲ ದುಡಿದು ನಿಮ್ಮನ್ನು ನಾಯಕರನ್ನಾಗಿ ಮಾಡುವ ಕಾರ್ಮಿಕರಾ? ನಾವು ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ” ಎಂದು ಕುಶ್ವಾಹಾ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಎಲ್‌ಜಿಪಿಯಿಂದ ನಿರ್ಗಮಿಸಿದ ಮತ್ತೋರ್ವ ನಾಯಕ, ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಸತೀಶ್ ಕುಮಾರ್ ಅವರು “ಪಾಸ್ವಾನ್ ಅವರ ನಿಲುವಿನಿಂದ ಪಕ್ಷದ ಕಾರ್ಯಕರ್ತರು ‘ದಿಗ್ಭ್ರಮೆಗೊಂಡಿದ್ದಾರೆ’ ಎಂದಿದ್ದಾರೆ.

“ಚಿರಾಗ್ ಪಾಸ್ವಾನ್‌ಗೆ ನಮಸ್ಕಾರ” ಎಂದು ಹಗಲಿರುಳು ಘೋಷಣೆಗಳನ್ನು ಕೂಗುತ್ತಿದ್ದ ಮತ್ತು ಹೊಸ ಬಿಹಾರಕ್ಕಾಗಿ ಆಶಿಸಿದ ಜನರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಧ್ವಂಸ ಮಾಡಲಾಗಿದೆ. ಈಗ ದೇಶವನ್ನು ಉಳಿಸಲು, ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕಾಗಿದೆ. ನಾವು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ” ಎಂದು ಕುಮಾರ್ ಹೇಳಿದ್ದಾರೆ.

ಎಲ್‌ಜೆಪಿಯ ಕಾರ್ಯದರ್ಶಿ ರವೀಂದ್ರ ಸಿಂಗ್ ಕೂಡ ಪಕ್ಷದ ತೊರೆದಿದ್ದು, ಪಾಸ್ವಾನ್ ‘ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

“ಅವರು (ಚಿರಾಗ್ ಪಾಸ್ವಾನ್) ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟು ಸಿಕ್ಕರೂ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಜನತೆ ಅವರಿಗೆ ಉತ್ತರ ನೀಡಲಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ಎನ್‌ಡಿಎ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ, ಎಲ್‌ಜೆಪಿ (ಪಾಸ್ವಾನ್) ಬಿಹಾರದ ಒಟ್ಟು 40 ಸ್ಥಾನಗಳ ಪೈಕಿ ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಹಾಜಿಪುರದಿಂದ ಸ್ಪರ್ಧಿಸಿದರೆ, ಅರುಣ್ ಭಾರತಿ ಜಮುಯಿಯಿಂದ, ರಾಜೇಶ್ ವರ್ಮಾ ಖಗಾರಿಯಾದಿಂದ, ಶಾಂಭವಿ ಚೌಧರಿ ಸಮಸ್ತಿಪುರದಿಂದ ಮತ್ತು ವೀಣಾ ದೇವಿ ವೈಶಾಲಿಯಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...