Homeಮುಖಪುಟಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

- Advertisement -
- Advertisement -

ಭಾರತದಲ್ಲಿ ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ ನೀಡಲಾಗುತ್ತಿದೆ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಉಂಟಾಗಿದೆ ಎಂದು ಫೈನಾನ್ಶಿಯಲ್ ಟೈಮ್ಸ್‌ ವರದಿಯು ಉಲ್ಲೇಖಿಸಿದೆ. ವಿರೋಧ ಪಕ್ಷಗಳ ಮೇಲಿನ ದಾಳಿ ಮತ್ತು ಲೋಕಸಭೆ ಚುನಾವಣೆಗೆ ಅದರ ಪರಿಣಾಮಗಳನ್ನು ಉಲ್ಲೇಖಿಸಿ, ನಿನ್ನೆ ಫೈನಾನ್ಶಿಯಲ್ ಟೈಮ್ಸ್‌ ಸಂಪಾದಕೀಯವನ್ನು ಬರೆದಿದ್ದು, ಅದರಲ್ಲಿ ಭಾರತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು “ಪ್ರಜಾಪ್ರಭುತ್ವದ ತಾಯಿ” ಎಂದು ಕರೆಯಬಹುದು, ಆದರೆ ದೇಶದ ಪ್ರಜಾಪ್ರಭುತ್ವವು “ಅನಾರೋಗ್ಯ”ದಲ್ಲಿದೆ ಎಂದು ಸಂಪಾದಕೀಯ ಹೇಳಿದೆ. ಇದು “ಮೋದಿಯವರ ಬಿಜೆಪಿಯ ಆಡಳಿತ” ಮತ್ತು ‘ಸ್ವಾತಂತ್ರ್ಯ ಅಭಿವ್ಯಕ್ತಿ’ ಮತ್ತು ವಿರೋಧ ಪಕ್ಷಗಳ ಮೇಲಿನ ದಾಳಿ ಅದರಲ್ಲೂ ಮೋದಿಯ ಎರಡನೇ ಅಧಿಕಾರಾವಧಿಯಲ್ಲಿ ಹೆಚ್ಚಳವಾಗಿರುವುದನ್ನು ಫೈನಾನ್ಶಿಯಲ್ ಟೈಮ್ಸ್‌ ಟೀಕಿಸಿದೆ.

ಸಾಮಾನ್ಯವಾಗಿ ತೆರಿಗೆ ಅಥವಾ ಕಾನೂನು ಅಧಿಕಾರಿಗಳಿಂದ ಕಿರುಕುಳವು ಸರ್ಕಾರದ ವಿಮರ್ಶಕರಿಗೆ ಸಾಮಾನ್ಯವಾಗಿದೆ, ಸ್ವತಂತ್ರ ಮಾಧ್ಯಮಗಳು, ಶಿಕ್ಷಣ ತಜ್ಞರು, ಅಥವಾ ನಾಗರಿಕ ಸಮಾಜದ ಗುಂಪುಗಳ ಮೇಲೆ ಈ ರೀತಿ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿಯ ಹಿಂದೂ ರಾಷ್ಟ್ರೀಯತೆಯು ಭಾರತದ ಜಾತ್ಯತೀತ ಪ್ರಜಾಪ್ರಭುತ್ವದ ಸಂಪ್ರದಾಯವನ್ನು ನಾಶಪಡಿಸಿದೆ ಎಂದು ಸಂಪಾದಕೀಯವು ಹೇಳಿದೆ.

ಚುನಾವಣೆ ಸಮೀಪಿಸುತ್ತಿರುವಂತೆ ವಿರೋಧ ಪಕ್ಷಗಳು ಮತ್ತು ರಾಜಕಾರಣಿಗಳನ್ನು ನಿಗ್ರಹಿಸಲು ಜಾರಿ ನಿರ್ದೇಶನಾಲಯಗಳ ಹೆಚ್ಚಳದ ಬಳಕೆ ಮತ್ತು ಈ ಬಗ್ಗೆ ವಿರೋಧಪಕ್ಷದ ಪ್ರಬಲ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಉಲ್ಲೇಖಿಸಿದೆ.

