Homeಮುಖಪುಟಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

ಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

- Advertisement -
- Advertisement -

ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಭಾರತದ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ ಮೂರು ದಿನಗಳ ನಂತರ, ಶ್ರೀಲಂಕಾ ಏಪ್ರಿಲ್ 4ರಂದು ಈ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ವಿವಾದ 50 ವರ್ಷಗಳ ಹಿಂದೆ ಪರಿಹರಿಸಿರುವುದರಿಂದ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಮಾರ್ಚ್ 31ರಿಂದ ಮೋದಿ ಅವರು ದೇಶಾದ್ಯಂತ ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಪದೇ ಪದೇ ಕಚ್ಚತೀವು ದ್ವೀಪದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಭಾರತದ ಭೂಪ್ರದೇಶವಾಗಿದ್ದು, 1974ರಲ್ಲಿ ಶ್ರೀಲಂಕಾದೊಂದಿಗೆ ಮಾಡಿಕೊಂಡಿದ್ದ ಕಡಲ ಗಡಿ ಒಪ್ಪಂದದ ವೇಳೆ ಇಂದಿರಾಗಾಂಧಿ ಅವರು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದಾರೆ. ತಮಿಳುನಾಡಿನ ಡಿಎಂಕೆ ಇದಕ್ಕೆ ಸಮ್ಮತಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದರು.

ಇದರ ಬೆನ್ನಲ್ಲಿ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಇದು 50 ವರ್ಷಗಳ ಹಿಂದೆ ಪರಿಹರಿಸಲ್ಪಟ್ಟ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಅಂತಹ ಸಮಸ್ಯೆಗಳು ಮತ್ತೆ ಉದ್ಭವಿಸುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇಫ್ತಾರ್ ಕಾರ್ಯಕ್ರಮವೊಂದರಲ್ಲಿ ಶ್ರೀಲಂಕಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೀಪದ ಬಗ್ಗೆ ಯಾವುದೇ ವಿವಾದವಿಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಆಂತರಿಕ ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ. ಅದನ್ನು ಬಿಟ್ಟರೆ ಕಚ್ಚತ್ತೀವು ವಾಪಸು ಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೊಲಂಬೊದ ಪ್ರತಿಕ್ರಿಯೆ ತುಲನಾತ್ಮಕವಾಗಿ ತಡವಾಗಿ ಬಂದಿದ್ದರೂ, ಶ್ರೀಲಂಕಾದ ಮಾಧ್ಯಮಗಳು ಕಚ್ಚತೀವು ಕುರಿತ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸಿದೆ. ಹಲವಾರು ಶ್ರೀಲಂಕಾದ ಪತ್ರಿಕೆಗಳು ಸಂಪಾದಕೀಯಗಳನ್ನು ಪ್ರಕಟಿಸಿದವು, ಇದು ಚುನಾವಣಾ ಲಾಭಕ್ಕಾಗಿ ವಿಷಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ಭಾರತೀಯ ಪ್ರಧಾನ ಮಂತ್ರಿಯನ್ನು ಟೀಕಿಸಿದೆ ಮತ್ತು ಇದು ದ್ವೀಪ ರಾಷ್ಟ್ರ ಮತ್ತು ಭಾರತದ ನಡುವಿನ ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮೀನುಗಾರರ ಸಮಸ್ಯೆಯನ್ನು ಮುಂದಿಟ್ಟು, ಬಿಜೆಪಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ. ಕಚ್ಚತೀವು ದ್ವೀಪದ ಕುರಿತ ಭಾರತದಲ್ಲಿ ಚರ್ಚೆ ಉದ್ಭವಿಸಿದಾಗ, ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಮಾತನಾಡಿ, ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಹೇಳಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...