Homeಮುಖಪುಟಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

ಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

- Advertisement -
- Advertisement -

ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಭಾರತದ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ ಮೂರು ದಿನಗಳ ನಂತರ, ಶ್ರೀಲಂಕಾ ಏಪ್ರಿಲ್ 4ರಂದು ಈ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ವಿವಾದ 50 ವರ್ಷಗಳ ಹಿಂದೆ ಪರಿಹರಿಸಿರುವುದರಿಂದ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಮಾರ್ಚ್ 31ರಿಂದ ಮೋದಿ ಅವರು ದೇಶಾದ್ಯಂತ ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಪದೇ ಪದೇ ಕಚ್ಚತೀವು ದ್ವೀಪದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಭಾರತದ ಭೂಪ್ರದೇಶವಾಗಿದ್ದು, 1974ರಲ್ಲಿ ಶ್ರೀಲಂಕಾದೊಂದಿಗೆ ಮಾಡಿಕೊಂಡಿದ್ದ ಕಡಲ ಗಡಿ ಒಪ್ಪಂದದ ವೇಳೆ ಇಂದಿರಾಗಾಂಧಿ ಅವರು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದಾರೆ. ತಮಿಳುನಾಡಿನ ಡಿಎಂಕೆ ಇದಕ್ಕೆ ಸಮ್ಮತಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದರು.

ಇದರ ಬೆನ್ನಲ್ಲಿ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಇದು 50 ವರ್ಷಗಳ ಹಿಂದೆ ಪರಿಹರಿಸಲ್ಪಟ್ಟ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಅಂತಹ ಸಮಸ್ಯೆಗಳು ಮತ್ತೆ ಉದ್ಭವಿಸುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇಫ್ತಾರ್ ಕಾರ್ಯಕ್ರಮವೊಂದರಲ್ಲಿ ಶ್ರೀಲಂಕಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೀಪದ ಬಗ್ಗೆ ಯಾವುದೇ ವಿವಾದವಿಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಆಂತರಿಕ ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ. ಅದನ್ನು ಬಿಟ್ಟರೆ ಕಚ್ಚತ್ತೀವು ವಾಪಸು ಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೊಲಂಬೊದ ಪ್ರತಿಕ್ರಿಯೆ ತುಲನಾತ್ಮಕವಾಗಿ ತಡವಾಗಿ ಬಂದಿದ್ದರೂ, ಶ್ರೀಲಂಕಾದ ಮಾಧ್ಯಮಗಳು ಕಚ್ಚತೀವು ಕುರಿತ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸಿದೆ. ಹಲವಾರು ಶ್ರೀಲಂಕಾದ ಪತ್ರಿಕೆಗಳು ಸಂಪಾದಕೀಯಗಳನ್ನು ಪ್ರಕಟಿಸಿದವು, ಇದು ಚುನಾವಣಾ ಲಾಭಕ್ಕಾಗಿ ವಿಷಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ಭಾರತೀಯ ಪ್ರಧಾನ ಮಂತ್ರಿಯನ್ನು ಟೀಕಿಸಿದೆ ಮತ್ತು ಇದು ದ್ವೀಪ ರಾಷ್ಟ್ರ ಮತ್ತು ಭಾರತದ ನಡುವಿನ ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮೀನುಗಾರರ ಸಮಸ್ಯೆಯನ್ನು ಮುಂದಿಟ್ಟು, ಬಿಜೆಪಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ. ಕಚ್ಚತೀವು ದ್ವೀಪದ ಕುರಿತ ಭಾರತದಲ್ಲಿ ಚರ್ಚೆ ಉದ್ಭವಿಸಿದಾಗ, ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಮಾತನಾಡಿ, ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಹೇಳಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...