ಸಂಪಾದಕೀಯದಲ್ಲಿ ತನ್ನ ಬ್ಯಾಂಕ್ ಖಾತೆಗಳನ್ನು ತೆರಿಗೆ ವಿವಾದದಿಂದ ವಾರಗಳವರೆಗೆ ಸ್ಥಗಿತಗೊಳಿಸಲಾಗಿದೆ ಮತ್ತು ಪಕ್ಷವು ಪ್ರಚಾರ, ಜಾಹೀರಾತು ಮತ್ತು ಪ್ರಯಾಣಕ್ಕಾಗಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ಉಲ್ಲೇಖಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾನನಷ್ಟ ಪ್ರಕರಣ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಬಗ್ಗೆ ಕೂಡ ಉಲ್ಲೇಖಿಸಿದೆ.

ಆಡಳಿತ ಪಕ್ಷವು ವಿರೋಧ ಪಕ್ಷಗಳನ್ನು ತೊಡೆದು ಹಾಕುವ ಅಗತ್ಯವನ್ನು ನೋಡುತ್ತಿದೆ. ಬಿಜೆಪಿ ಮೂರನೇ ಬಾರಿಗೆ ಅಧಿಕಾರದೆಡೆ ದಾಪುಗಾಲಿಡುತ್ತಿದೆ ಎಂಬ ಬಗ್ಗೆ ಅಭಿಪ್ರಾಯ ಸಮೀಕ್ಷೆಗಳು ಸೂಚಿಸಿವೆ. ಇದು ಪ್ರತಿಸ್ಪರ್ಧಿಗಳು ಬಲವಾದ ಪರ್ಯಾಯವನ್ನು ಪ್ರಸ್ತುತಪಡಿಸಲು ವಿಫಲರಾಗಿದ್ದಾರೆ ಎಂದು ಅದು ಹೇಳಿದೆ. ಇಂಡಿಯಾ ಮೈತ್ರಿಕೂಟದ ಬಗ್ಗೆ ಕೂಡ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಪ್ರಪಂಚದ ಇತರ ಭಾಗಗಳಲ್ಲಿನ ಬಲವಾದ ನಾಯಕರಂತೆಯೇ ಮೋದಿ ಮತ್ತು ಅವರ ಬೆಂಬಲಿಗರು ಒಟ್ಟು ರಾಜಕೀಯ ಪ್ರಾಬಲ್ಯವನ್ನು ಸಾಧಿಸುವ ಬಯಕೆ ಹೊಂದಿದ್ದಾರೆ. ಮೋದಿಯವರ ಪ್ರಜಾಪ್ರಭುತ್ವದ ಪರವಾದ ಮಾತುಗಳು ಮತ್ತು ವಾಸ್ತವತೆಯ ನಡುವಿನ ವಿಶಾಲವಾದ ಅಂತರವನ್ನು ಉಲ್ಲೇಖಿಸಿದೆ.

ಅದಾನಿ ಗ್ರೂಪ್‌ನ ಗೌಪ್ಯ ಹೂಡಿಕೆದಾರರ ಕುರಿತು ಆಗಸ್ಟ್‌ನಲ್ಲಿ ಪ್ರಕಟವಾದ ವರದಿಯ ಪ್ರಾಥಮಿಕ ತನಿಖೆಯ ಭಾಗವಾಗಿ ಗುಜರಾತ್ ಪೊಲೀಸರು ಕಳೆದ ವರ್ಷ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರಿಗೆ ನೋಟಿಸ್‌ಗಳನ್ನು ನೀಡಿದ್ದರು ಎಂಬುದನ್ನು ಗಮನಿಸಬೇಕು. ಇಬ್ಬರೂ ಪತ್ರಕರ್ತರು ಅಂತಿಮವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...