HomeUncategorizedಪ್ರತಿದಿನ ಕ್ಷೇತ್ರದ ಜನರನ್ನು ಭೇಟಿಯಾಗಿ: ಎಎಪಿ ಶಾಸಕರಿಗೆ ಜೈಲಿನಿಂದ ಕೇಜ್ರಿವಾಲ್‌ ಸಂದೇಶ

ಪ್ರತಿದಿನ ಕ್ಷೇತ್ರದ ಜನರನ್ನು ಭೇಟಿಯಾಗಿ: ಎಎಪಿ ಶಾಸಕರಿಗೆ ಜೈಲಿನಿಂದ ಕೇಜ್ರಿವಾಲ್‌ ಸಂದೇಶ

- Advertisement -
- Advertisement -

ತಮ್ಮ ಕ್ಷೇತ್ರದ ಜನರನ್ನು ಭೇಟಿಯಾಗುವಂತೆ ಮತ್ತು ಜನರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ನೋಡಿಕೊಳ್ಳುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸಂದೇಶವನ್ನು ಕಳುಹಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಂದೇಶವನ್ನು ಓದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಶಾಸಕರಿಗೆ ಸಂದೇಶವನ್ನು ಕಳುಹಿಸಿದ್ದಾರೆ, ಸಂದೇಶದಲ್ಲಿ ನಾನು ಜೈಲಿನಲ್ಲಿರುವ ಕಾರಣ, ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಬೇಕು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಆರು ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ, ಈ ಬೆಳವಣಿಗೆ ಮಧ್ಯೆ ಪತ್ರಿಕಾಗೋಷ್ಟಿ ಹೊರಬಂದಿದ್ದು, ಸುನೀತಾ ಕೇಜ್ರಿವಾಲ್ ಅವರನ್ನು ರಾಷ್ಟ್ರ ರಾಜಧಾನಿಯ ಅವರ ನಿವಾಸದಲ್ಲಿ ಸಂಜಯ್‌ ಸಿಂಗ್‌ ಭೇಟಿಯಾಗಿದ್ದಾರೆ.

ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಅವರಿಗೆ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇತ್ತೀಚೆಗೆ ಇಂಡಿಯಾ ಮೈತ್ರಿಕೂಟದ ವತಿಯಿಂದ ದೆಹಲಿಯ ರಾಮಲೀಮಲಾ ಮೈದಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುನೀತಾ ಕೇಜ್ರಿವಾಲ್, ಕಳೆದ 75 ವರ್ಷಗಳಲ್ಲಿ ದೆಹಲಿಯ ಜನರು ಅನ್ಯಾಯವನ್ನು ಎದುರಿಸಿದ್ದಾರೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ನಾವು ದೆಹಲಿಯನ್ನು ಸಂಪೂರ್ಣ ರಾಜ್ಯವನ್ನಾಗಿ ಮಾಡುತ್ತೇವೆ. ನಿಮ್ಮ ಸ್ವಂತ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ನಿಮಗಾಗಿ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಓದುವ ಮೊದಲು, ನಾನು ನಿಮಗೆ ಒಂದು ವಿಷಯವನ್ನು ಕೇಳಲು ಬಯಸುತ್ತೇನೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಗಂಡನನ್ನು ಜೈಲಿಗೆ ಹಾಕಿದ್ದು, ಪ್ರಧಾನಿ ಮಾಡಿದ್ದು ಸರಿಯೇ? ಕೇಜ್ರಿವಾಲ್ ಅವರು ನಿಜವಾದ ದೇಶಭಕ್ತ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ನೀವು ನಂಬುತ್ತೀರಾ? ಕೇಜ್ರಿವಾಲ್ ಜೈಲಿನಲ್ಲಿದ್ದಾರೆ, ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರು ರಾಜೀನಾಮೆ ನೀಡಬೇಕೇ? ನಿಮ್ಮ ಕೇಜ್ರಿವಾಲ್ ಸಿಂಹ, ಅವರನ್ನು ಹೆಚ್ಚು ಕಾಲ ಜೈಲಿನಲ್ಲಿಡಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ…” ಎಂದು ಹೇಳಿದ್ದರು.

ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದ ಸುನೀತಾ ಕೇಜ್ರಿವಾಲ್, “ನನ್ನ ಪ್ರೀತಿಯ ಸಹೋದ್ಯೋಗಿಗಳೇ, ನಿಮ್ಮ ಮಗ, ನಿಮ್ಮ ಸಹೋದರ ಜೈಲಿನಿಂದ ಶುಭಾಶಯಗಳನ್ನು ಸ್ವೀಕರಿಸಿ. ನಾನು ನಿಮ್ಮ ಮತವನ್ನು ಕೇಳುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ನಾನು ಗೆಲ್ಲುವ ಅಥವಾ ಸೋಲುವ ಬಗ್ಗೆ ಚರ್ಚಿಸುವುದಿಲ್ಲ. ಇಂದು ನಾನು ಈ ದೇಶದ ಎಲ್ಲಾ 1.4 ಶತಕೋಟಿ ಜನರನ್ನು ಭವ್ಯ ಭಾರತವನ್ನು ನಿರ್ಮಿಸಲು ಆಹ್ವಾನಿಸುತ್ತೇನೆ ಎಂದು ಹೇಳಿದ್ದರು. ದೇವರು ಭಾರತಕ್ಕೆ ಎಲ್ಲವನ್ನೂ ಉಡುಗೊರೆಯಾಗಿ ನೀಡಿದ್ದಾನೆ. ಆದರೂ ನಾವೇಕೆ ಹಿಂದುಳಿದಿದ್ದೇವೆ? ನಾವೇಕೆ ಅನಕ್ಷರಸ್ಥರು? ನಾನು ಇಲ್ಲಿ ಜೈಲಿನಲ್ಲಿದ್ದೇನೆ, ಅಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯವಿದೆ. ನಾನು ಭಾರತ ಮಾತೆಗಾಗಿ ಯೋಚಿಸುತ್ತೇನೆ. ಭಾರತಮಾತೆ ತುಂಬಾ ದುಃಖಿತಳಾಗಿದ್ದಾಳೆ. ಭಾರತ ಮಾತೆ ನೋವಿನಲ್ಲಿದ್ದಾರೆ, ಸಂಕಟದಿಂದ ಅಳುತ್ತಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸಂದೇಶವನ್ನು ಓದಿದ್ದರು.

ಇದನ್ನು ಓದಿ: ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...